23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆಯ ವಾರ್ಷಿಕ ಮಹಾಸಭೆ

ಉಜಿರೆ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ 2024-2025 ನೇ ಸಾಲಿನ ವಾರ್ಷಿಕ ಮಹಾಸಭೆಯು ಎಸ್. ಪಿ ಆಯಿಲ್ ಮಿಲ್ ವಠಾರದಲ್ಲಿ ಡಿ. 21ರಂದು ಜರಗಿತು.

ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ಅಧ್ಯಕ್ಷತೆ ವಹಿಸಿ ಮಾತನಾಡಿ ಯುವ ಜನರು ನಾಯಕತ್ವ ವಹಿಸಿ ಸಂಘವನ್ನು ಮುಂದಕ್ಕೆ ಬೆಳೆಸಬೇಕು ಮತ್ತು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಬೇಕು ಎಂದು ಹೇಳಿದರು.

ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ರಂಜನ್ ಜಿ ಗೌಡ, ಯುವ ವೇದಿಕೆಯ ಅಧ್ಯಕ್ಷರಾದ ಅನಿಲ್ ಗೌಡ ಅಂತರ, ಮಹಿಳಾ ವೇದಿಕೆಯ ಅಧ್ಯಕ್ಷರಾದ ಅಪರ್ಣ ಶಿವಕಾಂತ ಗೌಡ ಸಭೆಯನ್ನುದ್ದೆಶಿಸಿ ಮಾತನಾಡಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಗೌಡ ಕಲ್ಲಾಜೆ ವರದಿ ವಾಚಿಸಿದರು. ಸಂಘದ ಕೋಶಾಧಿಕಾರಿ ರಾಘವೇಂದ್ರ ಗೌಡ ಪೊದುoಬಿಲ ಲೆಕ್ಕಪತ್ರ ಮಂಡನೆ ಮಾಡಿದರು.
ಯುವ ವೇದಿಕೆಯ ಕಾರ್ಯದರ್ಶಿಯಾದ ನಿರಂಜನ್ ಗೌಡ ಸುರುಳಿ, ಮಹಿಳಾ ಯುವ ವೇದಿಕೆಯ ಅಧ್ಯಕ್ಷೆ ಅನುಪಮಾ ಸತೀಶ್ ಗೌಡ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಫೆಬ್ರವರಿ 1-2026 ರಂದು ನೀರಚಿಲುಮೆಯಲ್ಲಿ ನಡೆಯಲಿರುವ ಧರ್ಮಸ್ಥಳ ಗ್ರಾಮ ಸಮಿತಿಯ ವಾಲಿಬಾಲ್ ಟೂರ್ನಮೆಂಟ್ ನ ಕಾಗದ ಬಿಡುಗಡೆ ಮಾಡಲಾಯಿತು.

ಮಮತ ಶಿವರಾಮ ಗೌಡ ಪ್ರಾರ್ಥಿಸಿದರು. ಸಹಕಾರಿಯ ನಿರ್ದೇಶಕರಾದ ಭರತ್ ಗೌಡ ಹಾನಿಬೆಟ್ಟು ಸ್ವಾಗತಿಸಿ, ಸಂಘದ ಉಪಾಧ್ಯಕ್ಷರಾದ ಸುರೇಶ್ ಗೌಡ ಕೂಡಿಗೆ ವಂದಿಸಿದರು.ಯಶೋಧ ರಾಘವೇಂದ್ರ ಗೌಡ ಪೊದುoಬಿಲ ಮತ್ತು ಸಿಬ್ಬಂದಿಯಾದ ಗೀತಾ ಚಿದಾನಂದ ಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಕ್ಕಡ ಗ್ರಾ.ಪಂ. ನ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಎ.ಕೃಷ್ಣಪ್ಪ ಪೂಜಾರಿಯವರಿಗೆ ’ಶ್ರೇಷ್ಠ ಶಿಕ್ಷಕ ಸೌರಭ ಪ್ರಶಸ್ತಿ

Suddi Udaya

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಎಸ್.ಟಿ ಮೋರ್ಚಾವತಿಯಿಂದರಾಜೇಶ್ ಎಂ.ಕೆ. ಯವರ ಮೇಲಾದ ಮಾರಣಾಂತಿಕ ಹಲ್ಲೆ ಯನ್ನು ಖಂಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತ ಸಂಘದ ಪದ ಪ್ರದಾನ

Suddi Udaya

ಸಂಸದ ಬ್ರಿಜೇಶ್ ಚೌಟ, ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya
error: Content is protected !!