ಬೆಳ್ತಂಗಡಿ: ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಕಲ್ಲೇರಿ ಶಾಖೆಯ ಪ್ರಥಮ ವರ್ಷಾಚರಣೆ ಪ್ರಯುಕ್ತ ಗ್ರಾಹಕರ ಸಮ್ಮಿಲನ ಕಾರ್ಯಕ್ರಮವು ಸಂಘದ ಅಧ್ಯಕ್ಷ ಹೆಚ್. ಪದ್ಮಗೌಡ ಅಧ್ಯಕ್ಷತೆಯಲ್ಲಿ ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಡಿ. 21ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ತಾಲೂಕು ಗೌಡರ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಪಿ. ಕುಶಾಲಪ್ಪಗೌಡ ಪೂವಾಜೆ, ಉಪ್ಪಿನಂಗಡಿ ಶ್ರೀರಾಮ ವಿದ್ಯಾಲಯದ ಅಧ್ಯಕ್ಷ ಸುನಿಲ್ ಅನಾವು, ಕರಾಯ ಶ್ರೀ ಕೃಷ್ಣ ಭಜನಾ ಮಂಡಳಿಯ ಅಧ್ಯಕ್ಷ ಜಗದೀಶ್ ಮೈರ ತನೀರುಪಂಥ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಂದ್ರ ಪ್ರಸಾದ್ ಆಗಮಿಸಿದ್ದರು.
ಸಂಘದ ನಿರ್ದೇಶಕರಾದ ಕೃಷ್ಣಪ್ಪ ಗೌಡ, ನಾರಾಯಣ ಗೌಡ, ಗೋಪಾಲಕೃಷ್ಣ ಗುಲ್ಲೋಡಿ, ಜಯಾನಂದ ಗೌಡ, ಮಾಧವ ಗೌಡ, ಯಶವಂತ ಬಿ.ಟಿ., ಸುರೇಶ ಗೌಡ ಕೌಡಂಗೆ, ಶ್ರೀನಾಥ್ ಕೆ.ಎಂ., ಉಷಾದೇವಿ, ಪುರಂದರ ಗೌಡ ನೈಮಾರು, ಭವಾನಿ ಕೆ. ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಧನಂಜಯ ಗೌಡ ಅತಿಥಿಗಳನ್ನು ಸ್ವಾಗತಿಸಿ, ಸಂಘದ ಕಲ್ಲೇರಿ ಶಾಖೆಯ ಸಲಹಾ ಸಮಿತಿಯ ಸಂಚಾಲಕ ಯುವರಾಜ್ ಅನಾರ್ ಕಾರ್ಯಕ್ರಮ ನಿರೂಪಿಸಿದರು. ಕಲ್ಲೇರಿ ಶಾಖೆಯ ಪ್ರಬಂಧಕ ನಿತೇಶ್ ಕುಮಾರ್ ಧನ್ಯವಾದವಿತ್ತರು.











