September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಸೌಹಾರ್ದ ಕೋ -ಆಪರೇಟಿವ್ ಸೊಸೈಟಿಯ ಕಲ್ಲೇರಿ ಶಾಖೆಯಲ್ಲಿ ಪ್ರಥಮ ವರ್ಷಾಚರಣೆಯ ಪ್ರಯುಕ್ತ ಗ್ರಾಹಕರ ಸಮ್ಮಿಲನ ಕಾರ್ಯಕ್ರಮ

ಬೆಳ್ತಂಗಡಿ: ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಕಲ್ಲೇರಿ ಶಾಖೆಯ ಪ್ರಥಮ ವರ್ಷಾಚರಣೆ ಪ್ರಯುಕ್ತ ಗ್ರಾಹಕರ ಸಮ್ಮಿಲನ ಕಾರ್ಯಕ್ರಮವು ಸಂಘದ ಅಧ್ಯಕ್ಷ ಹೆಚ್. ಪದ್ಮಗೌಡ ಅಧ್ಯಕ್ಷತೆಯಲ್ಲಿ ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಡಿ. 21ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ತಾಲೂಕು ಗೌಡರ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಪಿ. ಕುಶಾಲಪ್ಪಗೌಡ ಪೂವಾಜೆ, ಉಪ್ಪಿನಂಗಡಿ ಶ್ರೀರಾಮ ವಿದ್ಯಾಲಯದ ಅಧ್ಯಕ್ಷ ಸುನಿಲ್ ಅನಾವು, ಕರಾಯ ಶ್ರೀ ಕೃಷ್ಣ ಭಜನಾ ಮಂಡಳಿಯ ಅಧ್ಯಕ್ಷ ಜಗದೀಶ್ ಮೈರ ತನೀರುಪಂಥ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಂದ್ರ ಪ್ರಸಾದ್ ಆಗಮಿಸಿದ್ದರು.

ಸಂಘದ ನಿರ್ದೇಶಕರಾದ ಕೃಷ್ಣಪ್ಪ ಗೌಡ, ನಾರಾಯಣ ಗೌಡ, ಗೋಪಾಲಕೃಷ್ಣ ಗುಲ್ಲೋಡಿ, ಜಯಾನಂದ ಗೌಡ, ಮಾಧವ ಗೌಡ, ಯಶವಂತ ಬಿ.ಟಿ., ಸುರೇಶ ಗೌಡ ಕೌಡಂಗೆ, ಶ್ರೀನಾಥ್ ಕೆ.ಎಂ., ಉಷಾದೇವಿ, ಪುರಂದರ ಗೌಡ ನೈಮಾರು, ಭವಾನಿ ಕೆ. ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಧನಂಜಯ ಗೌಡ ಅತಿಥಿಗಳನ್ನು ಸ್ವಾಗತಿಸಿ, ಸಂಘದ ಕಲ್ಲೇರಿ ಶಾಖೆಯ ಸಲಹಾ ಸಮಿತಿಯ ಸಂಚಾಲಕ ಯುವರಾಜ್ ಅನಾರ್ ಕಾರ್ಯಕ್ರಮ ನಿರೂಪಿಸಿದರು. ಕಲ್ಲೇರಿ ಶಾಖೆಯ ಪ್ರಬಂಧಕ ನಿತೇಶ್ ಕುಮಾರ್ ಧನ್ಯವಾದವಿತ್ತರು.

Related posts

ಉಜಿರೆ ಎಸ್ ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಉಜಿರೆ : ಕರಿಗಂಧ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆ

Suddi Udaya

ಸೆ.3: ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ ಪಟ್ಟಾಭಿಷೇಕ ವರ್ಧಂತಿ

Suddi Udaya

ಬೀಡಿ ಕಂಟ್ರಾಕ್ಟರ್ ಮಹಮ್ಮದ್ ಶಿರ್ಲಾಲು ನಿಧನ

Suddi Udaya

ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!