July 23, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಶ್ರೀ ಧ ಮಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾ ವಿದ್ಯಾ ನಿಲಯದಲ್ಲಿ ವಿಶ್ವ ಧ್ಯಾನ ದಿನಾಚರಣೆ

ಉಜಿರೆ: ವಿಶ್ವ ಧ್ಯಾನ ದಿನದ ಅಂಗವಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯ, ಉಜಿರೆಯ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ಡಿ. 20 ರಂದು ನ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಮುಖ್ಯ ಅತಿಥಿಗಳಾಗಿ ಡಾ. ಹರೀಶ್ ಕೃಷ್ಣಸ್ವಾಮಿ ಅವರು ಧ್ಯಾನದ ಮಹತ್ವ ಹಾಗೂ ಪಂಚಕೋಶಗಳ ಮೇಲೆ ಧ್ಯಾನವು ಬೀರುವ ಪರಿಣಾಮಗಳ ಕುರಿತು ವಿವರವಾದ ಮಾಹಿತಿಯನ್ನು ನೀಡಿದರು. ಧ್ಯಾನವು ಮಾನವನ ದೈಹಿಕ, ಮಾನಸಿಕ ಮತ್ತು ಆತ್ಮೀಯ ಬೆಳವಣಿಗೆಗೆ ಅತ್ಯಂತ ಅವಶ್ಯಕವೆಂದು ತಿಳಿಸಿದರು.

ಶಾಂತಾರಾಮ್ ಪೈ ಅವರು ಈ ರೀತಿಯ ಕಾರ್ಯಕ್ರಮಗಳ ಆಯೋಜನೆ ಕುರಿತು ಸಂತೋಷ ವ್ಯಕ್ತಪಡಿಸಿ, ವಿದ್ಯಾರ್ಥಿಗಳು ಧ್ಯಾನವನ್ನು ತಮ್ಮ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ಸುಜಾತಾ ಕೆ.ಜೆ. ವಹಿಸಿ ಮಾತನಾಡಿ, ಧ್ಯಾನವು ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಆರೋಗ್ಯವನ್ನು ಕಾಪಾಡುವುದರ ಜೊತೆಗೆ ನಿತ್ಯ ಧ್ಯಾನವು ವಿದ್ಯಾರ್ಥಿಗಳ ಏಕಾಗ್ರತೆ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ತಿಳಿಸಿ ವಿದ್ಯಾರ್ಥಿಗಳನ್ನು ಧ್ಯಾನ ಅಭ್ಯಾಸಕ್ಕೆ ಪ್ರೋತ್ಸಾಹಿಸಿದರು.

ಜೀವ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿದರು. ಡಾ. ಹರ್ಷಿಣಿ ವಂದಿಸಿದರು.

Related posts

ಬೆಳ್ತಂಗಡಿ ಭಂಡಾರಿ ಸಮಾಜ ಸಂಘದ ವಾರ್ಷಿಕೋತ್ಸವ ಹಾಗೂ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಜ.25: ಕೊಕ್ಕಡ ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧ ದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

Suddi Udaya

INICET ಪ್ರವೇಶ ಪರೀಕ್ಷೆ: ಉಜಿರೆಯ ಡಾ|ಶಿವಾನಿಗೆ ದೇಶದಲ್ಲೇ 191ನೇ ರ್ಯಾಂಕ್

Suddi Udaya
error: Content is protected !!