23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆದಿಗುರು ಫ್ಯಾಷನ್ ಡಿಸೈನ್ ವಿದ್ಯಾರ್ಥಿಗಳಿಂದ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಭೇಟಿ

ಉಜಿರೆ : ಇಲ್ಲಿಯ ಆದಿಗುರು ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರದ ಒಂದು ವರ್ಷದ ಫ್ಯಾಷನ್ ಡಿಸೈನಿಂಗ್ ವಿದ್ಯಾರ್ಥಿಗಳಿಗೆ ಸಿದ್ದ ಉಡುಪು ಉದ್ಯಮ ಕ್ಷೇತ್ರದ ಬಗ್ಗೆ ತಿಳುವಳಿಕೆ ನೀಡುವ ನಿಟ್ಟಿನಲ್ಲಿ ತರಭೇತಿ ಕೇಂದ್ರದ ಮಾಲಕರಾದ ಶ್ರೀಮತಿ ಭವ್ಯಶ್ರೀ ಕೀರ್ತಿರಾಜ್ ಇವರ ಸಹಕಾರದಲ್ಲಿ ಡಿ. 19ರಂದು ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ, ಬೆಳ್ತಂಗಡಿ ಇಲ್ಲಿಗೆ ಭೇಟಿ ನೀಡಲಾಯಿತು.

ಸಿರಿ ಗ್ರಾಮೋದ್ಯೋಗ ಸಂಸ್ಥೆಯು, ಆಧುನಿಕ ಯಂತ್ರೋಪಕರಣಗಳು ಮತ್ತು ಕಾರ್ಮಿಕರ ಅರೋಗ್ಯ ಹಾಗೂ ಸುರಕ್ಷತೆಯ ಬಗ್ಗೆ ಕಾಳಜಿ ಹೊಂದಿರುವ ಹಾಗೂ ಗ್ರಾಮೀಣ ಮಹಿಳೆಯರಿಗೆ ಅತ್ಯಧಿಕ ಉದ್ಯೋಗಾವಕಾಶ ನೀಡಿದ ಸುಸಜ್ಜಿತ ಸಂಸ್ಥೆಯಾಗಿದೆ.
ಸಂಸ್ಥೆಯ ಪ್ರತಿಯೊಂದು ಯಂತ್ರೋಪಕರಣ ಹಾಗೂ ಉತ್ಪಾದನೆಯ ಬಗ್ಗೆ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಜನಾರ್ಧನ್ ಹಾಗೂ ಜನರಲ್ ಮ್ಯಾನೇಜರ್ ಜೀವನ್ ಇವರು ಮಾಹಿತಿ ನೀಡಿದರು.

ಆದಿಗುರು ಕೌಶಲ್ಯಾಭಿವೃದ್ಧಿ ತರಭೇತಿ ಕೇಂದ್ರವು ಸತತ ಮೂರು ವರ್ಷದಿಂದ ಉಜಿರೆಯಲ್ಲಿ ಫ್ಯಾಷನ್ ಡಿಸೈನಿಂಗ್, ಎಂಬ್ರಾಯ್ ಡರಿ, ಮೆಹಂದಿ, ಆರ್ಟ್ ಮತ್ತು ಕ್ರಾಫ್ಟ್ ಮೊದಲಾದ ತರಭೇತಿ ಗಳನ್ನು ನೀಡುತ್ತಾ ಬಂದಿರುವ ಸಂಸ್ಥೆಯಾಗಿರುತ್ತದೆ.

Related posts

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಿಡ್ಲೆ ಸಹಕಾರಿ ಸಂಘದ ಅಧ್ಯಕ್ಷ ಕೆ. ರಮೇಶ್ ರಾವ್ ಬೆಂಬಲ

Suddi Udaya

ಕಣಿಯೂರು: ದೀಪಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬಳಂಜ: ಮುಡಾಯಿಬೆಟ್ಟು ನಿವಾಸಿ ಲಲಿತ ನಿಧನ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ 9ನೇ ಸಹಾಯಧನ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿಯ ಪಿಎಸ್ಐ ಓಡಿಯಪ್ಪ ಗೌಡ ಹಾಗೂ ಪುಂಜಾಲಕಟ್ಟೆಯ ಪಿಎಸ್ಐ ನಂದ ಕುಮಾರ್ ವರ್ಗಾವಣೆ

Suddi Udaya
error: Content is protected !!