23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ರೇಡಿಯೋ‌ ನಿನಾದ 90.4 ಎಫ್ ಎಂ; ಸಮುದಾಯ ಬಾನುಲಿಯಲ್ಲಿ‌ ಬ್ಯಾರಿ‌ ಕಾರ್ಯಕ್ರಮ ಪ್ರಸಾರದ ಬಗ್ಗೆ ಸಮಾಲೋಚನೆ

ಬೆಳ್ತಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ನಿನಾದ 90.4 ಎಫ್ಎಂನಲ್ಲಿ ಬ್ಯಾರಿ ಭಾಷೆಯಲ್ಲಿ ಕಾರ್ಯಕ್ರಮ ಪ್ರಸಾರ ಮಾಡುವ ಕುರಿತು ಸಮಾಲೋಚನಾ ಸಭೆ ಡಿ.20ರಂದು ಕಾರ್ಯಕ್ರಮ ಸಂಯೋಜಕ ವಿ.ಕೆ. ಕಡಬ ಅಧ್ಯಕ್ಷತೆಯಲ್ಲಿ ಕಾಲೇಜಿನಲ್ಲಿ ನಡೆಯಿತು.

ಸಭೆಯಲ್ಲಿ ಮಾತನಾಡಿದ ವೇಣೂರು ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್. ಮಹಮ್ಮದ್ ವೇಣೂರು ಅವರು, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಅಧೀನದ ಸಮುದಾಯ ಬಾನುಲಿಯಲ್ಲಿ ಬ್ಯಾರಿ ಭಾಷೆಯಲ್ಲಿ ಕಾರ್ಯಕ್ರಮ ಮಾಡುತ್ತಿರುವುದು ನಿಜಕ್ಕೂ ಸಂತಸದ ಸಂಗತಿ. ಸಾಮಾಜಿಕ ಸೌಹಾರ್ದ ಮತ್ತು ಭಾಷಾ ವೈವಿಧ್ಯದ ಅರಿವು ಮೂಡಿಸುವಲ್ಲಿ ಈ ಕಾರ್ಯಕ್ರಮ ಪ್ರಮುಖ ಭಾಗವಾಗಲಿದ್ದು, ಇದಕ್ಕೆ ನಮ್ಮೆಲ್ಲರ ಸಹಕಾರವಿದೆ ಎಂದರು.

ಎಸ್.ಡಿ.ಎಂ. ಕಾಲೇಜಿನ ಹಿರಿಯ ವಿದ್ಯಾರ್ಥಿ, ಪ್ರಗತಿಪರ ಕೃಷಿಕ ಸಯ್ಯದ್ ಹಸನ್ ವೇಣೂರು ಮಾತನಾಡಿ, ಬ್ಯಾರಿ ಹಬ್ಬಗಳು, ಆಚರಣೆಗಳು ಮತ್ತು ಆಹಾರ ಸಂಸ್ಕೃತಿ ಕುರಿತ ಕಾರ್ಯಕ್ರಮಗಳ ಜೊತೆಗೆ ಸಮುದಾಯಕ್ಕೆ ಬೇಕಾದ ಅರಿವು ಕಾರ್ಯಕ್ರಮಗಳು ಬಿತ್ತರವಾಗಬೇಕು, ಈ ಕಾರ್ಯಕ್ರಮಗಳನ್ನು ಆಲಿಸುವ ಕೇಳುಗ ವರ್ಗವನ್ನೂ ಸೃಷ್ಟಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ವಕ್ಫ್ ಬೋರ್ಡ್ ಜಿಲ್ಲಾ ಸಮಿತಿ ಮಾಜಿ ಸದಸ್ಯ ಯು.ಕೆ. ಮಹಮ್ಮದ್ ಹನಿಫ್ ಉಜಿರೆ ಮಾತನಾಡಿ, ಸಮುದಾಯದ ಸಂಘಟನೆ, ಮಸೀದಿಗಳಲ್ಲಿ ಕಾರ್ಯಕ್ರಮಗಳ ವಿವರ ಹಾಕುವ ಮೂಲಕ ಪ್ರಚಾರ ಮಾಡಬೇಕೆಂದರು.

ಉಜಿರೆ ಹಳೆಪೇಟೆ ಮಸ್ಜಿದ್ ಆಡಳಿತ ಸಮಿತಿ ಅಧ್ಯಕ್ಷ, ಉದ್ಯಮಿ ಅಬುಬಕ್ಕರ್ ಯು.ಹೆಚ್. ಮಾತನಾಡಿ, ನಿನಾದದಲ್ಲಿ ಬ್ಯಾರಿ ಭಾಷೆಯ ಕಾರ್ಯಕ್ರಮ ಪ್ರಸಾರಕ್ಕೆ ಮುಂದಾಗಿರುವುದು ನಮ್ಮ ಸಮುದಾಯಕ್ಕೆ ಹೆಮ್ಮೆಯಾಗಿದೆ ಎಂದರು.

ಹಿರಿಯ ಪತ್ರಕರ್ತ ಅಚ್ಚು ಮುಂಡಾಜೆ ಮಾತನಾಡಿ, ಬ್ಯಾರಿ ಸಮುದಾಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಇರುವ ಸಾಧಕರಿದ್ದಾರೆ. ಅವರ ವಿವರಗಳನ್ನು ಸಂಗ್ರಹಿಸಿ ಬಾನುಲಿ ಕೇಂದ್ರದ ಮೂಲಕ ನಾಡಿಗೆ ಪರಿಚಯಿಸುವ ಕಾರ್ಯವಾಗಬೇಕು, ಬ್ಯಾರಿ ಸಮುದಾಯದ ಮೂಲ ಸಾಂಪ್ರದಾಯಿಕ ಆಚರಣೆಗಳು, ಜನಪದ ಹಾಡುಗಳು ಯುವ ತಲೆಮಾರಿಗೆ ಮತ್ತೆ ದಾಟಿಸುವಂತಾಗಬೇಕೆಂದರು.

ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಡಾ. ಸಾಜೀದಾ ಮಾತನಾಡಿ, ಮುಸ್ಲಿಂ ಸಮುದಾಯದಲ್ಲಿ ಹೆಣ್ಣು ಮಕ್ಕಳು ಉನ್ನತ ವ್ಯಾಸಂಗ ಮಾಡುವುದು ವಿರಳ. ಹಾಗಾಗಿ ಶೈಕ್ಷಣಿಕ ಮಾಹಿತಿ ಕುರಿತು ಕಾರ್ಯಕ್ರಮ ಸಿದ್ಧಪಡಿಸಬೇಕೆಂದರು.

ಎಸ್.ಡಿ.ಎಂ. ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಫಾತಿಮಾ ಸಫೀರಾ ಮಾತನಾಡಿ, ವಿದ್ಯಾರ್ಥಿಗಳ ಸಹಕಾರದೊಂದಿಗೆ ಕಾರ್ಯಕ್ರಮಗಳನ್ನು ನಿರ್ಮಾಣ ಮಾಡಲು ಸಹಕಾರ ನೀಡುವುದಾಗಿ ತಿಳಿಸಿದರು.

ಸೇರಿದ ಎಲ್ಲರ ನಿರ್ಣಯದಂತೆ ಮುಂದಿನ ದಿನಗಳಲ್ಲಿ ಪ್ರಸಾರವಾಗುವ ಕಾರ್ಯಕ್ರಮಕ್ಕೆ ‘ಬ್ಯಾರಿಂಙಲೆ ಪಲಕ’ ಎಂದು ಶೀರ್ಷಿಕೆ ಸೂಚಿಸಲಾಯಿತು.

Related posts

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮಹಾದ್ವಾರ ಲೋಕಾರ್ಪಣೆ: ರೂ 11 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಮಹಾದ್ವಾರ, ಶಾಸಕ ಹರೀಶ್ ಪೂಂಜರವರಿಂದ ಉದ್ಘಾಟನೆ

Suddi Udaya

ಅರಸಿನಮಕ್ಕಿ: ಉಪರಡ್ಕದಲ್ಲಿ ಆಟೋ ರಿಕ್ಷಾ ಹಾಗೂ ಬೈಕ್ ಡಿಕ್ಕಿ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಸಿಬ್ಬಂದಿ ಕೊರತೆ: ಕಂದಾಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಕಲ್ಮಂಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಮರೋಡಿ: ಕೂಕ್ರಬೆಟ್ಟು ಶಾಲೆಗೆ “ಸರಕಾರಿ ಶಾಲೆ ಉಳಿಸಿ ಬೆಳೆಸಿ” ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚನ್ ಭೇಟಿ

Suddi Udaya

ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ ಬಿ. ಪದ್ಮನಾಭ ಸಾಲ್ಯಾನ್ ನೇಮಕ

Suddi Udaya
error: Content is protected !!