23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಂಭಶ್ರೀ ಕಾಲೇಜು ವಿದ್ಯಾರ್ಥಿಗಳ 2K25: ಎಕ್ಸ್‌ಪ್ಲೋರಿಯಾ


ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ 2025 ಸಾಲಿನ ವಾರ್ಷಿಕ ಕಾರ್ಯಕ್ರಮಗಳು ಈ ಬಾರಿ ಕ್ರೀಡೆಯೂ ಸಂಸ್ಕೃತಿಯೂ ಎರಡು ದಿನ ಅದ್ದೂರಿಯಾಗಿ ಜರುಗಿದವು. ಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ.ಎಚ್. ಕಾರ್ಯಕ್ರಮದ ಅಧ್ಯಕ್ಷತೆಯೊಂದಿಗೆ, ಸಂಸ್ಥೆಯ ಸಂಚಾಲಕರಾದ ಲೆಫ್ಟಿನೆಂಟ್ ಅಶ್ವಿತ್ ಕುಲಾಲ್ ಅವರ ಸಮಗ್ರ ಸಂಯೋಜನೆ, ಅತಿಥಿ ಸ್ವಾಗತ ಮತ್ತು ಮಾರ್ಗದರ್ಶನದಿಂದ ಈ ಉತ್ಸವ ಮೆರಗುಗೊಂಡಿತು.

ಡಿ.18ರಂದು ಉದ್ಘಾಟಕರಾಗಿ ಕುಕ್ಕೇಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಅಶೋಕ್ ಪಾಣೂರ್, ಮುಖ್ಯ ಅತಿಥಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಕುಕ್ಕೇಡಿ ಆಗಮಿಸಿದರು.
ಗ್ರಾಮ ಪಂಚಾಯತ್ ಸದಸ್ಯ ಜನಾರ್ಧನ ಪೂಜಾರಿ ಕ್ರೀಡಾ ಜ್ಯೋತಿಯನ್ನು ಬೆಳಗಿಸಿದರು. ಮನೋಜ್ ಎಸ್. ಧನ್ಯವಾದವಿತ್ತರು.

ಡಿ.19ರಂದು ಕುಂಭಶ್ರೀ ಕ್ಯಾಂಪಸ್‌ನಲ್ಲಿ ಎಕ್ಸ್‌ಪ್ಲೋರಿಯಾ 2K25 ಸಾಂಸ್ಕೃತಿಕ ಉತ್ಸವ ವಿಜೃಂಭಣೆಯಿಂದ ನೆರವೇರಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಶಿಧರ್ ಡಿ. ಉದ್ಯಮಿ (ಹಾಸನ) , ಸುರೇಶ್ ಪೂಜಾರಿ ಕೃಷಿಕ, ಉಪಸ್ಥಿತರಿದ್ದರು. ದಿನದ ವಿಶೇಷತೆಯನ್ನು ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕ ಅಭಿಲಾಶ್ ಹಾಗೂ ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕ ಸಂತೋಷ್ ನಿಭಾಯಿಸಿದರು.
ಸಾಂಸ್ಕೃತಿಕ ಸ್ಪರ್ಧೆಗಳ ವೈವಿಧ್ಯ, ಫುಡ್ ಫೆಸ್ಟ್ , ಟ್ರೆಶರ್ ಹಂಟ್ , ರಂಗೋಲಿ , ಥೀಮ್ ಪರ್ಫಾರ್ಮೆನ್ಸ್ , ಪಾಟ್ ಪೈಂಟಿಂಗ್ , ವೀಡಿಯೋಗ್ರಫಿ ಹಾಗೂ ಇತರೆ ಪ್ರತಿಭಾ ಪ್ರದರ್ಶನಗಳು, ವಿಜೇತರಿಗೆ ಪದಕ–ಪ್ರಮಾಣಪತ್ರಗಳು ಪ್ರದಾನಿಸಲಾಯಿತು.

ಸಮಾರೋಪದ ಮುಖ್ಯ ಅತಿಥಿಯಾಗಿ ಕೃಷಿಕ ಜಾನ್ ಲಿನು ಆಗಮಿಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ತುಂಬಿದರು.
ದ್ವಿದಿನ ಕಾರ್ಯಕ್ರಮಕ್ಕೆ ಭೌತಶಾಸ್ತ್ರ ವಿಭಾಗದ ಉಪನ್ಯಾಸಕಿ ಲಿಖಿತಾ ಎಂ. ಮತ್ತು ವಾಣಿಜ್ಯ ವಿಭಾಗದ ಉಪನ್ಯಾಸಕಿ ಶರಣ್ಯ ಕೆ.ಎಸ್. ಸಮರ್ಥ ನಿರೂಪಣೆ ನೀಡಿದರು.
ಎಲ್ಲ ವಿಭಾಗಗಳ ಪ್ರದರ್ಶನ, ಸಾಧನೆ, ಹಾಗೂ ತಂಡ ಸ್ಫೂರ್ತಿಗೆ ಮೆರಗು ತುಂಬುವಂತೆ, ಒಟ್ಟಾರೆ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ವಿದ್ಯಾರ್ಥಿಗಳಿಗೆ ಸಂಯುಕ್ತವಾಗಿ ಪ್ರದಾನ ಮಾಡಲಾಯಿತು.

Related posts

ನಯನಾಡು: ಪಿಲಾತಬೆಟ್ಟು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿಗೆ ಉಪರಾಷ್ಟ್ರಪತಿ ಭೇಟಿ ಹಿನ್ನಲೆ ಡಿಸಿ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ

Suddi Udaya

ಗೇರುಕಟ್ಟೆ: ಕೊರಂಜ ನಿವಾಸಿ ದೇವಕಿ ಆಳ್ವ ನಿಧನ

Suddi Udaya

ಕಂಬಳ ಸ್ಪರ್ಧೆಗೆ ಸುಪ್ರೀಂಕೋರ್ಟ್ ಅನುಮತಿ

Suddi Udaya

ಉಜಿರೆ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಜ.6: ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ. ಬೆಳ್ತಂಗಡಿಗೆ

Suddi Udaya
error: Content is protected !!