23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ : ದಾನಿಗಳಿಗೆ ಗೌರವಾರ್ಪಣೆ

ಉಜಿರೆ: ಪವಾಡ ಪುರುಷ ಸಂತ ಅಂತೋನಿಯವರ ಹೆಸರಿಗೆ ಸಮರ್ಪಿಸಲ್ಪಟ್ಟ, ದುರಸ್ತಿ ಹಾಗೂ ನವೀಕರಣಗೊಂಡ
ಉಜಿರೆಯ ಸಂತ ಅಂತೋನಿ ಕ್ರೈಸ್ತ ದೇವಾಲಯದ‌ ಉದ್ಟಾಟನೆ ಮತ್ತು ಆಶೀರ್ವಚನ ಕಾರ್ಯಕ್ರಮ
ಡಿ. 22ರಂದು ನಡೆಯಿತು.

ಮಂಗಳೂರು ಧಮ೯ಪ್ರಾಂತ್ಯದ ಧಮ೯ಧ್ಯಕ್ಷರಾದ ರೈ. ರೆ.ಡಾ.ಪೀಟರ್ ಪೌಲ್ ಸಲ್ದಾನ್ಹಾರವರು ಅಧ್ಯಕ್ಷತೆ ವಹಿಸಿ, ನವೀಕರಣಕ್ಕೆ ಸಹಕರಿಸಿದ ದಾನಿಗಳನ್ನು ಗೌರವಿಸಿದರು.
ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಉಜಿರೆ ಮೊಹಿದ್ದೀನ್ ಜುಮಾ ಮಸೀದಿ ಅಧ್ಯಕ್ಷ ಅಬೂಬಕ್ಕರ್ ಯು.ಹೆಚ್ ಭಾಗವಹಿಸಿದ್ದರು.

ಬೆಳ್ತಂಗಡಿ ವಲಯದ ಪ್ರಧಾನ ಧರ್ಮಗುರು ಅ. ವಂ. ವಾಲ್ಟರ್ ಡಿಮೆಲ್ಲೊರವರು, ಉಜಿರೆ ಧರ್ಮಕೇಂದ್ರದ ಧರ್ಮಗುರು ವಂ. ಆಬೆಲ್ ಲೋಬೋ, ಅನುಗ್ರಹ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ವಂ. ವಿಜಯ್ ಲೋಬೊ, ಚಚ್೯ ಪಾಲನಾ ಸಮಿತಿ ಉಪಾಧ್ಯಕ್ಷ ಪಾಲನ ಮಂಡಳಿ ಉಪಾಧ್ಯಕ್ಷ ಅಂಟೋನಿ ಫೆರ್ನಾಂಡಿಸ್, ಕಾರ್ಯದರ್ಶಿ ಲಿಗೋರಿ ವಾಸ್,
ಶ್ರೀಮತಿ ಲವೀನಾ ಸಾಂತ್ಯೋರ ಆಯೋಗಾಂಚಿ ಸಂಯೋಜಕಿ ಉಪಸ್ಥಿತರಿದ್ದರು.


ವಲಯದ ಮತ್ತು ಚರ್ಚ್ ನಲ್ಲಿ ಸೇವೆ ಸಲ್ಲಿಸಿದ ಧರ್ಮಗುರುಗಳು ಹಾಗೂ ಇನ್ನಿತರ ಗುರುಗಳು, ಧರ್ಮ ಭಗೀನಿಯರು, ಕ್ರೈಸ್ತ ಭಾಂದವರು ಭಾಗವಹಿಸಿದರು.

ಉಜಿರೆ ಧರ್ಮಕೇಂದ್ರದ ಧರ್ಮಗುರು ವಂ. ಆಬೆಲ್ ಲೋಬೋ ಸ್ವಾಗತಿಸಿದರು. ವಿಶಾಲ್ ಪಿಂಟೋ ಕಾಯ೯ಕ್ರಮ ನಿರೂಪಿಸಿದರು.

Related posts

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಅರಸಿನಮಕ್ಕಿ: ಕೋಡಿಯಡ್ಕ ನಿವಾಸಿ ಲಕ್ಷ್ಮಿ ಅಮ್ಮ ನಿಧನ

Suddi Udaya

ಭಾರೀ ಗಾಳಿ ಮಳೆ: ನಡ ಮಂಜೊಟ್ಟಿ ಬಳಿ ಟಿಪ್ಪರ್ ಮೇಲೆ ಮರ ಬಿದ್ದು ಹಾನಿ

Suddi Udaya

ನಾರಾವಿ:”ಸನ್ನಿಧಿ” ಪ್ಯಾಲೇಸ್ ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯನ್ ಮತ್ತು ಮಕ್ಕಳಿಂದ ದೈಪಾಲಬೆಟ್ಟು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಮುಖಾಯಾಮ ಮಂಟಪ ದುರಸ್ತಿಗೆ ಮರಮಟ್ಟು ಹಾಗೂ ಭಂಡಾರಕ್ಕೆ ಪಲ್ಲಕ್ಕಿ ಸಮರ್ಪಣೆ

Suddi Udaya

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

Suddi Udaya

ಮಹಿಳೆಯ ಬ್ಯಾಗ್ ನಲ್ಲಿ ಇರಿಸಿದ್ದ ರೂ. 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya
error: Content is protected !!