25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ; ಆಶೀರ್ವಾಚನ

ಉಜಿರೆ: ಪವಾಡ ಪುರಷರೆಂದು ಹೆಸರುವಾಸಿಯಾದ ಪಾದುವಾದ ಸಂತ ಅಂತೋನಿಯವರ ಹೆಸರಿಗೆ ಸಮರ್ಪಿಸಲ್ಪಟ್ಟ ಉಜಿರೆಯ ಕ್ರೈಸ್ತ ದೇವಾಲಯವು ದುರಸ್ತಿ ಹಾಗೂ ನವೀಕರಣಗೊಂಡು ಆಶೀರ್ವಚನ ಕಾರ್ಯಕ್ರಮವು
ಡಿ. 22ರಂದು ನಡೆಯಿತು.

ರೈ.ರೆ.ಡಾ.ಪೀಟರ್ ಪೌಲ್ ಸಲ್ದಾನ್ಹಾರವರು ಮುಖ್ಯ ರಸ್ತೆಯ ಬಳಿ ನಿರ್ಮಿಸಿದ ಸಂತ ಅಂತೋನಿಯವರ ಗ್ರೋಟ್ಟೋ ಆಶೀರ್ವಚನ, ನಂತರ ಮುಖ್ಯ ದ್ವಾರದ ಉದ್ಘಾಟನೆ, ವೆಲಂಕಣಿ ಮಾತೆಯ ಗ್ರೋಟ್ಟೋ ಬಳಿಕ ಚರ್ಚ್ ಶುದ್ಧಿಕರಣ, ದಿವ್ಯ ಬಲಿಪೂಜೆಯನ್ನು ಅರ್ಪಿಸಿ ಪವಿತ್ರ ಪರಮ ಪ್ರಸಾದ ಮಂಟಪ ಉದ್ಘಾಟಿಸಿ ವಿವಿಧ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.

ಈ ಬಲಿಪೂಜೆಯಲ್ಲಿ ಧರ್ಮಾಧ್ಯಕ್ಷರೊಂದಿಗೆ, ಬೆಳ್ತಂಗಡಿ ವಲಯದ ಪ್ರಧಾನ ಧರ್ಮಗುರು ಅ. ವಂ. ವಾಲ್ಟರ್ ಡಿಮೆಲ್ಲೊರವರು, ಉಜಿರೆ ಧರ್ಮಕೇಂದ್ರದ ಧರ್ಮಗುರು ವಂ. ಆಬೆಲ್ ಲೋಬೋ, ಅನುಗ್ರಹ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ವಂ. ವಿಜಯ್ ಲೋಬೊ ಹಾಗೂ ವಲಯದ ಮತ್ತು ಇದೆ ಚರ್ಚ್ ನಲ್ಲಿ ಸೇವೆ ಸಲ್ಲಿಸಿದ ಧರ್ಮಗುರುಗಳು ಹಾಗೂ ಇನ್ನಿತರ ಗುರುಗಳು, ಧರ್ಮ ಭಗೀನಿಯರು, ಕ್ರೈಸ್ತ ಭಾಂದವರು ಭಾಗವಹಿಸಿದರು. ಪಾಲನ ಮಂಡಳಿ ಉಪಾಧ್ಯಕ್ಷ ಅಂಟೋನಿ ಫೆರ್ನಾಂಡಿಸ್, ಕಾರ್ಯದರ್ಶಿ ಲಿಗೋರಿ ವಾಸ್, ಆರ್ಥಿಕ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಅಳದಂಗಡಿ ಶ್ರೀ ಸತ್ಯ ದೇವತೆಗೆ ಹರಕೆ ರೂಪದಲ್ಲಿ ಗಗ್ಗರ ಸಮಪ೯ಣೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 341 ಕೋಟಿ ವ್ಯವಹಾರ, ರೂ. 1.53 ಕೋಟಿ ಲಾಭ, ಸದಸ್ಯರಿಗೆ ಶೇ. 13 ಡಿವಿಡೆಂಟ್

Suddi Udaya

ಆ.14: ಕಕ್ಕಿಂಜೆ ಹಾಗೂ ಪಿಲಿಕ್ಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಯ ಇಕ್ಕಲೆಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!