22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ; ಆಶೀರ್ವಾಚನ

ಉಜಿರೆ: ಪವಾಡ ಪುರಷರೆಂದು ಹೆಸರುವಾಸಿಯಾದ ಪಾದುವಾದ ಸಂತ ಅಂತೋನಿಯವರ ಹೆಸರಿಗೆ ಸಮರ್ಪಿಸಲ್ಪಟ್ಟ ಉಜಿರೆಯ ಕ್ರೈಸ್ತ ದೇವಾಲಯವು ದುರಸ್ತಿ ಹಾಗೂ ನವೀಕರಣಗೊಂಡು ಆಶೀರ್ವಚನ ಕಾರ್ಯಕ್ರಮವು
ಡಿ. 22ರಂದು ನಡೆಯಿತು.

ರೈ.ರೆ.ಡಾ.ಪೀಟರ್ ಪೌಲ್ ಸಲ್ದಾನ್ಹಾರವರು ಮುಖ್ಯ ರಸ್ತೆಯ ಬಳಿ ನಿರ್ಮಿಸಿದ ಸಂತ ಅಂತೋನಿಯವರ ಗ್ರೋಟ್ಟೋ ಆಶೀರ್ವಚನ, ನಂತರ ಮುಖ್ಯ ದ್ವಾರದ ಉದ್ಘಾಟನೆ, ವೆಲಂಕಣಿ ಮಾತೆಯ ಗ್ರೋಟ್ಟೋ ಬಳಿಕ ಚರ್ಚ್ ಶುದ್ಧಿಕರಣ, ದಿವ್ಯ ಬಲಿಪೂಜೆಯನ್ನು ಅರ್ಪಿಸಿ ಪವಿತ್ರ ಪರಮ ಪ್ರಸಾದ ಮಂಟಪ ಉದ್ಘಾಟಿಸಿ ವಿವಿಧ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.

ಈ ಬಲಿಪೂಜೆಯಲ್ಲಿ ಧರ್ಮಾಧ್ಯಕ್ಷರೊಂದಿಗೆ, ಬೆಳ್ತಂಗಡಿ ವಲಯದ ಪ್ರಧಾನ ಧರ್ಮಗುರು ಅ. ವಂ. ವಾಲ್ಟರ್ ಡಿಮೆಲ್ಲೊರವರು, ಉಜಿರೆ ಧರ್ಮಕೇಂದ್ರದ ಧರ್ಮಗುರು ವಂ. ಆಬೆಲ್ ಲೋಬೋ, ಅನುಗ್ರಹ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ವಂ. ವಿಜಯ್ ಲೋಬೊ ಹಾಗೂ ವಲಯದ ಮತ್ತು ಇದೆ ಚರ್ಚ್ ನಲ್ಲಿ ಸೇವೆ ಸಲ್ಲಿಸಿದ ಧರ್ಮಗುರುಗಳು ಹಾಗೂ ಇನ್ನಿತರ ಗುರುಗಳು, ಧರ್ಮ ಭಗೀನಿಯರು, ಕ್ರೈಸ್ತ ಭಾಂದವರು ಭಾಗವಹಿಸಿದರು. ಪಾಲನ ಮಂಡಳಿ ಉಪಾಧ್ಯಕ್ಷ ಅಂಟೋನಿ ಫೆರ್ನಾಂಡಿಸ್, ಕಾರ್ಯದರ್ಶಿ ಲಿಗೋರಿ ವಾಸ್, ಆರ್ಥಿಕ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

Suddi Udaya

ಎಸ್.ಡಿ.ಎಂ ಬಿ.ಎಡ್ ಕಾಲೇಜು ವಾರ್ಷಿಕೋತ್ಸವ

Suddi Udaya

ಮುಂಡಾಜೆಯಲ್ಲಿ ಹೆದ್ದಾರಿಗೆ ಉರುಳಿದ ಮರ, ಮೂರು ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಶಿಬಾಜೆ ಶ್ರೀ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಭರತ್‌ ಭೂಷಣ್‌ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಶಾಸಕ ಹರೀಶ್ ಪೂಂಜ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

Suddi Udaya

ಅಲೆಕ್ಕಿ ಶ್ರೀರಾಮ ಶಿಶು ಮಂದಿರದ ಮಾತೃ ಮಂಡಳಿಯ ವತಿಯಿಂದ ಆಟಿದ ಕೂಟ ಕಾರ್ಯಕ್ರಮ

Suddi Udaya
error: Content is protected !!