23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ ಸರಕಾರಿ ಶಾಲೆಯಲ್ಲಿ ಮೆಟ್ರಿಕ್ ಮೇಳ

ಗೇರುಕಟ್ಟೆ : ನಾಳ ಉನ್ನತಿಕರೀಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್‌ ಮೇಳ ನಡೆಯಿತು.
ನಾಳ ಶಾಲಾ ಹಿರಿಯ ವಿದ್ಯಾರ್ಥಿ ಹಾಗೂ ಉದ್ಯಮಿ ಸಂಶೀರ್ ನಾಳ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಶಾಲಾ ಎಸ್.ಡಿ.ಯಂ.ಸಿ. ಅಧ್ಯಕ್ಷ ಮೋಹನ ಗೌಡ ತಾರೆಮಾರು ಅಧ್ಯಕ್ಷತೆಯನ್ನು ವಹಿಸಿದ್ದರು.
ಶಾಲಾ ಮುಖ್ಯ ಗುರು ಪಿಲಿಪ್ ರೊನಾಲ್ಡ್ ಡಿಮೆಲ್ಲೊ ಅವರು ಪ್ರಾಸ್ತಾವಿಕ ಮಾತನಾಡಿ ಮೆಟ್ರಿಕ್ ಮೇಳದ ಮಹತ್ವವನ್ನು ತಿಳಿಸಿದರು. ವೇದಿಕೆಯಲ್ಲಿ ಎಸ್.ಡಿ.ಯಂಸಿ ಉಪಾಧ್ಯಕ್ಷೆ ರೀತಾ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಪೆಂರ್ಬುಡ ಉಪಸ್ಥಿತರಿದ್ದರು.

ಶಿಕ್ಷಕಿ ಸಿಸಿಲಿಯ ಫ್ಲಾವಿಯಾ ಡಿಕೋಸ್ತ ಸ್ವಾಗತಿಸಿ, ಶಿಕ್ಷಕಿ ಜಲಜಾಕ್ಷಿ.ಪಿ ವಂದಿಸಿದರು.
ಶಿಕ್ಷಕಿ ಕವಿತಾ ನಿರೂಪಣೆ ಮಾಡಿದರು. ಶಿಕ್ಷಕಿ ದಮಯಂತಿ ಯಂ ಸಹಕರಿಸಿದರು. ಮೆಟ್ರಿಕ್ ಮೇಳದಲ್ಲಿ ತರಕಾರಿ, ವಿವಿಧ ಸೊಪ್ಪುಗಳು, ಹಣ್ಣು ಹಂಪಲು, ತಂಪು ಪಾನೀಯಗಳು, ಮನೆಯಲ್ಲಿ ತಯಾರಿಸಿದ ತಿಂಡಿ ತಿನಿಸುಗಳು, ಜೇನು ತುಪ್ಪ, ಹೂವಿನ ಗಿಡಗಳು, ತರಕಾರಿ ಗಿಡಗಳು, ಅಕ್ಕೇರಿಯಂ ಮೀನಿನ ಮಳಿಗೆಗಳು ಜನರಿಂದ ಮೆಚ್ಚುಗೆ ಪಡೆಯಿತು.

Related posts

ಉಜಿರೆ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಥ ಮ ಪ್ರಶಸ್ತಿ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ಎ.23: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್‌ನಲ್ಲಿ 15ನೇ ವರ್ಷದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಹತ್ಯಡ್ಕ ವಿಠೋಬಾ ರುಕುಮಾಯಿ ದೇಗುಲಕ್ಕೆ ದೇಣಿಗೆ

Suddi Udaya

ಜೇನು ಕುಟುಂಬಕ್ಕಾಗಿ ಕಾಡಿಗೆ ತೆರಳಿದ್ದ ಅಣ್ಣ ಸಂತೋಷ್‌ಗೆ ಕಚ್ಚಿದ ಹಾವು: ಬಾಯಿಯಿಂದ ವಿಷ ಹೀರಿ ಅಣ್ಣನ ಜೀವ ಉಳಿಸಿದ ತಮ್ಮ ಗಣೇಶ್

Suddi Udaya

ಬಿಜೆಪಿಯಿಂದ 241 ಬೂತ್‌ಗಳಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರಿಂದ ಮನೆ ಮನೆ ಪ್ರಚಾರ ಅಭಿಯಾನ

Suddi Udaya
error: Content is protected !!