22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ ಸರಕಾರಿ ಶಾಲೆಯಲ್ಲಿ ಮೆಟ್ರಿಕ್ ಮೇಳ

ಗೇರುಕಟ್ಟೆ : ನಾಳ ಉನ್ನತಿಕರೀಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್‌ ಮೇಳ ನಡೆಯಿತು.
ನಾಳ ಶಾಲಾ ಹಿರಿಯ ವಿದ್ಯಾರ್ಥಿ ಹಾಗೂ ಉದ್ಯಮಿ ಸಂಶೀರ್ ನಾಳ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಶಾಲಾ ಎಸ್.ಡಿ.ಯಂ.ಸಿ. ಅಧ್ಯಕ್ಷ ಮೋಹನ ಗೌಡ ತಾರೆಮಾರು ಅಧ್ಯಕ್ಷತೆಯನ್ನು ವಹಿಸಿದ್ದರು.
ಶಾಲಾ ಮುಖ್ಯ ಗುರು ಪಿಲಿಪ್ ರೊನಾಲ್ಡ್ ಡಿಮೆಲ್ಲೊ ಅವರು ಪ್ರಾಸ್ತಾವಿಕ ಮಾತನಾಡಿ ಮೆಟ್ರಿಕ್ ಮೇಳದ ಮಹತ್ವವನ್ನು ತಿಳಿಸಿದರು. ವೇದಿಕೆಯಲ್ಲಿ ಎಸ್.ಡಿ.ಯಂಸಿ ಉಪಾಧ್ಯಕ್ಷೆ ರೀತಾ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಪೆಂರ್ಬುಡ ಉಪಸ್ಥಿತರಿದ್ದರು.

ಶಿಕ್ಷಕಿ ಸಿಸಿಲಿಯ ಫ್ಲಾವಿಯಾ ಡಿಕೋಸ್ತ ಸ್ವಾಗತಿಸಿ, ಶಿಕ್ಷಕಿ ಜಲಜಾಕ್ಷಿ.ಪಿ ವಂದಿಸಿದರು.
ಶಿಕ್ಷಕಿ ಕವಿತಾ ನಿರೂಪಣೆ ಮಾಡಿದರು. ಶಿಕ್ಷಕಿ ದಮಯಂತಿ ಯಂ ಸಹಕರಿಸಿದರು. ಮೆಟ್ರಿಕ್ ಮೇಳದಲ್ಲಿ ತರಕಾರಿ, ವಿವಿಧ ಸೊಪ್ಪುಗಳು, ಹಣ್ಣು ಹಂಪಲು, ತಂಪು ಪಾನೀಯಗಳು, ಮನೆಯಲ್ಲಿ ತಯಾರಿಸಿದ ತಿಂಡಿ ತಿನಿಸುಗಳು, ಜೇನು ತುಪ್ಪ, ಹೂವಿನ ಗಿಡಗಳು, ತರಕಾರಿ ಗಿಡಗಳು, ಅಕ್ಕೇರಿಯಂ ಮೀನಿನ ಮಳಿಗೆಗಳು ಜನರಿಂದ ಮೆಚ್ಚುಗೆ ಪಡೆಯಿತು.

Related posts

ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳಾಲು ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ ಬಳಂಜ ವಲಯ ಉಪಾಧ್ಯಕ್ಷರಾಗಿ ಆಯ್ಕೆ

Suddi Udaya

ಜು.11: ಉಜಿರೆಯಲ್ಲಿ ಹೆಗ್ಡೆ ಮೆಡಿಕಲ್ಸ್ ಶುಭಾರಂಭ

Suddi Udaya

ಕಸ ಎಸೆದವರಿಗೆ ದಂಡ ಹಾಕಿದ ಮಡಂತ್ಯಾರು ಗ್ರಾ.ಪಂ.

Suddi Udaya

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

Suddi Udaya

ಅಳದಂಗಡಿ:ನಿಸ್ವಾರ್ಥ ಸೇವೆಗೆ ಸ್ಪೂರ್ತಿಯ ಸೆಲೆಯಾದ ರವಿಕಟಪಾಡಿ: ಕಿರ್ತನ್ ಅವರ ವೈದ್ಯಕೀಯ ಚಿಕಿತ್ಸೆಗೆ ರೂ.10 ಸಾವಿರ ಹಸ್ತಾಂತರ

Suddi Udaya
error: Content is protected !!