September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಡಂದಡ್ಕ ಸಾಧನಾಶ್ರೀ ಮಹಿಳಾ ಮಂಡಲ ಉದ್ಘಾಟನೆ

ಹೊಸಂಗಡಿ: ಪಡ್ಡಂದಡ್ಕ ಸಾಧನಾ ಶ್ರೀ ಮಹಿಳಾ ಮಂಡಲ ಇದರ ಉದ್ಘಾಟನಾ ಕಾರ್ಯಕ್ರಮವು ಡಿ. 21ರಂದು ಶ್ರೀ ಮಂಜುನಾಥೇಶ್ವರ ಸಭಾಭವನ ಪಡ್ಡಂದಡ್ಕದಲ್ಲಿ ಜರುಗಿತು.

ಉದ್ಘಾಟನೆಯನ್ನು ರಾಷ್ಟ್ರ ಸೇವಿಕಾ ಸಮಿತಿಯ ಮಂಗಳೂರು ವಿಭಾಗದ ಜಿಲ್ಲಾ ಕಾರ್ಯವಾಹಿಕೆ ಶ್ರೀಮತಿ ಗಿರಿಜಾ ಭಟ್ ನೆರವೇರಿಸಿದರು.

ಅಧ್ಯಕ್ಷತೆಯನ್ನು ಸಾಧನಶ್ರೀ ಮಹಿಳಾ ಮಂಡಲದ ಅಧ್ಯಕ್ಷೆ ಪ್ರತಿಭಾ ಸುಧೀರ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಮಂಜುನಾಥೇಶ್ವರ ಭಜನಾ ಮಂಡಳಿಯ ಕಾರ್ಯದರ್ಶಿ ರಮೇಶ್ ಮೂಲ್ಯ ಮತ್ತು ಕೋಶಾಧಿಕಾರಿ ಕುಶ ಪಿ ಉಪಸ್ಥಿತರಿದ್ದರು.

ಸಾಧನಾ ಶ್ರೀ ಮಹಿಳಾ ಮಂಡಲದ ಕಾರ್ಯದರ್ಶಿ ನಳಿನಾಕ್ಷಿ ಸುಧಾಕರ್ ಮಹಿಳಾ ಮಂಡಲದ ಪದವಿಯನ್ನು ವಾಚಿಸಿದರು. ಆಟೋಟ ಸ್ಪರ್ಧೆಯ ವಿಜೇತರ ಪಟ್ಟಿಯನ್ನು ರಕ್ಷಿತಾ ಆರ್ ವಾಚಿಸಿದರು. ಶೋಭಾ ಅರುಣ್ ಹೆಗ್ಡೆ ಸ್ವಾಗತಿಸಿ , ರೇಷ್ಮಾ ಕಾರ್ಯಕ್ರಮ ನಿರೂಪಿಸಿ, ಲತಾ ನಾಯಕ್ ವಂದಿಸಿದರು. ಈ ಸಂದರ್ಭದಲ್ಲಿ ಮಂಡಳಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ಎ.19&20: ಬೆಳ್ತಂಗಡಿ ಶೃಂಗಾರ್ ಜುವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ವಿಶೇಷ ಕೊಡುಗೆ

Suddi Udaya

ಕೂಕ್ರಬೆಟ್ಟು, ಕೊಕ್ರಾಡಿ ಶಾಲೆಗಳ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತಲಾ ₹ 2 ಲಕ್ಷ ಮಂಜೂರು

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ

Suddi Udaya
error: Content is protected !!