23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ಅಂಗದಾನ ಜಾಗೃತಿ ಕಾರ್ಯಕ್ರಮ ‘ಧಾತ್ರು’ ಆಯೋಜನೆ

ಲಾಯಿಲ: ಪ್ರಸನ್ನ ಎಜುಕೇಶನ್ ಟ್ರಸ್ಟ್ನ ಅಂಗಸAಸ್ಥೆಯಾದ ಬೆಳ್ತಂಗಡಿಯ ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ಅಂಗದಾನ ಜಾಗೃತಿ ಕಾರ್ಯಕ್ರಮ ‘ಧಾತ್ರು’ ಡಿ.20 ರಂದು ಯಶಸ್ವಿಯಾಗಿ ಆಯೋಜಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ತಾಲ್ಲೂಕು ಆರೋಗ್ಯಾಧಿಕಾರಿ ಹಾಗೂ ಹಿರಿಯ ನೇತ್ರ ತಜ್ಞರಾದ ಡಾ. ರಮೇಶ ಭಾಗವಹಿಸಿ, ಅಂಗದಾನದ ಮಹತ್ವ, ಸಮಾಜದಲ್ಲಿ ಅದರ ಅಗತ್ಯತೆ ಹಾಗೂ ಅಂಗದಾನದಿಂದ ಅನೇಕ ಜೀವಗಳನ್ನು ಉಳಿಸಬಹುದಾದ ಬಗ್ಗೆ ವಿವರವಾಗಿ ಮಾತನಾಡಿದರು.

ಅತಿಥಿಗಳಾಗಿ ಪ್ರಸನ್ನ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ರಚನಾ ಶರೀರ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾದ ಡಾ. ಪ್ರಲ್ಹಾದ್ ಡಿ. ಸುಬ್ಬಣ್ಣವರ ಹಾಗೂ ಪ್ರಸನ್ನ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಅಖಿಲೇಶ್ ರಾವ್ ಉಪಸ್ಥಿತರಿದ್ದು, ಅಂಗದಾನದ ಕುರಿತು ಜಾಗೃತಿ ಮೂಡಿಸುವ ಸಂದೇಶ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಸನ್ನ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ. ಮಲ್ಲಿಕಾರ್ಜುನ ಗೌಡ ವಹಿಸಿ ಮಾತನಾಡಿ, ಯುವಜನರಲ್ಲಿ ಅಂಗದಾನದ ಕುರಿತು ಅರಿವು ಮೂಡಿಸುವುದು ಅತ್ಯಂತ ಅಗತ್ಯವಾಗಿದ್ದು, ಇಂತಹ ಜಾಗೃತಿ ಕಾರ್ಯಕ್ರಮಗಳು ಸಮಾಜಕ್ಕೆ ಮಹತ್ವದ ಕೊಡುಗೆ ನೀಡುತ್ತವೆ ಎಂದರು.

ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ಅಂಗದಾನದ ಮಹತ್ವವನ್ನು ಸಾರುವ ನಾಟಕವನ್ನು ಪ್ರದರ್ಶಿಸಿ, “Say Yes to Organ Donation” ಎಂಬ ಘೋಷವಾಕ್ಯದ ಮೂಲಕ ಜಾಗೃತಿ ಮೂಡಿಸಿದರು. ಈ ನಾಟಕಕ್ಕೆ ಸಭಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಕಾರ್ಯಕ್ರಮದ ನಿರೂಪಣೆಯನ್ನು ಪ್ರಸನ್ನ ಫಾರ್ಮಸಿ ಕಾಲೇಜು, ಬೆಳ್ತಂಗಡಿಯ ಸಹಾಯಕ ಪ್ರಾಧ್ಯಾಪಕರಾದ ಪ್ರತೀಕ್ಷಾ ಅವರು ನಿರ್ವಹಿಸಿದರು. ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ವಲಯ ಮಟ್ಟದ ಕ್ರೀಡಾಕೂಟ: ಅಳದಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಸರ್ವಜ್ಞ ಜಯಂತಿ ಆಚರಣೆ:

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ

Suddi Udaya

ಬಳಂಜ ದೇವಸ್ಥಾನದ ಜಾತ್ರ ಮಹೋತ್ಸವ ಸಂಪನ್ನ: ದೈವ ದೇವರ ಭೇಟಿ

Suddi Udaya

ನಿಡಿಗಲ್ ಬೈಕ್- ಕಾರು ಡಿಕ್ಕಿ; ಸವಾರನಿಗೆ ಗಾಯ

Suddi Udaya

ಅಳದಂಗಡಿ: ಜನಮಂಗಳ ಕಾರ್ಯಕ್ರದಡಿ ವಿಲ್ ಚೇರ್ ವಿತರಣೆ

Suddi Udaya
error: Content is protected !!