24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆಯ ವಾರ್ಷಿಕ ಮಹಾಸಭೆ

ಉಜಿರೆ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ 2024-2025 ನೇ ಸಾಲಿನ ವಾರ್ಷಿಕ ಮಹಾಸಭೆಯು ಎಸ್. ಪಿ ಆಯಿಲ್ ಮಿಲ್ ವಠಾರದಲ್ಲಿ ಡಿ. 21ರಂದು ಜರಗಿತು.

ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ಅಧ್ಯಕ್ಷತೆ ವಹಿಸಿ ಮಾತನಾಡಿ ಯುವ ಜನರು ನಾಯಕತ್ವ ವಹಿಸಿ ಸಂಘವನ್ನು ಮುಂದಕ್ಕೆ ಬೆಳೆಸಬೇಕು ಮತ್ತು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಬೇಕು ಎಂದು ಹೇಳಿದರು.

ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ರಂಜನ್ ಜಿ ಗೌಡ, ಯುವ ವೇದಿಕೆಯ ಅಧ್ಯಕ್ಷರಾದ ಅನಿಲ್ ಗೌಡ ಅಂತರ, ಮಹಿಳಾ ವೇದಿಕೆಯ ಅಧ್ಯಕ್ಷರಾದ ಅಪರ್ಣ ಶಿವಕಾಂತ ಗೌಡ ಸಭೆಯನ್ನುದ್ದೆಶಿಸಿ ಮಾತನಾಡಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಗೌಡ ಕಲ್ಲಾಜೆ ವರದಿ ವಾಚಿಸಿದರು. ಸಂಘದ ಕೋಶಾಧಿಕಾರಿ ರಾಘವೇಂದ್ರ ಗೌಡ ಪೊದುoಬಿಲ ಲೆಕ್ಕಪತ್ರ ಮಂಡನೆ ಮಾಡಿದರು.
ಯುವ ವೇದಿಕೆಯ ಕಾರ್ಯದರ್ಶಿಯಾದ ನಿರಂಜನ್ ಗೌಡ ಸುರುಳಿ, ಮಹಿಳಾ ಯುವ ವೇದಿಕೆಯ ಅಧ್ಯಕ್ಷೆ ಅನುಪಮಾ ಸತೀಶ್ ಗೌಡ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಫೆಬ್ರವರಿ 1-2026 ರಂದು ನೀರಚಿಲುಮೆಯಲ್ಲಿ ನಡೆಯಲಿರುವ ಧರ್ಮಸ್ಥಳ ಗ್ರಾಮ ಸಮಿತಿಯ ವಾಲಿಬಾಲ್ ಟೂರ್ನಮೆಂಟ್ ನ ಕಾಗದ ಬಿಡುಗಡೆ ಮಾಡಲಾಯಿತು.

ಮಮತ ಶಿವರಾಮ ಗೌಡ ಪ್ರಾರ್ಥಿಸಿದರು. ಸಹಕಾರಿಯ ನಿರ್ದೇಶಕರಾದ ಭರತ್ ಗೌಡ ಹಾನಿಬೆಟ್ಟು ಸ್ವಾಗತಿಸಿ, ಸಂಘದ ಉಪಾಧ್ಯಕ್ಷರಾದ ಸುರೇಶ್ ಗೌಡ ಕೂಡಿಗೆ ವಂದಿಸಿದರು.ಯಶೋಧ ರಾಘವೇಂದ್ರ ಗೌಡ ಪೊದುoಬಿಲ ಮತ್ತು ಸಿಬ್ಬಂದಿಯಾದ ಗೀತಾ ಚಿದಾನಂದ ಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಕಾಶಿಪಟ್ಣ ಸ.ಪ್ರೌ. ಶಾಲೆಯ ಶಿಕ್ಷಕಿ ಸೌಮ್ಯರವರಿಗೆ 4 ಬೆಳ್ಳಿ ಹಾಗೂ 1 ಕಂಚಿನ ಪದಕ

Suddi Udaya

ದೀಪಾವಳಿಗೆ ಝಗಮಗಿಸಿದ ವೇಣೂರು

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಯಶವಂತ, ಉಪಾಧ್ಯಕ್ಷರಾಗಿ ಜಾನಕಿ ಆಯ್ಕೆ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಹಬ್ಬ 2026

Suddi Udaya

ಬೆಂಗಳೂರುನಲ್ಲಿರುವ ಯೂಟ್ಯೂಬರ್ ಸಮೀರ್ ಎಮ್.ಡಿ ಮನೆಯನ್ನು ಸುತ್ತುವರಿದ ಧರ್ಮಸ್ಥಳ ಪೊಲೀಸರು

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಯಾತ್ರಿ ನಿವಾಸಕ್ಕೆ ಶಿಲಾನ್ಯಾಸ

Suddi Udaya
error: Content is protected !!