July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪ್ರಯೋಗಾಲಯ ಉಪಕರಣಗಳ ಹಸ್ತಾಂತರ ಮತ್ತು ಪ್ರತಿಭಾ ಪುರಸ್ಕಾರ

ಅಳದಂಗಡಿ : ಇಲ್ಲಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಾರಾದೀಪ್ ಪಾಸ್ಪೇಟ್ಸ್ ಲಿಮಿಟೆಡ್ ಮಂಗಳೂರು ಇವರು ನೀಡಿರುವ ರೂ. 2.5 ಲಕ್ಷ ಮೊತ್ತದ ಪ್ರಯೋಗಾಲಯ ಉಪಕರಣಗಳ ಹಸ್ತಾಂತರ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ಕಾಲೇಜು ಸಭಾಂಗಣದಲ್ಲಿ ಜರಗಿತು.

ಪಾರಾದೀಪ್ ಪಾಸ್ಪೇಟ್ಸ್ ಲಿಮಿಟೆಡ್ ಮಂಗಳೂರು ಇದರ ಮೆಡಿಕಲ್ ಸರ್ವಿಸಸ್ ಜನರಲ್ ಮ್ಯಾನೇಜರ್ ಡಾ. ಯೋಗೀಶ್ ಇವರು ಪ್ರಯೋಗಾಲಯ ಉಪಕರಣಗಳನ್ನು ಪ್ರಾಂಶುಪಾಲರಿಗೆ ಹಸ್ತಾಂತರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು ಸಮಾರಂಭದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಸನ್ನಿ ಕೆ ಎಂ ರವರು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು ಇವರು ವಿದ್ಯಾರ್ಥಿಗಳು ವಿಜ್ಞಾನ ಉಪಕರಣಗಳ ಸದುಪಯೋಗ ಪಡೆದು ಕಲಿಕೆಯಲ್ಲಿ ಉನ್ನತ ಸಾಧನೆ ಮಾಡಿ ಪೋಷಕರಿಗೆ ಸಮಾಜಕ್ಕೆ ಕೀರ್ತಿವಂತರಾಗಬೇಕು ಎಂದು ಶುಭ ಹಾರೈಸಿದರು.

ವೇದಿಕೆಯಲ್ಲಿ ಪಾರಾದೀಪ್ ಪಾಸ್ಪೇಟ್ಸ್ ಲಿಮಿಟೆಡ್ ಮಂಗಳೂರು ಇದರ ಸಿ ಎಸ್ ಆರ್ ಸಂಚಾಲಕರಾದ ವಿವೇಕ್ ಕೋಟ್ಯಾನ್, ಆಮಂತ್ರಣ ಪರಿವಾರದ ವಿಜಯಕುಮಾರ್ ಜೈನ್, ಹಿರಿಯ ಉಪನ್ಯಾಸಕಿ ಭಾರತಿ, ವಿದ್ಯಾರ್ಥಿ ನಾಯಕರಾದ ಸುದರ್ಶನ್ ಮತ್ತು ಶ್ರೇಯಾ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕಳೆದ ವರ್ಷ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪ್ರತಿಭಾ ಪುರಸ್ಕಾರದಲ್ಲಿ ಕ್ರೀಡಾ ಸ್ಪರ್ಧೆಗಳ ಪಟ್ಟಿಯನ್ನು ರಾಜ್ಯಶಾಸ್ತ್ರ ಉಪನ್ಯಾಸಕರಾದ ಸಂದೀಪ್ ಮತ್ತು ಸಮಾಜಶಾಸ್ತ್ರ ಉಪನ್ಯಾಸಕಿ ತುಳಸಿ ವಾಚಿಸಿದರು. ಕಲಿಕೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳ ಪಟ್ಟಿಯನ್ನು ರಸಾಯನಶಾಸ್ತ್ರ ಉಪನ್ಯಾಸಕ ರಾಮಚಂದ್ರ ಎ ಜಿ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರ ಪಟ್ಟಿಯನ್ನು ಭೌತಶಾಸ್ತ್ರ ಉಪನ್ಯಾಸಕಿ ಪಲ್ಲವಿ ವಾಚಿಸಿದರು. ಗಣಿತಶಾಸ್ತ್ರ ಉಪನ್ಯಾಸಕ ಸದಾನಂದ ಕುಲಾಲ್ ಸ್ವಾಗತಿಸಿದರು. ಪ್ರಶಾಂತ್ ಕುಮಾರ್ ಜೀವಶಾಸ್ತ್ರ ಉಪನ್ಯಾಸಕರು ನಿರೂಪಿಸಿದ ಕಾರ್ಯಕ್ರಮದಲ್ಲಿ ಕನ್ನಡ ಉಪನ್ಯಾಸಕರಾದ ಗಾಯತ್ರಿ ಧನ್ಯವಾದವಿತ್ತರು.

Related posts

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಗಸ್ತು ಅರಣ್ಯ ಪಾಲಕರಾಗಿ ನಾರಾವಿಯ ಅಣ್ಣ-ತಮ್ಮ ನೇಮಕ

Suddi Udaya

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪ್ರಾಪ್ತಿ ಎಂ ಗೌಡರಿಗೆ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ರವರಿಂದ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಲ್ಮಂಜ: ದೇವರಗುಡ್ಡೆ ನಿವಾಸಿ ಪುರಂದರ ಹೆಗ್ಡೆ ನಿಧನ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್, ಸೀರೆಗಳಿಗೆ ಕೇವಲ ರೂ 99

Suddi Udaya
error: Content is protected !!