25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಯ್ಯೂರಿನಲ್ಲಿ ಕ.ಸಾ.ಪ ತಾಲೂಕು ಸಮ್ಮೇಳನ; ಡಾ. ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಬೆಳ್ತಂಗಡಿ ವತಿಯಿಂದ ತಾಲೂಕಿನ 19 ನೇ ಕನ್ನಡ ಸಾಹಿತ್ಯ ಸಮ್ಮೇಳನವು ಕೊಯ್ಯೂರು ಸರಕಾರಿ ಪ್ರೌಢ ಶಾಲೆಯಲ್ಲಿ ಡಿ.28 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ‌ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಅಶೀರ್ವದಿಸಿದರು.


ಈ‌ ವೇಳೆ ಕ.ಸಾ. ಪ ಜಿಲ್ಲಾಧ್ಯಕ್ಷ ಡಾ.ಎಂ ಪಿ ಶ್ರೀನಾಥ್, ತಾ. ಅಧ್ಯಕ್ಷ ಡಿ ಯದುಪತಿ ಗೌಡ, ಬೆಳ್ತಂಗಡಿ ಹೋಬಳಿ ಅಧ್ಯಕ್ಷ ಡಾ. ದಿವ ಕೊಕ್ಕಡ, ಸಂಯೋಜನಾ ಸಮಿತಿ ಕಾರ್ಯಾಧ್ಯಕ್ಷರುಗಳಾದ ಮೋಹನ ಗೌಡ ಕೊಯ್ಯೂರು ಮತ್ತು ರಾಧಾಕೃಷ್ಣ ತಚ್ಚಮೆ,
ಪ್ರಧಾನ ಕಾರ್ಯದರ್ಶಿ ಲೋಕೇಶ್ ಗೌಡ ಪಾಂಬೇಲು, ಸಂಘಟನಾ ಕಾರ್ಯದರ್ಶಿ ಕೇಶವ ಗೌಡ ಕೋಂಗುಜೆ, ಕೋಶಾಧಿಕಾರಿ ಸುಧಾಕರ ಶೆಟ್ಟಿ, ಪದಾಧಿಕಾರಿಗಳಾದ ಕೇಶವ ಗೌಡ ಕಂಗಿತ್ತಿಲು, ನವೀನ್ ಗೌಡ ವಾದ್ಯಕೋಡಿ, ರಾಜ್ಯ ಭಜನಾ ಪರಿಷತ್ ಅಧ್ಯಕ್ಷ ಚಂದ್ರಶೇಖರ ಸಾಲಿಯಾನ್ ಮೊದಲಾದವರು ಉಪಸ್ಥಿತರಿದ್ದರು.

Related posts

ಪುದುವೆಟ್ಟು ಶ್ರೀ ಧ.ಮಂ ಅ.ಹಿ.ಪ್ರಾ.ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉತ್ತಮ ಶಾಸಕ ಪ್ರಶಸ್ತಿ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರಿಗೆ ಇಂದಬೆಟ್ಟು ಕಾರ್ಯಕರ್ತರಿಂದ ಗೌರವಾರ್ಪಣೆ

Suddi Udaya

ಕಾಶಿಬೆಟ್ಟುನಲ್ಲಿ ರಸ್ತೆ ಮಧ್ಯೆ ಕೈಕೊಟ್ಟ ಟ್ರಕ್: ತಾಸುಗಟ್ಟಲೆ ವಾಹನ ಬ್ಲಾಕ್

Suddi Udaya

ತಾ.ಪಂ ದಿಲ್ಲಿ ಯುವನಿಧಿ ಯೋಜನೆಯ ಫಲಾನುಭವಿಗಳ ನೈಜತೆಯ ಭೌತಿಕ ಪರಿಶೀಲನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಭೇಟಿ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ

Suddi Udaya
error: Content is protected !!