23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಅನುಮತಿ ನೀಡಲು ಪಡಂಗಡಿ ಜನಸ್ಪಂದನ ಸಭೆಯಲ್ಲಿ ಗ್ರಾಮಸ್ಥರು ಆಗ್ರಹ

ಪಡಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪಡಂಗಡಿ ಗ್ರಾಮ ಪಂಚಾಯತ್ ಮಟ್ಟದ 26ನೇ ಜನಸ್ಪಂದನ ಸಭೆ ಡಿ. 23 ರಂದು ಗ್ರಾಮ ಗಣಪತಿ ಭವನ ಪಡಂಗಡಿಯಲ್ಲಿ ನಡೆಯಿತು.

ಜಾತ್ರೆ ನೇಮೋತ್ಸವದ ಅಂಗವಾಗಿ ನಡೆಯುವ ಸಾಂಪ್ರಾದಾಯಿಕ ಕೋಳಿ ಅಂಕಕ್ಕೆ ಅನುಮತಿ ನೀಡುವಂತೆ ಸಾರ್ವಜನಿಕರು ಶಾಸಕರಿಗೆ ಮನವಿ ಮಾಡಿದರು.
ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಅನುಮತಿ ನೀಡುತ್ತಿಲ್ಲ, ಕೇಪುವಿನಲ್ಲಿ ಕೇಸ್ ದಾಖಲಿಸಿದ್ದಾರೆ. ಎರಡು ವರ್ಷದ ಹಿಂದೆ ಕೆಡಿಪಿ ಸಭೆಯಲ್ಲಿ ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಅನುಮತಿ ನೀಡುವಂತೆ ವಿಷಯ ಪ್ರಸ್ತಾಪಿಸಿದ್ದೆ ಆದರೆ ಅಂದು ನನ್ನ ಟ್ರೋಲ್ ಮಾಡಿದರು ಇವಾಗ ಅನುಮತಿ ನೀಡುತ್ತಿಲ್ಲ. ಈ ಬಗ್ಗೆ ಜಿಲ್ಲಾಡಳಿತ ದೊಂದಿಗೆ ಚರ್ಚಿಸಲಾಗುವುದು ಎಂದು ಶಾಸಕರು ಹೇಳಿದರು.

ಗ್ರಾಮ ವ್ಯಾಪ್ತಿಯಲ್ಲಿ ತಂತಿಗಳ ಮೇಲೆ ಅಪಾಯಕಾರಿ ಮರಗಳು ಬಾಗಿಕೊಂಡಿದೆ ಸಂಬಂಧ ಪಟ್ಟ ಇಲಾಖೆಗಳು ಕ್ರಮ ವಹಿಸುತ್ತಿಲ್ಲ, ನಾನಾ ಕಡೆಗಳಲ್ಲಿ ಹಳೆಯ ತಂತಿ ಕಂಬ ಗಳನ್ನು ಬದಲಾಯಿಸಬೇಕು ಹೆಚ್ಚುವರಿ ಸಾಮಾರ್ಥ್ಯದ ವಿದ್ಯುತ್ ಪರಿವರ್ತಕ ಬೇಕು ಎಂದು ನಾಗರೀಕರು ಶಾಸಕರಲ್ಲಿ ಬೇಡಿಕೆಯನ್ನು ಇಟ್ಟರು. ತಕ್ಷಣವೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.

ಪಡಂಗಡಿಯಲ್ಲಿ ಸಾರ್ವಜನಿಕ ಆಟ ಮೈದಾನ ನಿರ್ಮಾಣಕ್ಕೆ ಸಾರ್ವಜನಿಕರು ಆಗ್ರಹಿಸಿದರು. ನಂದಿಬೆಟ್ಟ 5ಸೆಂಟ್ಸ್ ಕಾಲೋನಿ ತಂತಿ ಮೇಲೆವಿರುವ ಮರಗಳನ್ನು ಕುಡಿಯಬೇಕು.

ತಹಶೀಲ್ದಾರ್ ಪ್ರಥ್ವಿ ಸಾನಿಕಂ ತಾಲೂಕು ಪಂಚಾಯತ್, ಲೆಕ್ಕಾಧಿಕಾರಿ ಗಣೇಶ್ ಪೂಜಾರಿ, ಅಧ್ಯಕ್ಷ ವಸಂತ್,
ಉಪಾಧ್ಯಕ್ಷೆ ವಸಂತಿ ಪಂಚಾಯತ್, ಪಡಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಂತೋನಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಫಾನ, ಅಧಿಕಾರಿಗಳು, ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ; ಚಂಡಿಕಾಹೋಮ

Suddi Udaya

ಸರ್ಕಾರದ ಹಿಂದೂ ವಿರೋಧಿ ‘ದ್ವೇಷ ಭಾಷಣ ತಡೆ ಕಾಯಿದೆ’ ಮತ್ತು ಬಾಂಗ್ಲಾದೇಶದ ಹಿಂದೂ ಹತ್ಯಾಕಾಂಡದ ವಿರುದ್ಧ ಬೆಳ್ತಂಗಡಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ

Suddi Udaya

ಬೆಳ್ತಂಗಡಿ ಯೋಜನೆಯ ಸೇವಾಪ್ರತಿನಿಧಿಗಳ ಪ್ರಗತಿ ಪರಿಶೀಲನಾ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹೇಂದ್ರ ಕಂಪನಿಯ ಹೊಸ ಮಾದರಿಯ ಕಾರು ಕೊಡುಗೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಮೆಸ್ಕಾಂ ರಸ್ತೆಯಲ್ಲಿ ರಾತ್ರಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥತೆ; ಬೆಳ್ತಂಗಡಿ ಪ.ಪಂ ಅಧ್ಯಕ್ಷ ಜಯಾನಂದ ಗೌಡ ನೇತೃತ್ವದಲ್ಲಿ ಬಾಲಕಿ ಸಿಯೋನ್ ಆಶ್ರಮಕ್ಕೆ ದಾಖಲು

Suddi Udaya

ಕೊಕ್ಕಡದಲ್ಲಿ ಗಗನ್ ಪ್ರಾವಿಷನ್ ಸ್ಟೋರ್ಸ್ ಮತ್ತು ಗಗನ್ ಸ್ಟುಡಿಯೋ ಶುಭಾರಂಭ

Suddi Udaya
error: Content is protected !!