24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ ಸಿಬಿಎಸ್ಇ ಶಾಲೆಯಲ್ಲಿ ಪ್ರತಿಭಾ ಕಲರವ ‘ಕಲಾಬ್ದಿ – 2025’: ‘ವಿಷನ್ 25 -26’ ಬಿಡುಗಡೆಗೊಳಿಸಿದ ಡಿ.ಹರ್ಷೇಂದ್ರ ಕುಮಾ‌ರ್

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (CBSE, ನವದೆಹಲಿಗೆ ಸಂಯೋಜಿತ) ಶಾಲೆಯ ವತಿಯಿಂದ ವಾರ್ಷಿಕೋತ್ಸವದ ಪ್ರಯುಕ್ತ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಆಯೋಜಿಸಲಾದ ಎರಡು ದಿನದ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಕಲಾಬ್ದಿ – 2025 ಎರಡನೇ ದಿನದ ಪ್ರತಿಭಾ ಕಲರವ ನಡೆಯಿತು.

ಎರಡನೇ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬಣ್ಣ ಬಣ್ಣದ ಉಡುಗೆ ತೊಡುಗೆಗಳ ಜೊತೆಗೆ ವಿನೂತನವಾದ ಭರತನಾಟ್ಯ, ಯಕ್ಷಗಾನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನ ನೀಡಿದರು.

ಇದೇ‌ ಸಂದರ್ಭದಲ್ಲಿ ಶಾಲೆಯ ವಾರ್ಷಿಕ ಮ್ಯಾಗಝಿನ್ ‘ ವಿಷನ್ 2025-26 ಪುಸ್ತಕವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾ‌ರ್ ಬಿಡುಗಡೆಗೊಳಿಸಿದರು.

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ, ಧರ್ಮಸ್ಥಳದ ಡಾ. ಹೇಮಾವತಿ ವಿ ಹೆಗ್ಗಡೆ ಶೈಕ್ಷಣಿಕ ವರ್ಷದಲ್ಲಿ ವಿಶೇಷ ಸಾಧನೆ ಮಾಡಿದ ಶಾಲೆಯ ವಿದ್ಯಾರ್ಥಿಗಳನ್ನು ಗೌರವಿಸಿ, ಶುಭ ಹಾರೈಸಿದರು. ಈ ವೇಳೆ ಸೋನಿಯಾ ಯಶೋವರ್ಮ, ಮುಖ್ಯ ಶಿಕ್ಷಕ ಮನಮೋಹನ್ ನಾಯ್ಕ್ ಸೇರಿದಂತೆ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರತಿಭಾ ಸಮಾರಂಭದಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಂಯೋಜಕ ಶಶಿಶೇಖರ್ ಕಾಕತ್ಕಾರ್ ಸೇರಿದಂತೆ ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರು, ಸಿಬ್ಬಂದಿಗಳು, ಶಿಕ್ಷರು , ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗಿಯಾಗಿದ್ದರು. ಸಮಾರಂಭವನ್ನು ಶಾಲೆಯ ಆಂಗ್ಲ ಭಾಷಾ ಅಧ್ಯಾಪಕಿ ನೀತು ಪ್ರಸಾದ್ ಮತ್ತು ಶಾಂತಿ ಜಾರ್ಜ್ ನಿರೂಪಿಸಿ, ವಂದಿಸಿದರು.

Related posts

ಅ.7: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ವಾಣಿ ವಿದ್ಯಾ ಸಮ್ಮಾನ್, ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಬೆಳ್ತಂಗಡಿ : ಆರು ಮಂದಿ ಯೂಟ್ಯೂಬರ್ ಗಳಿಗೆ ಎಸ್.ಐ.ಟಿ ಬುಲಾವ್

Suddi Udaya

ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಾಗಳಿಂದ ಪಾರು

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಅಂಡಿಂಜೆ : ಮಕ್ಕಿಲ ನಿವಾಸಿ ಶ್ರೀಮತಿ ಚೆಲುವಮ್ಮ ಪೂಜಾರ್‍ತಿ ನಿಧನ

Suddi Udaya
error: Content is protected !!