23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ ಲಾಡ್ಜ್ ನಲ್ಲಿ ಅಕ್ರಮ ಜೂಜಾಟ: ಧರ್ಮಸ್ಥಳ ಪೊಲೀಸರಿಂದ ದಾಳಿ: 11 ಮಂದಿಯ ಬಂಧನ ; ರೂ.3 ಲಕ್ಷ ನಗದು ವಶ

ಬೆಳ್ತಂಗಡಿ : ಅಕ್ರಮವಾಗಿ ಜೂಜಾಟ(ಉಲಾಯಿ-ಪಿದಾಯಿ) ಆಡುತ್ತಿದ್ದ ಲಾಡ್ಜ್ ಮೇಲೆ ಬೆಳ್ತಂಗಡಿ ವೃತ್ತ‌ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದಲ್ಲಿ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ 11 ಮಂದಿಯನ್ನು ಬಂಧಿಸಿ 13 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಕನ್ಯಾಡಿ ಬಳಿಯ ಖಾಸಗಿ ಲಾಡ್ಜ್ ನಲ್ಲಿ ಅಕ್ರಮವಾಗಿ ಜನ ಸೇರಿ ಜೂಜಾಟ(ಉಲಾಯಿ-ಪಿದಾಯಿ) ಆಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಡಿ.22 ರಂದು ರಾತ್ರಿ 7:40 ಕ್ಕೆ ಲಾಡ್ಜ್ ಮೇಲೆ ಬೆಳ್ತಂಗಡಿ ವೃತ್ತ‌ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದಲ್ಲಿ ಧರ್ಮಸ್ಥಳ ಪೊಲೀಸರು ದಾಳಿ ಮಾಡಿದ್ದಾರೆ.

ದಾಳಿ ವೇಳೆ ಜೂಜಾಟ(ಉಲಾಯಿ-ಪಿದಾಯಿ) ಆಡುತ್ತಿದ್ದ 11 ಮಂದಿಯನ್ನು ಬಂಧಿಸಿದ್ದು‌. ಬಂಧಿತರ ಬಳಿ 3 ಲಕ್ಷದ 7 ಸಾವಿರ ರೂಪಾಯಿ ಹಣ, ಜೂಜಾಟಕ್ಕೆ ಬಳಸಿದ ಚೇಯರ್ ,ಟೇಬಲ್, ಜೂಜಾಟದ ಎಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಜೂಜಾಟ ಆಡುತ್ತಿದ್ದ ಒಟ್ಟು 13 ಮಂದಿ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದಲ್ಲಿ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್ ಗಾಣಿಗೇರ ತಂಡದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಕಳಿಯ ಗ್ರಾ.ಪಂ. ಗ್ರಾಮ ಸಭೆ : ಲೋಕೋಪಯೋಗಿ ಇಲಾಖೆಯವರು ಬರುವ ತನಕ ನಿಲ್ಲುತೇವೆ: ಕೇಶವ ಪೂಜಾರಿ

Suddi Udaya

ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಕ್ಷಿತ್ ಎಸ್ ಬಂಗೇರ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ತೆಕ್ಕಾರು ಕುಟ್ಟಿಕಳ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ಅಕ್ಟೋಬರ್ 2ರಂದು ಬೆಳ್ತಂಗಡಿಯಲ್ಲಿ ತಾಲೂಕು ಮಟ್ಟದ ಗಾಂಧಿ ಜಯಂತಿ ಆಚರಣೆಗೆ ನಿರ್ಧಾರ: ತಾ. ಜನಜಾಗೃತಿ ವೇದಿಕೆ ಸಭೆ

Suddi Udaya

ಪಂಜಾಬ್ ನಲ್ಲಿ ಅಕಾಂಕ್ಷ ಆತ್ಮಹತ್ಯೆ ಪ್ರಕರಣ: ಧರ್ಮಸ್ಥಳದ ಬೋಳಿಯಾರು ಮನೆಗೆ ತಲುಪಿದ ಮೃತದೇಹ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ರವರಿಗೆ ಮನವಿ

Suddi Udaya
error: Content is protected !!