23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಪ್ರಶಸ್ತಿ

ಬೆಳ್ತಂಗಡಿ : ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಹಭಾಗಿತ್ವದ ಮೂಡುಬಿದಿರೆಯ ಸೈಂಟ್ ಥೋಮಸ್ ಸಂಸ್ಥೆಯ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಬೆಳ್ತಂಗಡಿಯ ಎಸ್.ಡಿ.ಎಂ ಆಂಗ್ಲಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿಗಳು ಲಭಿಸಿವೆ.

9 ತಾಲೂಕುಗಳನ್ನು ಒಳಗೊಂಡ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲಮಾಧ್ಯಮ ಶಾಲೆಯ 13 ವಿದ್ಯಾರ್ಥಿಗಳು ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಈ ಪೈಕಿ ನಡೆದ ಜಿಲ್ಲಾ ಮಟ್ಟದ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡವು ಪ್ರಥಮ ಸ್ಥಾನ ಪಡೆದಿದೆ. ಈ ಮೂಲಕ ಮುಂದೆ ನಡೆಯಲಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಶಾಲೆಯ 6 ವಿದ್ಯಾರ್ಥಿಗಳಾದ ಪೂರ್ವಿ, ಪ್ರಥ್ವೀ ವಿ ಕುಲಾಲ್, ಶ್ರೀ ರಕ್ಷಾ ಎಮ್, ರಿದು ಎಸ್ ನಾಯ್ಕ್, ಸಂಜನಾ ಎಸ್ ಹಾಗು ತೇಜಸ್ ಆಯ್ಕೆಗೊಂಡಿದ್ದಾರೆ. ವಿಜೇತ ತಂಡಕ್ಕೆ ಶಾಲೆಯ‌ ಸಹ ಶಿಕ್ಷಕಿಯರಾದ ಗೀತಾ ಮತ್ತು ಕಾರುಣ್ಯ ತರಬೇತಿ ನೀಡಿರುತ್ತಾರೆ.

ಇದೇ ದಿನ ನಡೆದ ಕವ್ವಾಲಿ ಗೀತಾ ಸ್ಪರ್ಧೆಯಲ್ಲಿ ಶಾಲೆಯ ತಂಡವು ಭಾಗವಹಿಸಿ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ. ತಂಡದಲ್ಲಿ ಅನಘ ಮರಾಟೆ, ಶ್ರೀ ನಂದನ್, ನಿದೀಶ್, ಸಹನಾ, ರಿಶೀತಾ ಮತ್ತು ಶ್ರೇಯಸ್ ಭಾಗವಹಿಸಿದ್ದರು.

ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.

Related posts

ಕೊಲ್ಲಿ ಬ್ರಹ್ಮಕಲಶಕ್ಕೆ ಲಾಯಿಲ ಗ್ರಾಮಸ್ಥರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಉಚಿತ ನೀಟ್ ಲಾಂಗ್ ಟರ್ಮ್ ಕೋಚಿಂಗ್

Suddi Udaya

ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ

Suddi Udaya

ಕೊರಿಂಜ: ಯೋಗ ತರಬೇತಿ ಶಿಬಿರದ ಪೂರ್ವಭಾವಿ ಸಭೆ

Suddi Udaya

ತೆಂಕಕಾರಂದೂರು: ಅಕ್ರಮ ಮರಳು ಸಾಗಟ: ಆರೋಪಿ ಸಹಿತ ಪಿಕಪ್ ವಾಹನ ವಶ

Suddi Udaya
error: Content is protected !!