22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ: ಟೈಲರಿಂಗ್ ತರಬೇತಿ ಸಮಾರೋಪ ಸಮಾರಂಭ

ಮುಂಡಾಜೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಮುಂಡಾಜೆ ವಲಯದ ಕಡಿರುದ್ಯಾವರ ಕಾರ್ಯಕ್ಷೇತ್ರದಲ್ಲಿ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಮೇರಿ ಅಬ್ರಹಾಂ ರವರ ಮನೆಯಲ್ಲಿ ನಡೆಸಲಾಗಿದ್ದು ಇದರ ಸಮಾರೋಪ ಸಮಾರಂಭವನ್ನು ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲೆಯ ನಿರ್ದೇಶಕ ದಿನೇಶ್ ಡಿ ದೀಪ ಬೆಳಗಿಸಿ ಅವಕಾಶವನ್ನು ಬಳಸಿಕೊಂಡು ಉತ್ತಮ ರೀತಿಯಲ್ಲಿ ತೊಡಗಿಸಿಕೊಂಡಲ್ಲಿ ಅಬಿವೃದ್ದಿ ಸಾಧ್ಯ ಮನೆಯಲ್ಲಿಯೇ ಇದ್ದುಕೊಂಡು ಸ್ಪ ಉದ್ಯೋಗ ಮಾಡಿ ಆದಾಯ ಪಡೆಯಲು ಟೈಲರಿಂಗ್ ಉದ್ಯೋಗ ಉತ್ತಮವಾಗಿದೆ. ಕ್ಷೇತ್ರದಿಂದ ಈ ಒಂದು ತರಬೇತಿ ಪಡೆಯಲು ಅವಕಾಶ ಕಲ್ಪಿಸಿದ್ದು ಇನ್ನೂ CRE ಮತ್ತು ರುಡ್ ಸೆಟ್ ಮೂಲಕ ಹೆಚ್ಚಿನ ತರಬೇತಿ ಪಡೆಯಬಹುದು.ಅವಶ್ಯಕತೆ ಇದ್ದಲ್ಲಿ ಸಿಡ್ನಿ ಸಾಲ ಪಡೆಯಬಹುದು ಎಂದು ತಿಳಿಸಿದರು.

ಸಿ ಎ ಬ್ಯಾಂಕ್ ಉಪಾಧ್ಯಕ್ಷ ಆನಂದ ರವರು ನಮ್ಮ ಊರಿನ ಮಹಿಳೆಯರಿಗೆ ಸ್ವಉದ್ಯೋಗ ಮಾಡಲು ತರಬೇತಿಗೆ ಅವಕಾಶ ಕಲ್ಪಿಸಿದ್ದಕ್ಕೆ ಸಂತೋಷ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಾವತಿ ಮಾತನಾಡುತ್ತ ನಾನು ಇವತ್ತು ಈ ವೇದಿಕೆಯಲ್ಲಿ ನಿಂತು ಧೈರ್ಯದಿಂದ ಮಾತನಾಡ ಬೇಕಾದರೆ ಜ್ಞಾನ ವಿಕಾಸ ಕೇಂದ್ರವೇ ಪ್ರೇರಣೆಯಾಗಿದೆ . ಇವತ್ತಿನ ಕಾರ್ಯಕ್ರಮದ ಸದುಪಯೋಗವನ್ನೂ ಪಡೆದುಕೊಂಡು ನಿಮ್ಮ ಅದಾಯವನ್ನು ಹೆಚ್ಚಿಸಿಕೊಳ್ಳಿ ಎಂದು ತಿಳಿಸಿದರು.

ಟೈಲರಿಂಗ್ ತರಬೇತಿ ಪಡೆದ ಸದಸ್ಯರು ಹಾಗೂ ಶಿಕ್ಷಕರು ಅನಿಸಿಕೆಯನ್ನು ವ್ಯಕ್ತ ಪಡಿಸಿದರು. ವೇದಿಕೆಯಲ್ಲಿ ಯೋಜನಾಧಿಕಾರಿ ಯಶೋಧರ , ಮನೆಯ ಹಿರಿಯರಾದ ಅಬ್ರಹಾಂ , ಮಲ್ಲಡ್ಕ ಒಕ್ಕೂಟ ಅಧ್ಯಕ್ಷ ಗೋಪಾಲ, ಟೈಲರಿಂಗ್ ತರಬೇತಿ ಶಿಕ್ಷಕಿ ಪುಷ್ಪ , ಮೇಲ್ವಿಚಾರಕರಾದ ಜನಾರ್ದನ್ ಉಪಸ್ಥಿತರಿದ್ದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರಾವಸಂತ್ ನಿರೂಪಿಸಿ, ದಿವ್ಯ ಸ್ವಾಗತಿಸಿ ಸೇವಾಪ್ರತಿನಿಧಿ ರಶ್ಮಿ ಧನ್ಯವಾದ ನೀಡಿದರು.

Related posts

ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಧಾಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya

ನಾಳೆ(ಜೂ.25): ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಪ್ರತಿಭಾ ಕಾರಂಜಿ ಭರತನಾಟ್ಯ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಆಟೋದಲ್ಲಿ ಅಕ್ರಮ ಗೋ ಮಾಂಸ ಸಾಗಾಟ ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಶಿಶಿಲ ಜಯರಾಮ ನೆಲ್ಲಿತ್ತಾಯರಿಗೆ ” ಭಜನಾ ಭಾಸ್ಕರ ” ಪ್ರಶಸ್ತಿ :

Suddi Udaya
error: Content is protected !!