26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ: ಟೈಲರಿಂಗ್ ತರಬೇತಿ ಸಮಾರೋಪ ಸಮಾರಂಭ

ಮುಂಡಾಜೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಮುಂಡಾಜೆ ವಲಯದ ಕಡಿರುದ್ಯಾವರ ಕಾರ್ಯಕ್ಷೇತ್ರದಲ್ಲಿ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಮೇರಿ ಅಬ್ರಹಾಂ ರವರ ಮನೆಯಲ್ಲಿ ನಡೆಸಲಾಗಿದ್ದು ಇದರ ಸಮಾರೋಪ ಸಮಾರಂಭವನ್ನು ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲೆಯ ನಿರ್ದೇಶಕ ದಿನೇಶ್ ಡಿ ದೀಪ ಬೆಳಗಿಸಿ ಅವಕಾಶವನ್ನು ಬಳಸಿಕೊಂಡು ಉತ್ತಮ ರೀತಿಯಲ್ಲಿ ತೊಡಗಿಸಿಕೊಂಡಲ್ಲಿ ಅಬಿವೃದ್ದಿ ಸಾಧ್ಯ ಮನೆಯಲ್ಲಿಯೇ ಇದ್ದುಕೊಂಡು ಸ್ಪ ಉದ್ಯೋಗ ಮಾಡಿ ಆದಾಯ ಪಡೆಯಲು ಟೈಲರಿಂಗ್ ಉದ್ಯೋಗ ಉತ್ತಮವಾಗಿದೆ. ಕ್ಷೇತ್ರದಿಂದ ಈ ಒಂದು ತರಬೇತಿ ಪಡೆಯಲು ಅವಕಾಶ ಕಲ್ಪಿಸಿದ್ದು ಇನ್ನೂ CRE ಮತ್ತು ರುಡ್ ಸೆಟ್ ಮೂಲಕ ಹೆಚ್ಚಿನ ತರಬೇತಿ ಪಡೆಯಬಹುದು.ಅವಶ್ಯಕತೆ ಇದ್ದಲ್ಲಿ ಸಿಡ್ನಿ ಸಾಲ ಪಡೆಯಬಹುದು ಎಂದು ತಿಳಿಸಿದರು.

ಸಿ ಎ ಬ್ಯಾಂಕ್ ಉಪಾಧ್ಯಕ್ಷ ಆನಂದ ರವರು ನಮ್ಮ ಊರಿನ ಮಹಿಳೆಯರಿಗೆ ಸ್ವಉದ್ಯೋಗ ಮಾಡಲು ತರಬೇತಿಗೆ ಅವಕಾಶ ಕಲ್ಪಿಸಿದ್ದಕ್ಕೆ ಸಂತೋಷ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಾವತಿ ಮಾತನಾಡುತ್ತ ನಾನು ಇವತ್ತು ಈ ವೇದಿಕೆಯಲ್ಲಿ ನಿಂತು ಧೈರ್ಯದಿಂದ ಮಾತನಾಡ ಬೇಕಾದರೆ ಜ್ಞಾನ ವಿಕಾಸ ಕೇಂದ್ರವೇ ಪ್ರೇರಣೆಯಾಗಿದೆ . ಇವತ್ತಿನ ಕಾರ್ಯಕ್ರಮದ ಸದುಪಯೋಗವನ್ನೂ ಪಡೆದುಕೊಂಡು ನಿಮ್ಮ ಅದಾಯವನ್ನು ಹೆಚ್ಚಿಸಿಕೊಳ್ಳಿ ಎಂದು ತಿಳಿಸಿದರು.

ಟೈಲರಿಂಗ್ ತರಬೇತಿ ಪಡೆದ ಸದಸ್ಯರು ಹಾಗೂ ಶಿಕ್ಷಕರು ಅನಿಸಿಕೆಯನ್ನು ವ್ಯಕ್ತ ಪಡಿಸಿದರು. ವೇದಿಕೆಯಲ್ಲಿ ಯೋಜನಾಧಿಕಾರಿ ಯಶೋಧರ , ಮನೆಯ ಹಿರಿಯರಾದ ಅಬ್ರಹಾಂ , ಮಲ್ಲಡ್ಕ ಒಕ್ಕೂಟ ಅಧ್ಯಕ್ಷ ಗೋಪಾಲ, ಟೈಲರಿಂಗ್ ತರಬೇತಿ ಶಿಕ್ಷಕಿ ಪುಷ್ಪ , ಮೇಲ್ವಿಚಾರಕರಾದ ಜನಾರ್ದನ್ ಉಪಸ್ಥಿತರಿದ್ದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರಾವಸಂತ್ ನಿರೂಪಿಸಿ, ದಿವ್ಯ ಸ್ವಾಗತಿಸಿ ಸೇವಾಪ್ರತಿನಿಧಿ ರಶ್ಮಿ ಧನ್ಯವಾದ ನೀಡಿದರು.

Related posts

ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

Suddi Udaya

ಎಸ್.ಐ.ಟಿ ಯ ಮಂಜುನಾಥ್ ಗೌಡ ಲೋಕಾಯುಕ್ತ ಡಿವೈಎಸ್ಪಿಯಾಗಿ ನೇಮಕ

Suddi Udaya

ಜೂ.21: ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಜ.15: ಮಾಜಿ ಶಾಸಕ ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya

ಜ.7 : ಧರ್ಮಸ್ಥಳದಲ್ಲಿ ನೂತನ ಸಂಕೀರ್ಣ ಶ್ರೀ ಸಾನ್ನಿಧ್ಯ ಉದ್ಘಾಟನೆ ಹಾಗೂ ಜ್ಞಾನ ದೀಪ ಕಾರ್ಯಕ್ರಮ

Suddi Udaya

ಇಂದಬೆಟ್ಟುವಿನಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya
error: Content is protected !!