22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಅನುಮತಿ ನೀಡಲು ಪಡಂಗಡಿ ಜನಸ್ಪಂದನ ಸಭೆಯಲ್ಲಿ ಗ್ರಾಮಸ್ಥರು ಆಗ್ರಹ

ಪಡಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪಡಂಗಡಿ ಗ್ರಾಮ ಪಂಚಾಯತ್ ಮಟ್ಟದ 26ನೇ ಜನಸ್ಪಂದನ ಸಭೆ ಡಿ. 23 ರಂದು ಗ್ರಾಮ ಗಣಪತಿ ಭವನ ಪಡಂಗಡಿಯಲ್ಲಿ ನಡೆಯಿತು.

ಜಾತ್ರೆ ನೇಮೋತ್ಸವದ ಅಂಗವಾಗಿ ನಡೆಯುವ ಸಾಂಪ್ರಾದಾಯಿಕ ಕೋಳಿ ಅಂಕಕ್ಕೆ ಅನುಮತಿ ನೀಡುವಂತೆ ಸಾರ್ವಜನಿಕರು ಶಾಸಕರಿಗೆ ಮನವಿ ಮಾಡಿದರು.
ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಅನುಮತಿ ನೀಡುತ್ತಿಲ್ಲ, ಕೇಪುವಿನಲ್ಲಿ ಕೇಸ್ ದಾಖಲಿಸಿದ್ದಾರೆ. ಎರಡು ವರ್ಷದ ಹಿಂದೆ ಕೆಡಿಪಿ ಸಭೆಯಲ್ಲಿ ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಅನುಮತಿ ನೀಡುವಂತೆ ವಿಷಯ ಪ್ರಸ್ತಾಪಿಸಿದ್ದೆ ಆದರೆ ಅಂದು ನನ್ನ ಟ್ರೋಲ್ ಮಾಡಿದರು ಇವಾಗ ಅನುಮತಿ ನೀಡುತ್ತಿಲ್ಲ. ಈ ಬಗ್ಗೆ ಜಿಲ್ಲಾಡಳಿತ ದೊಂದಿಗೆ ಚರ್ಚಿಸಲಾಗುವುದು ಎಂದು ಶಾಸಕರು ಹೇಳಿದರು.

ಗ್ರಾಮ ವ್ಯಾಪ್ತಿಯಲ್ಲಿ ತಂತಿಗಳ ಮೇಲೆ ಅಪಾಯಕಾರಿ ಮರಗಳು ಬಾಗಿಕೊಂಡಿದೆ ಸಂಬಂಧ ಪಟ್ಟ ಇಲಾಖೆಗಳು ಕ್ರಮ ವಹಿಸುತ್ತಿಲ್ಲ, ನಾನಾ ಕಡೆಗಳಲ್ಲಿ ಹಳೆಯ ತಂತಿ ಕಂಬ ಗಳನ್ನು ಬದಲಾಯಿಸಬೇಕು ಹೆಚ್ಚುವರಿ ಸಾಮಾರ್ಥ್ಯದ ವಿದ್ಯುತ್ ಪರಿವರ್ತಕ ಬೇಕು ಎಂದು ನಾಗರೀಕರು ಶಾಸಕರಲ್ಲಿ ಬೇಡಿಕೆಯನ್ನು ಇಟ್ಟರು. ತಕ್ಷಣವೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.

ಪಡಂಗಡಿಯಲ್ಲಿ ಸಾರ್ವಜನಿಕ ಆಟ ಮೈದಾನ ನಿರ್ಮಾಣಕ್ಕೆ ಸಾರ್ವಜನಿಕರು ಆಗ್ರಹಿಸಿದರು. ನಂದಿಬೆಟ್ಟ 5ಸೆಂಟ್ಸ್ ಕಾಲೋನಿ ತಂತಿ ಮೇಲೆವಿರುವ ಮರಗಳನ್ನು ಕುಡಿಯಬೇಕು.

ತಹಶೀಲ್ದಾರ್ ಪ್ರಥ್ವಿ ಸಾನಿಕಂ ತಾಲೂಕು ಪಂಚಾಯತ್, ಲೆಕ್ಕಾಧಿಕಾರಿ ಗಣೇಶ್ ಪೂಜಾರಿ, ಅಧ್ಯಕ್ಷ ವಸಂತ್,
ಉಪಾಧ್ಯಕ್ಷೆ ವಸಂತಿ ಪಂಚಾಯತ್, ಪಡಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಂತೋನಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಫಾನ, ಅಧಿಕಾರಿಗಳು, ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಬಿಜೆಪಿ ಸ್ಥಾಪನಾ ದಿನ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಆಶಿತಾ ಜೈನ್ ರವರಿಗೆ ರಾಷ್ಟ್ರಮಟ್ಟದ ಸಿಇಇ ಯಲ್ಲಿ 8ನೇ ರ್ಯಾಂಕ್ ಹಾಗೂ ರಾಜ್ಯದಲ್ಲಿ 2 ರ್ಯಾಂಕ್

Suddi Udaya

ಮಲೆಕುಡಿಯ ಕಾಲನಿ ರಸ್ತೆಯ ಅವ್ಯವಸ್ಥೆಗೆ ತೀವ್ರ ಆಕ್ರೋಶ: ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಚುನಾವಣಾ ಬಹಿಷ್ಕಾರದ ಕೂಗು…

Suddi Udaya

ಕುವೆಟ್ಟು: ವಿದ್ಯುತ್ ಅವಘಡದಿಂದ ಸಹಾಯಕ ಪವರ್‌ಮ್ಯಾನ್ ಮೃತ್ಯು

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಅಳದಂಗಡಿ: ಸೈಂಟ್ ಪೀಟರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!