September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ

ಆರಂಬೋಡಿ: ಇತಿಹಾಸ ಪ್ರಸಿದ್ಧ, ಧಾರ್ಮಿಕ ಹಿನ್ನಲೆಯ ನಂಟು ಹೊಂದಿರುವ ಬೆಳ್ತಂಗಡಿ ತಾಲೂಕಿನ ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಪೂಂಜ ಕ್ಷೇತ್ರದ ಆಸ್ರಣ್ಣರಾದ ಕೃಷ್ಣ ಪ್ರಸಾದ್ ಆಚಾರ್ಯರವರು ಡಿ . 21 ರಂದು ಚಾಲನೆಯನ್ನು ನೀಡಿದರು.

ಬಳಿಕ ಮಾತನಾಡಿದ ಅವರು, ಕೃಷಿಕರು ಮತ್ತು ಸ್ಥಳೀಯ ಗ್ರಾಮಸ್ಥರು ಒಟ್ಟುಗೂಡಿ ಮನೋರಂಜನೆ ಜೊತೆಗೆ ಧಾರ್ಮಿಕವಾಗಿ ನಂಬಿಕೆಗೆ ಪೂರಕವಾಗಿ ಮಾಗಣೆ ದೇವರು ಮತ್ತು ದೈವಗಳ ಅನುಗ್ರಹ ಪಡೆಯುವ ನಿಟ್ಟಿನಲ್ಲಿ ಕಂಬಳ ನಿರಂತರವಾಗಿ ನಡೆಯುವ ಅಗತ್ಯವಿದೆ, ಗ್ರಾಮ ಸುಭೀಕ್ಷೆ ಆಗಲಿದೆ ಎಂದರು. ಪಡ್ಯಾರಬೆಟ್ಟು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಧರ್ಮದರ್ಶಿ ಎ. ಜೀವಂದರ ಕುಮಾರ್ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಕುಕ್ಕಿಪಾಡಿ ಗ್ರಾ.ಪಂ. ಅಧ್ಯಕ್ಷ ಶೇಖರ ಶೆಟ್ಟಿ ಬದ್ಯಾರು, ಸಿದ್ದಕಟ್ಟೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಪಿಡಿಒ ಗಣೇಶ್ ಶೆಟ್ಟಿ ಆರಂಬೋಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ರಾಯಿ ಗ್ರಾ. ಪಂ. ಅಧ್ಯಕ್ಷ ಸಂತೋಷ್ ಕುಮಾರ್ ಬೆಟ್ಟು, ಬ್ಯಾಂಕ್ ಅಧಿಕಾರಿ ಸಂತೋಷ್ ಕುಮಾರ್ ಚೌಟ, ಸಮಿತಿ ಗೌರವಾಧ್ಯಕ್ಷ ಜಗತ್ಪಾಲ ಶೆಟ್ಟಿ ಉಮನೊಟ್ಟು, ಸಂಜೀವ ಶೆಟ್ಟಿ ಗುಂಡ್ಯಾರು, ಕೆ ಎಂಎಫ್ ನಿರ್ದೇಶಕ ಪ್ರಭಾಕರ ಹುಲಿಮೇರು, ಕೃಷಿಕ ಚಂದ್ರಶೇಖರ ಗೌಡ, ಓಟಗಾರ ಆನಂದ ಶೆಟ್ಟಿ ಹಕ್ಕೇರಿ, ಕುಟ್ಟಿ ಶೆಟ್ಟಿ ಹಕ್ಕೇರಿ, ಕರಿಯಣ್ಣ ಶೆಟ್ಟಿ ಹಕ್ಕೇರಿ, ದಿನೇಶ್ ಹುಲಿಮೇರು, ಸ್ಥಳದಾನಿ ಸುಧೀರ್ ಶೆಟ್ಟಿ ಹೊಕ್ಕಾಡಿಗೋಳಿ, ಪಶು ವೈದ್ಯಾಧಿಕಾರಿ ಡಾ. ಬಾಲಕೃಷ್ಣ, ಪ್ರಮುಖರಾದ ಸುಧಾಕರ ಚೌಟ ಬಾವ, ಪುಷ್ಪರಾಜ ಜೈನ್, ಪುಷ್ಪರಾಜ್ ಶೆಟ್ಟಿ, ಪ್ರವೀಣ್ ಕುಲಾಲ್, ಸುರೇಶ್ ಶೆಟ್ಟಿ ಸಿದ್ದಕಟ್ಟೆ, ಸುಂದರ ಪೂಜಾರಿ ಎನ್., ಸಂತೋಷ್ ಶೆಟ್ಟಿ ಕೊನೆರೊಟ್ಟು, ಆಂಡ್ರು ರೇಗೋ, ನೋಣಯ ಪೂಜಾರಿ, ಅರುಣ್ ಬಾಕ್ಯಾರುಕೋಡಿ, ಕರಿಯ ಪೂಜಾರಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಕಂಬಳ ಸಮಿತಿ ಅಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ ಸ್ವಾಗತಿಸಿ, ಶಾಜಲ್ ಕಾರ್ಯಕ್ರಮ ನಿರೂಪಿಸಿದರು.

Related posts

ಕುಕ್ಕೇಡಿ : ಗುಲಾಬಿ ಶೆಟ್ಟಿ ನಿಧನ

Suddi Udaya

ಬಜಿರೆ ಪಾಲ್ದ್ಯಾರು ಮನೆಯ ಶ್ರೀಮತಿ ಚಿನ್ನಮ್ಮ ನಿಧನ

Suddi Udaya

ಮಚ್ಚಿನ: ತಾರೆಮಾರು ಸೇತುವೆಯ ಬಳಿ ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಎಸೆಯುವ ಬಗ್ಗೆ ಸ್ಥಳೀಯರ ಅಕ್ರೋಶ

Suddi Udaya

ವೇಣೂರು: ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ವತಿಯಿಂದ ಗುರು ನಮನ ಕಾರ್ಯಕ್ರಮ

Suddi Udaya

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya

ಹೊಸಂಗಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ‘ನನ್ನ ಗಿಡ ನನ್ನ ಮರ’ ಮತ್ತು ‘ನನ್ನ ನೆಲ ನನ್ನ ಜಲ’ ವಿನೂತನ ಸಪ್ತಾಹ

Suddi Udaya
error: Content is protected !!