22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ ಸಿಬಿಎಸ್ಇ ಶಾಲೆಯಲ್ಲಿ ಪ್ರತಿಭಾ ಕಲರವ ‘ಕಲಾಬ್ದಿ – 2025’: ‘ವಿಷನ್ 25 -26’ ಬಿಡುಗಡೆಗೊಳಿಸಿದ ಡಿ.ಹರ್ಷೇಂದ್ರ ಕುಮಾ‌ರ್

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (CBSE, ನವದೆಹಲಿಗೆ ಸಂಯೋಜಿತ) ಶಾಲೆಯ ವತಿಯಿಂದ ವಾರ್ಷಿಕೋತ್ಸವದ ಪ್ರಯುಕ್ತ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಆಯೋಜಿಸಲಾದ ಎರಡು ದಿನದ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಕಲಾಬ್ದಿ – 2025 ಎರಡನೇ ದಿನದ ಪ್ರತಿಭಾ ಕಲರವ ನಡೆಯಿತು.

ಎರಡನೇ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬಣ್ಣ ಬಣ್ಣದ ಉಡುಗೆ ತೊಡುಗೆಗಳ ಜೊತೆಗೆ ವಿನೂತನವಾದ ಭರತನಾಟ್ಯ, ಯಕ್ಷಗಾನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನ ನೀಡಿದರು.

ಇದೇ‌ ಸಂದರ್ಭದಲ್ಲಿ ಶಾಲೆಯ ವಾರ್ಷಿಕ ಮ್ಯಾಗಝಿನ್ ‘ ವಿಷನ್ 2025-26 ಪುಸ್ತಕವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾ‌ರ್ ಬಿಡುಗಡೆಗೊಳಿಸಿದರು.

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ, ಧರ್ಮಸ್ಥಳದ ಡಾ. ಹೇಮಾವತಿ ವಿ ಹೆಗ್ಗಡೆ ಶೈಕ್ಷಣಿಕ ವರ್ಷದಲ್ಲಿ ವಿಶೇಷ ಸಾಧನೆ ಮಾಡಿದ ಶಾಲೆಯ ವಿದ್ಯಾರ್ಥಿಗಳನ್ನು ಗೌರವಿಸಿ, ಶುಭ ಹಾರೈಸಿದರು. ಈ ವೇಳೆ ಸೋನಿಯಾ ಯಶೋವರ್ಮ, ಮುಖ್ಯ ಶಿಕ್ಷಕ ಮನಮೋಹನ್ ನಾಯ್ಕ್ ಸೇರಿದಂತೆ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರತಿಭಾ ಸಮಾರಂಭದಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಂಯೋಜಕ ಶಶಿಶೇಖರ್ ಕಾಕತ್ಕಾರ್ ಸೇರಿದಂತೆ ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರು, ಸಿಬ್ಬಂದಿಗಳು, ಶಿಕ್ಷರು , ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗಿಯಾಗಿದ್ದರು. ಸಮಾರಂಭವನ್ನು ಶಾಲೆಯ ಆಂಗ್ಲ ಭಾಷಾ ಅಧ್ಯಾಪಕಿ ನೀತು ಪ್ರಸಾದ್ ಮತ್ತು ಶಾಂತಿ ಜಾರ್ಜ್ ನಿರೂಪಿಸಿ, ವಂದಿಸಿದರು.

Related posts

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ದ.ಕ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಸ್ವಚ್ಚತಾ ಆಂದೋಲನ

Suddi Udaya

ರೂ.2.25 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ ಸಿಂಧೂರ: ಜೂ. 20 ರಂದು ಲೋಕಾರ್ಪಣೆಗೊಳ್ಳಲಿದೆಪತ್ರಿಕಾಗೋಷ್ಠಿಯಲ್ಲಿ ಅನಂತ ಭಟ್ ಮಚ್ಚಿಮಲೆ ಹೇಳಿಕೆ

Suddi Udaya

ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬಿಜೆಪಿ ಶಾಸಕರ ಹೋರಾಟ ಯಶಸ್ವಿ -ಕಳೆಂಜ ದೇವಣ್ಣ ಗೌಡರ ಮನೆ ತೆರವು ಅರಣ್ಯ ಇಲಾಖೆಯ ಪ್ರಯತ್ನ ವಿಫಲ – ಜಂಟಿ ಸರ್ವೆಗೆ ಸಮ್ಮತಿ: ಸರ್ವೆ ನಡೆಸುವವರೆಗೆ ಯಥಾ ಸ್ಥಿತಿ ಮುಂದುವರಿಕೆ

Suddi Udaya

ಡಿ.5 : ಬೆಳ್ತಂಗಡಿ ಹಾಗೂ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬಳಂಜ:ಎಲ್ಯೊಟ್ಟು ನಲ್ಲಿ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ

Suddi Udaya

ಕೊಕ್ಕಡ ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ:

Suddi Udaya
error: Content is protected !!