July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ ಲಾಡ್ಜ್ ನಲ್ಲಿ ಅಕ್ರಮ ಜೂಜಾಟ: ಧರ್ಮಸ್ಥಳ ಪೊಲೀಸರಿಂದ ದಾಳಿ: 11 ಮಂದಿಯ ಬಂಧನ ; ರೂ.3 ಲಕ್ಷ ನಗದು ವಶ

ಬೆಳ್ತಂಗಡಿ : ಅಕ್ರಮವಾಗಿ ಜೂಜಾಟ(ಉಲಾಯಿ-ಪಿದಾಯಿ) ಆಡುತ್ತಿದ್ದ ಲಾಡ್ಜ್ ಮೇಲೆ ಬೆಳ್ತಂಗಡಿ ವೃತ್ತ‌ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದಲ್ಲಿ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ 11 ಮಂದಿಯನ್ನು ಬಂಧಿಸಿ 13 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಕನ್ಯಾಡಿ ಬಳಿಯ ಖಾಸಗಿ ಲಾಡ್ಜ್ ನಲ್ಲಿ ಅಕ್ರಮವಾಗಿ ಜನ ಸೇರಿ ಜೂಜಾಟ(ಉಲಾಯಿ-ಪಿದಾಯಿ) ಆಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಡಿ.22 ರಂದು ರಾತ್ರಿ 7:40 ಕ್ಕೆ ಲಾಡ್ಜ್ ಮೇಲೆ ಬೆಳ್ತಂಗಡಿ ವೃತ್ತ‌ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದಲ್ಲಿ ಧರ್ಮಸ್ಥಳ ಪೊಲೀಸರು ದಾಳಿ ಮಾಡಿದ್ದಾರೆ.

ದಾಳಿ ವೇಳೆ ಜೂಜಾಟ(ಉಲಾಯಿ-ಪಿದಾಯಿ) ಆಡುತ್ತಿದ್ದ 11 ಮಂದಿಯನ್ನು ಬಂಧಿಸಿದ್ದು‌. ಬಂಧಿತರ ಬಳಿ 3 ಲಕ್ಷದ 7 ಸಾವಿರ ರೂಪಾಯಿ ಹಣ, ಜೂಜಾಟಕ್ಕೆ ಬಳಸಿದ ಚೇಯರ್ ,ಟೇಬಲ್, ಜೂಜಾಟದ ಎಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಜೂಜಾಟ ಆಡುತ್ತಿದ್ದ ಒಟ್ಟು 13 ಮಂದಿ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದಲ್ಲಿ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್ ಗಾಣಿಗೇರ ತಂಡದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಗ್ರಾ.ಪಂ. ನೌಕರರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಬಗ್ಗೆ ಮಾರ್ಚ್ 1ರಿಂದ ರಾಜ್ಯಾದ್ಯಂತ ಪ್ರತಿಭಟನೆ: ಸಾರ್ವಜನಿಕ ಮಹತ್ವದ ವಿಚಾರದ ಬಗ್ಗೆ ವಿಧಾನಸಭೆ ಸಭಾಪತಿಯವರಿಗೆ ಪತ್ರ

Suddi Udaya

ನಾಳೆ(ಜು.8) ಧರ್ಮಸ್ಥಳದಿಂದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಕರಾಟೆ ಚಾಂಪಿಯನ್‌ಶಿಪ್: ಹಿಮಾನ್ಸ್ ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ

Suddi Udaya

ಜ.22: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮ ತಾರಕ ಜಪ ಯಜ್ಞ: ಆಮಂತ್ರಣ ಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಬಿ. ಪ್ರಮೋದ್ ಕುಮಾರ್ ನೂಜೋಡಿ ನಿಧನ

Suddi Udaya
error: Content is protected !!