24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಅನುಮತಿ ನೀಡಲು ಪಡಂಗಡಿ ಜನಸ್ಪಂದನ ಸಭೆಯಲ್ಲಿ ಗ್ರಾಮಸ್ಥರು ಆಗ್ರಹ

ಪಡಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪಡಂಗಡಿ ಗ್ರಾಮ ಪಂಚಾಯತ್ ಮಟ್ಟದ 26ನೇ ಜನಸ್ಪಂದನ ಸಭೆ ಡಿ. 23 ರಂದು ಗ್ರಾಮ ಗಣಪತಿ ಭವನ ಪಡಂಗಡಿಯಲ್ಲಿ ನಡೆಯಿತು.

ಜಾತ್ರೆ ನೇಮೋತ್ಸವದ ಅಂಗವಾಗಿ ನಡೆಯುವ ಸಾಂಪ್ರಾದಾಯಿಕ ಕೋಳಿ ಅಂಕಕ್ಕೆ ಅನುಮತಿ ನೀಡುವಂತೆ ಸಾರ್ವಜನಿಕರು ಶಾಸಕರಿಗೆ ಮನವಿ ಮಾಡಿದರು.
ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಅನುಮತಿ ನೀಡುತ್ತಿಲ್ಲ, ಕೇಪುವಿನಲ್ಲಿ ಕೇಸ್ ದಾಖಲಿಸಿದ್ದಾರೆ. ಎರಡು ವರ್ಷದ ಹಿಂದೆ ಕೆಡಿಪಿ ಸಭೆಯಲ್ಲಿ ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಅನುಮತಿ ನೀಡುವಂತೆ ವಿಷಯ ಪ್ರಸ್ತಾಪಿಸಿದ್ದೆ ಆದರೆ ಅಂದು ನನ್ನ ಟ್ರೋಲ್ ಮಾಡಿದರು ಇವಾಗ ಅನುಮತಿ ನೀಡುತ್ತಿಲ್ಲ. ಈ ಬಗ್ಗೆ ಜಿಲ್ಲಾಡಳಿತ ದೊಂದಿಗೆ ಚರ್ಚಿಸಲಾಗುವುದು ಎಂದು ಶಾಸಕರು ಹೇಳಿದರು.

ಗ್ರಾಮ ವ್ಯಾಪ್ತಿಯಲ್ಲಿ ತಂತಿಗಳ ಮೇಲೆ ಅಪಾಯಕಾರಿ ಮರಗಳು ಬಾಗಿಕೊಂಡಿದೆ ಸಂಬಂಧ ಪಟ್ಟ ಇಲಾಖೆಗಳು ಕ್ರಮ ವಹಿಸುತ್ತಿಲ್ಲ, ನಾನಾ ಕಡೆಗಳಲ್ಲಿ ಹಳೆಯ ತಂತಿ ಕಂಬ ಗಳನ್ನು ಬದಲಾಯಿಸಬೇಕು ಹೆಚ್ಚುವರಿ ಸಾಮಾರ್ಥ್ಯದ ವಿದ್ಯುತ್ ಪರಿವರ್ತಕ ಬೇಕು ಎಂದು ನಾಗರೀಕರು ಶಾಸಕರಲ್ಲಿ ಬೇಡಿಕೆಯನ್ನು ಇಟ್ಟರು. ತಕ್ಷಣವೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.

ಪಡಂಗಡಿಯಲ್ಲಿ ಸಾರ್ವಜನಿಕ ಆಟ ಮೈದಾನ ನಿರ್ಮಾಣಕ್ಕೆ ಸಾರ್ವಜನಿಕರು ಆಗ್ರಹಿಸಿದರು. ನಂದಿಬೆಟ್ಟ 5ಸೆಂಟ್ಸ್ ಕಾಲೋನಿ ತಂತಿ ಮೇಲೆವಿರುವ ಮರಗಳನ್ನು ಕುಡಿಯಬೇಕು.

ತಹಶೀಲ್ದಾರ್ ಪ್ರಥ್ವಿ ಸಾನಿಕಂ ತಾಲೂಕು ಪಂಚಾಯತ್, ಲೆಕ್ಕಾಧಿಕಾರಿ ಗಣೇಶ್ ಪೂಜಾರಿ, ಅಧ್ಯಕ್ಷ ವಸಂತ್,
ಉಪಾಧ್ಯಕ್ಷೆ ವಸಂತಿ ಪಂಚಾಯತ್, ಪಡಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಅಂತೋನಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಫಾನ, ಅಧಿಕಾರಿಗಳು, ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕಣ್ತಪ್ಪಿನಿಂದ ಇನ್ನೊಬ್ಬರ ಖಾತೆಗೆ ಹಣ ವರ್ಗಾವಣೆ: ಮರುಪಾವತಿಸಲು ನಿರಾಕರಣೆ ; ದೂರು ದಾಖಲು

Suddi Udaya

ಎಂ.ಡಿ.ಎಸ್ ಪರೀಕ್ಷೆ: ರಾಜ್ಯಮಟ್ಟದಲ್ಲಿ ವೇಣೂರಿನ ಡಾ. ದೀಕ್ಷಾ ಅಶ್ವಿತ್‌ ಕುಲಾಲ್ ರವರಿಗೆ 5ನೇ ರ್‍ಯಾಂಕ್

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮನಶ್ರೀ ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಸನ್ಮಾನ

Suddi Udaya

ಶ್ರೀ ಮಹಮ್ಮಾಯಿ ಮರಾಟಿ ಆರಾಧನಾ ಸೇವಾ ಸಮಿತಿ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ತಂಬಾಕು ರಹಿತ ದಿನ

Suddi Udaya

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya
error: Content is protected !!