32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿಮೊಗ್ರು : ಗುರು ಪೂಜೆ ಮತ್ತು ದೀಕ್ಷಾ ಗ್ರಂಥಿದಾರಣೆ ಕಾರ್ಯಕ್ರಮ

ಸುಲ್ಕೇರಿಮೊಗ್ರು: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಸುಲ್ಕೇರಿಮೊಗ್ರು, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ, ಸುಲ್ಕೇರಿಮೊಗ್ರು, ಇದರ ಆಶ್ರಯದಲ್ಲಿ 3 ನೇ ವರ್ಷದ ಗುರು ಪೂಜೆ ಮತ್ತು ದೀಕ್ಷಾ ಗ್ರಂಥಿ ದಾರಣೆ. ಹಾಗೂ ಸಭಾ ಕಾರ್ಯಕ್ರಮ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಡಿ.21ರಂದು ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.

ನಿರಂಜನ ಶಾಂತಿಯವರ ಪೌರೋಹಿತ್ಯದಲ್ಲಿ ಗುರು ಪೂಜೆ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಸಭಾಧ್ಯಕ್ಷತೆಯನ್ನು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಸುಲ್ಕೇರಿಮೊಗ್ರು ಇದರ ಅಧ್ಯಕ್ಷ ಸಂಕೇತ್ ಬಂಗೇರ, ವಹಿಸಿದ್ದರು.
ಧಾರ್ಮಿಕ ಭಾಷಣ ಮಹೇಶ್ ಶಾಂತಿ, ಹೆಜಮಾಡಿ ಇವರು ಮಾಡಿ ನಾರಾಯಣ ಗುರುಗಳ ಜೀವನ ಚರಿತ್ರೆಯನ್ನು ಸಂಕ್ಷಿಪ್ತವಾಗಿ ತಿಳಿಸಿದರು.


ಮೂಲ್ಕಿ, ಮೂಡಬಿದ್ರೆ. ಶಾಸಕ ಉಮಾನಾಥ್ ಕೋಟ್ಯಾನ್, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಕ್ಕಳಿಗೆ ವಿಧ್ಯಾಬ್ಯಾಸದ ಜೊತೆ ಉತ್ತಮ ಸಂಸ್ಕಾರವನ್ನು ಕಲಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಶೇಷವಾಗಿ ಜಿಲ್ಲಾ ಪ್ರಶಸ್ತಿ ಪಡೆದ ಸತೀಶ್ ದೇವಾಡಿಗ ಸುಲ್ಕೇರಿಮೊಗ್ರು, ಹಾಗೂ ಯುವ ಪ್ರತಿಭೆ ಹಾಗೂ ಬಡ ರೋಗಿಗಳಿಗೆ ತನ್ನ ವೀಡಿಯೋ ಮೂಲಕ ಸಹಾಯ ಮಾಡುತ್ತಿರುವ ಜಯಂತ್ ಮಡಿವಾಳ ಹಾಗೂ ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಅಧ್ಯಕ್ಷರಾಗಿ ಆಯ್ಕೆಯಾದ ಸುಧೀರ್ ಆರ್ ಸುವರ್ಣ, ನಿರ್ದೇಶಕರಾದ ಅಶೋಕ ಕಾಡಂಗೆ, ಅಶೋಕ ನಲ್ಲಾರು ಇವರಿಗೆ ಸನ್ಮಾನಿಸಲಾಯಿತು. ಗ್ರಾಮದಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು.

ವೇದಿಕೆಯಲ್ಲಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿಯ ಅಧ್ಯಕ್ಷ ಜಯವಿಕ್ರಮ ಕಲ್ಲಾಪು, ಪ್ರಗತಿಪರ ಕೃಷಿಕರಾದ ಎಂ. ಗಂಗಾಧರ ಮಿತ್ತಮಾರು, ಸೋಮನಾಥ ಬಂಗೇರ ವರ್ಪಾಳೆ, ಯುವ ಬಿಲ್ಲವ ವೇದಿಕೆ, ಬೆಳ್ತಂಗಡಿಯ ಅಧ್ಯಕ್ಷರಾದ ಎಂ. ಕೆ. ಪ್ರಸಾದ್, ಮಹಿಳಾ ಬಿಲ್ಲವ ವೇದಿಕೆ ಬೆಳ್ತಂಗಡಿಯ ಅಧ್ಯಕ್ಷೆ ಶ್ರೀಮತಿ ಸುಮತಿ ಪ್ರಮೋದ್, ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತಿನ ಸಹಕಾರಿ ಸಂಘ ನಿಯಮಿತ ಶಿರ್ಲಾಲು ಇದರ ಅಧ್ಯಕ್ಷ ಸುಧೀರ್ ಆರ್. ಸುವರ್ಣ, ಬೇಬಿ ಬಂಗೇರ ಹುಂಬೆದಡ್ಕ., ಗುರುವಪ್ಪ ಪೂಜಾರಿ ಪಟ್ಲ, ವಿಜಯಕುಮಾರ್, ನಂದನ್ ಕುಮಾರ್, ಸಚಿನ್ ಮಾಂತ್ಯೋಲು, ಶ್ರೀಮತಿ ಶಕುಂತಳ, ಶ್ರೀಮತಿ ಮಮತ ಎಸ್.ಎಂ. ಉಪಸ್ಥಿತರಿದ್ದರು.

ಕುಮಾರಿ ಲಾಸ್ಯ ಪ್ರಾರ್ಥನೆ ಮಾಡಿದರು. ಸಂಘದ ಕಾರ್ಯದರ್ಶಿ ವಿಜಯಕುಮಾರ್ ಸ್ವಾಗತಿಸಿ. ಸುಧಾಕರ ಪೂಜಾರಿ ಅಳಿಯೂರು ಕಾರ್ಯಕ್ರಮದ ನಿರೂಪಿಸಿದರು. ಯುವ ಬಿಲ್ಲವ ವೇದಿಕೆ ಅಧ್ಯಕ್ಷ ನಂದನ್ ಕುಮಾರ್ ಧನ್ಯವಾದವಿತ್ತರು.
ಚಿತ್ರ, ವರದಿ : ಜ್ಯೋತಿಕಾ ಅಳದಂಗಡಿ.

Related posts

ಫೇಸ್‌ಬುಕ್ ಜಾಲತಾಣದಲ್ಲಿ ಮಹಿಳೆಗೆ ಚಾರಿತ್ರ್ಯಕ್ಕೆ ಧಕ್ಕೆಯಾಗುವ ಬರಹ ಬೆದರಿಕೆ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗರ್ಡಾಡಿಯಲ್ಲಿ ಭಾರಿ ಮಳೆಗೆ ಮಣ್ಣು ಕುಸಿದು ಮನೆಗೆ ಹಾನಿ, ಅದೃಷ್ಟವಶಾತ್ ಪಾರಾದ ಮನೆಯವರು

Suddi Udaya

ಧರ್ಮಸ್ಥಳ: ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರ: ‘ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ಭಜನೆಯ ಪಾತ್ರ’ ಕುರಿತು ಉಪನ್ಯಾಸ

Suddi Udaya

ಇಂದಬೆಟ್ಟು: ಹೆಬ್ಬಾವನ್ನು ಬೇಟೆಯಾಡಿದ ಕಾಳಿಂಗ ಸರ್ಪ: ಸ್ನೇಕ್ ಅಶೋಕ್ ರವರಿಂದ ಹೆಬ್ಬಾವು ರಕ್ಷಣೆ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂತ್ರಿಮಂಡಲದ ಉದ್ಘಾಟನಾ ಸಮಾರಂಭ

Suddi Udaya
error: Content is protected !!