23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿಮೊಗ್ರು : ಗುರು ಪೂಜೆ ಮತ್ತು ದೀಕ್ಷಾ ಗ್ರಂಥಿದಾರಣೆ ಕಾರ್ಯಕ್ರಮ

ಸುಲ್ಕೇರಿಮೊಗ್ರು: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಸುಲ್ಕೇರಿಮೊಗ್ರು, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ, ಸುಲ್ಕೇರಿಮೊಗ್ರು, ಇದರ ಆಶ್ರಯದಲ್ಲಿ 3 ನೇ ವರ್ಷದ ಗುರು ಪೂಜೆ ಮತ್ತು ದೀಕ್ಷಾ ಗ್ರಂಥಿ ದಾರಣೆ. ಹಾಗೂ ಸಭಾ ಕಾರ್ಯಕ್ರಮ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಡಿ.21ರಂದು ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.

ನಿರಂಜನ ಶಾಂತಿಯವರ ಪೌರೋಹಿತ್ಯದಲ್ಲಿ ಗುರು ಪೂಜೆ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಸಭಾಧ್ಯಕ್ಷತೆಯನ್ನು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಸುಲ್ಕೇರಿಮೊಗ್ರು ಇದರ ಅಧ್ಯಕ್ಷ ಸಂಕೇತ್ ಬಂಗೇರ, ವಹಿಸಿದ್ದರು.
ಧಾರ್ಮಿಕ ಭಾಷಣ ಮಹೇಶ್ ಶಾಂತಿ, ಹೆಜಮಾಡಿ ಇವರು ಮಾಡಿ ನಾರಾಯಣ ಗುರುಗಳ ಜೀವನ ಚರಿತ್ರೆಯನ್ನು ಸಂಕ್ಷಿಪ್ತವಾಗಿ ತಿಳಿಸಿದರು.


ಮೂಲ್ಕಿ, ಮೂಡಬಿದ್ರೆ. ಶಾಸಕ ಉಮಾನಾಥ್ ಕೋಟ್ಯಾನ್, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಕ್ಕಳಿಗೆ ವಿಧ್ಯಾಬ್ಯಾಸದ ಜೊತೆ ಉತ್ತಮ ಸಂಸ್ಕಾರವನ್ನು ಕಲಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಶೇಷವಾಗಿ ಜಿಲ್ಲಾ ಪ್ರಶಸ್ತಿ ಪಡೆದ ಸತೀಶ್ ದೇವಾಡಿಗ ಸುಲ್ಕೇರಿಮೊಗ್ರು, ಹಾಗೂ ಯುವ ಪ್ರತಿಭೆ ಹಾಗೂ ಬಡ ರೋಗಿಗಳಿಗೆ ತನ್ನ ವೀಡಿಯೋ ಮೂಲಕ ಸಹಾಯ ಮಾಡುತ್ತಿರುವ ಜಯಂತ್ ಮಡಿವಾಳ ಹಾಗೂ ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಅಧ್ಯಕ್ಷರಾಗಿ ಆಯ್ಕೆಯಾದ ಸುಧೀರ್ ಆರ್ ಸುವರ್ಣ, ನಿರ್ದೇಶಕರಾದ ಅಶೋಕ ಕಾಡಂಗೆ, ಅಶೋಕ ನಲ್ಲಾರು ಇವರಿಗೆ ಸನ್ಮಾನಿಸಲಾಯಿತು. ಗ್ರಾಮದಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು.

ವೇದಿಕೆಯಲ್ಲಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿಯ ಅಧ್ಯಕ್ಷ ಜಯವಿಕ್ರಮ ಕಲ್ಲಾಪು, ಪ್ರಗತಿಪರ ಕೃಷಿಕರಾದ ಎಂ. ಗಂಗಾಧರ ಮಿತ್ತಮಾರು, ಸೋಮನಾಥ ಬಂಗೇರ ವರ್ಪಾಳೆ, ಯುವ ಬಿಲ್ಲವ ವೇದಿಕೆ, ಬೆಳ್ತಂಗಡಿಯ ಅಧ್ಯಕ್ಷರಾದ ಎಂ. ಕೆ. ಪ್ರಸಾದ್, ಮಹಿಳಾ ಬಿಲ್ಲವ ವೇದಿಕೆ ಬೆಳ್ತಂಗಡಿಯ ಅಧ್ಯಕ್ಷೆ ಶ್ರೀಮತಿ ಸುಮತಿ ಪ್ರಮೋದ್, ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತಿನ ಸಹಕಾರಿ ಸಂಘ ನಿಯಮಿತ ಶಿರ್ಲಾಲು ಇದರ ಅಧ್ಯಕ್ಷ ಸುಧೀರ್ ಆರ್. ಸುವರ್ಣ, ಬೇಬಿ ಬಂಗೇರ ಹುಂಬೆದಡ್ಕ., ಗುರುವಪ್ಪ ಪೂಜಾರಿ ಪಟ್ಲ, ವಿಜಯಕುಮಾರ್, ನಂದನ್ ಕುಮಾರ್, ಸಚಿನ್ ಮಾಂತ್ಯೋಲು, ಶ್ರೀಮತಿ ಶಕುಂತಳ, ಶ್ರೀಮತಿ ಮಮತ ಎಸ್.ಎಂ. ಉಪಸ್ಥಿತರಿದ್ದರು.

ಕುಮಾರಿ ಲಾಸ್ಯ ಪ್ರಾರ್ಥನೆ ಮಾಡಿದರು. ಸಂಘದ ಕಾರ್ಯದರ್ಶಿ ವಿಜಯಕುಮಾರ್ ಸ್ವಾಗತಿಸಿ. ಸುಧಾಕರ ಪೂಜಾರಿ ಅಳಿಯೂರು ಕಾರ್ಯಕ್ರಮದ ನಿರೂಪಿಸಿದರು. ಯುವ ಬಿಲ್ಲವ ವೇದಿಕೆ ಅಧ್ಯಕ್ಷ ನಂದನ್ ಕುಮಾರ್ ಧನ್ಯವಾದವಿತ್ತರು.
ಚಿತ್ರ, ವರದಿ : ಜ್ಯೋತಿಕಾ ಅಳದಂಗಡಿ.

Related posts

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ”ಪ್ರಚಲಿತ ಉತ್ತಮ ಉತ್ಪಾದನಾ ಅಭ್ಯಾಸಗಳು” ನಿಯಂತ್ರಣ ವ್ಯವಹಾರಗಳ ಕುರಿತಾದ ವಿಚಾರಗೋಷ್ಠಿ

Suddi Udaya

ಮೂಡುಕೋಡಿ ಹಾ.ಉ.ಸ. ಸಂಘ: ಅಧ್ಯಕ್ಷರಾಗಿ ಪುರುಷೋತ್ತಮ ರಾವ್, ಉಪಾಧ್ಯಕ್ಷರಾಗಿ ರಾಕೇಶ್ ಕುಮಾರ್

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya

ಕೊಕ್ಕಡ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಬೇಬಿ, ಉಪಾಧ್ಯಕ್ಷರಾಗಿ ಪ್ರಭಾಕರ್ ಮಲ್ಲಿಗೆ ಮಜಲು ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಜನಮಂಗಳ ಕಾರ್ಯಕ್ರಮದಡಿ ವೀಲ್ ಚಯರ್ ವಿತರಣೆ

Suddi Udaya

ವಲಯ ಮಟ್ಟದ ಕ್ರೀಡಾಕೂಟ : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!