September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ

ಆರಂಬೋಡಿ: ಇತಿಹಾಸ ಪ್ರಸಿದ್ಧ, ಧಾರ್ಮಿಕ ಹಿನ್ನಲೆಯ ನಂಟು ಹೊಂದಿರುವ ಬೆಳ್ತಂಗಡಿ ತಾಲೂಕಿನ ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಪೂಂಜ ಕ್ಷೇತ್ರದ ಆಸ್ರಣ್ಣರಾದ ಕೃಷ್ಣ ಪ್ರಸಾದ್ ಆಚಾರ್ಯರವರು ಡಿ . 21 ರಂದು ಚಾಲನೆಯನ್ನು ನೀಡಿದರು.

ಬಳಿಕ ಮಾತನಾಡಿದ ಅವರು, ಕೃಷಿಕರು ಮತ್ತು ಸ್ಥಳೀಯ ಗ್ರಾಮಸ್ಥರು ಒಟ್ಟುಗೂಡಿ ಮನೋರಂಜನೆ ಜೊತೆಗೆ ಧಾರ್ಮಿಕವಾಗಿ ನಂಬಿಕೆಗೆ ಪೂರಕವಾಗಿ ಮಾಗಣೆ ದೇವರು ಮತ್ತು ದೈವಗಳ ಅನುಗ್ರಹ ಪಡೆಯುವ ನಿಟ್ಟಿನಲ್ಲಿ ಕಂಬಳ ನಿರಂತರವಾಗಿ ನಡೆಯುವ ಅಗತ್ಯವಿದೆ, ಗ್ರಾಮ ಸುಭೀಕ್ಷೆ ಆಗಲಿದೆ ಎಂದರು. ಪಡ್ಯಾರಬೆಟ್ಟು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಧರ್ಮದರ್ಶಿ ಎ. ಜೀವಂದರ ಕುಮಾರ್ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಕುಕ್ಕಿಪಾಡಿ ಗ್ರಾ.ಪಂ. ಅಧ್ಯಕ್ಷ ಶೇಖರ ಶೆಟ್ಟಿ ಬದ್ಯಾರು, ಸಿದ್ದಕಟ್ಟೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಪಿಡಿಒ ಗಣೇಶ್ ಶೆಟ್ಟಿ ಆರಂಬೋಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ರಾಯಿ ಗ್ರಾ. ಪಂ. ಅಧ್ಯಕ್ಷ ಸಂತೋಷ್ ಕುಮಾರ್ ಬೆಟ್ಟು, ಬ್ಯಾಂಕ್ ಅಧಿಕಾರಿ ಸಂತೋಷ್ ಕುಮಾರ್ ಚೌಟ, ಸಮಿತಿ ಗೌರವಾಧ್ಯಕ್ಷ ಜಗತ್ಪಾಲ ಶೆಟ್ಟಿ ಉಮನೊಟ್ಟು, ಸಂಜೀವ ಶೆಟ್ಟಿ ಗುಂಡ್ಯಾರು, ಕೆ ಎಂಎಫ್ ನಿರ್ದೇಶಕ ಪ್ರಭಾಕರ ಹುಲಿಮೇರು, ಕೃಷಿಕ ಚಂದ್ರಶೇಖರ ಗೌಡ, ಓಟಗಾರ ಆನಂದ ಶೆಟ್ಟಿ ಹಕ್ಕೇರಿ, ಕುಟ್ಟಿ ಶೆಟ್ಟಿ ಹಕ್ಕೇರಿ, ಕರಿಯಣ್ಣ ಶೆಟ್ಟಿ ಹಕ್ಕೇರಿ, ದಿನೇಶ್ ಹುಲಿಮೇರು, ಸ್ಥಳದಾನಿ ಸುಧೀರ್ ಶೆಟ್ಟಿ ಹೊಕ್ಕಾಡಿಗೋಳಿ, ಪಶು ವೈದ್ಯಾಧಿಕಾರಿ ಡಾ. ಬಾಲಕೃಷ್ಣ, ಪ್ರಮುಖರಾದ ಸುಧಾಕರ ಚೌಟ ಬಾವ, ಪುಷ್ಪರಾಜ ಜೈನ್, ಪುಷ್ಪರಾಜ್ ಶೆಟ್ಟಿ, ಪ್ರವೀಣ್ ಕುಲಾಲ್, ಸುರೇಶ್ ಶೆಟ್ಟಿ ಸಿದ್ದಕಟ್ಟೆ, ಸುಂದರ ಪೂಜಾರಿ ಎನ್., ಸಂತೋಷ್ ಶೆಟ್ಟಿ ಕೊನೆರೊಟ್ಟು, ಆಂಡ್ರು ರೇಗೋ, ನೋಣಯ ಪೂಜಾರಿ, ಅರುಣ್ ಬಾಕ್ಯಾರುಕೋಡಿ, ಕರಿಯ ಪೂಜಾರಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಕಂಬಳ ಸಮಿತಿ ಅಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ ಸ್ವಾಗತಿಸಿ, ಶಾಜಲ್ ಕಾರ್ಯಕ್ರಮ ನಿರೂಪಿಸಿದರು.

Related posts

ಉಂಗಿಲಬೈಲು ಪಾಂಡುರಂಗ ನಿಧನ

Suddi Udaya

ಓಡಿಲ್ನಾಳ: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ; ಕಳಿಯ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ವಸಂತ ಮಜಲು ಭೇಟಿ ನೀಡಿ ತುರ್ತು ಪರಿಹಾರ

Suddi Udaya

ನ.7 ರಂದು ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯಲಿರುವ ಬೆಳ್ತಂಗಡಿ ಪಟ್ಟಣ ಪಂಚಾಯತ್‌ ಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡದಂತೆ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆ

Suddi Udaya

ಸುಲ್ಕೇರಿ: 43ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಗಾಳಿ ಮಳೆ: ಕಳಿಯ-ನ್ಯಾಯತರ್ಪು ವ್ಯಾಪಕ ಹಾನಿ15ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ

Suddi Udaya

ಅಳದಂಗಡಿ: ತೋಟದಲ್ಲಿ ಬೃಹತ್‌ ಗಾತ್ರದ ಕಾಳಿಂಗ ಸರ್ಪ ಪತ್ತೆ

Suddi Udaya
error: Content is protected !!