23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪ್ರೊ.ಎಸ್ ಪ್ರಭಾಕರ್ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಸಂತಾಪ

ಧರ್ಮಸ್ಥಳದ ವತಿಯಿಂದ ನಾವು ಹೊಸ ಸಂಸ್ಥೆಗಳನ್ನು ಪ್ರಾರಂಭಿಸುವಾಗ, ಇತರ ಸಂಸ್ಥೆಗಳ ಆಡಳಿತವನ್ನು ವಹಿಸಿಕೊಳ್ಳುವಾಗ, ಶಿಕ್ಷಣತಜ್ಞರೂ, ಆಡಳಿತ ಪರಿಣತರೂ ಆದ ಪ್ರೊ. ಎಸ್. ಪ್ರಭಾಕರ್ ಅವರೊಂದಿಗೆ ಸಮಾಲೋಚನೆ ನಡೆಸಿ ಕಾರ್ಯಪ್ರವೃತ್ತರಾಗುತ್ತಿದ್ದೆವು.

ಧಾರವಾಡದ ಜನತಾ ಶಿಕ್ಷಣ ಸಮಿತಿಯ ಆಡಳಿತ ವಹಿಸಿಕೊಳ್ಳುವಾಗ, ಉಡುಪಿ ಆಯುರ್ವೇದ ಕಾಲೇಜಿನ ಆಡಳಿತ ವಹಿಸುವಾಗ, ಮಂಗಳೂರಿನಲ್ಲಿ ಕಾನೂನು ಕಾಲೇಜು ಪ್ರಾರಂಭ, ಮೈಸೂರಿನಲ್ಲಿ ಎಸ್.ಡಿ.ಎಂ. ಐ.ಎಂ.ಡಿ. ಪ್ರಾರಂಭಿಸುವಾಗ, ರುಡ್‌ಸೆಟ್ ಸಂಸ್ಥೆಗಳ ಪ್ರಾರಂಭ, ಎಂ.ಎಂ.ಕೆ. ಮಹಿಳಾ ಕಾಲೇಜು ಆಡಳಿತ ವಹಿಸುವಾಗ ಪ್ರೊ. ಪ್ರಭಾಕರ್‌ರೊಂದಿಗೆ ಸಮಾಲೋಚನೆ ನಡೆಸಿರುವುದಲ್ಲದೆ, ಅನೇಕ ಬಾರಿ ನಾವು ಜೊತೆಯಾಗಿ ಧಾರವಾಡ, ಮೈಸೂರು, ಉಡುಪಿಗೆ ಹೋಗಿ ಪರಿಶೀಲನೆ ನಡೆಸಿ, ವಿಚಾರ, ವಿಮರ್ಶೆ ಮಾಡಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಿದ್ದೆವು.

ನಮ್ಮ ಸಂಸ್ಥೆಗಳಿಗೆ ಅರ್ಹ ಪ್ರಾಂಶುಪಾಲರು, ನಿರ್ದೇಶಕರುಗಳು, ಉಪನ್ಯಾಸಕರುಗಳ ಆಯ್ಕೆ ಮತ್ತು ನೇಮಕಾತಿಯಲ್ಲಿಯೂ ಪ್ರೊ. ಎಸ್. ಪ್ರಭಾಕರ್ ಸಹಕಾರ ನೀಡಿರುತ್ತಾರೆ.
ಧರ್ಮಸ್ಥಳಕ್ಕೆ ಪ್ರಧಾನಿ ಇಂದಿರಾಗಾಂಧಿ, ರಾಷ್ಟ್ರಪತಿ ವಿ.ವಿ. ಗಿರಿ ಮೊದಲಾದ ಗಣ್ಯವ್ಯಕ್ತಿಗಳ ಭೇಟಿ ಸಂದರ್ಭದಲ್ಲಿ ಕಾರ್ಯಕ್ರಮ ಸಂಯೋಜನೆಯಲ್ಲಿ, ಲಕ್ಷದೀಪೋತ್ಸವ ಸಂದರ್ಭ ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನಗಳಿಗೆ ಉದ್ಘಾಟಕರು, ಅಧ್ಯಕ್ಷರು ಹಾಗೂ ಸಾಹಿತಿಗಳು ಮತ್ತು ಕಲಾವಿದರನ್ನು ಆಹ್ವಾನಿಸುವಲ್ಲಿಯೂ ಅವರು ವಿಶೇಷ ಪಾತ್ರವಹಿಸಿದ್ದಾರೆ.

ಶಿಸ್ತುಬದ್ಧವಾಗಿ ಎಲ್ಲಾ ಕಾರ್ಯಕ್ರಮಗಳ ಸಂಘಟನೆಯಲ್ಲಿ ಅವರು ಸಹಕರಿಸುತ್ತಿದ್ದರು. ಅವರ ನಿಧನ ನಮ್ಮ ಸಂಸ್ಥೆಗಳಿಗೆ ತುಂಬಲಾರದ ನಷ್ಟವೇ ಸರಿ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಎಂದು ಡಿ. ವೀರೇಂದ್ರ ಹೆಗ್ಗಡೆಯವರು ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.

Related posts

ನನ್ನ ಸಮಾಜ ಸೇವೆಯೇ ನನಗೆ ಮುಳುವಾಯಿತು: ಬಳಂಜ ಶಾಲೆಯ ಘಟನೆ ಕುರಿತು ಪ್ರವೀಣ್ ಪೂಜಾರಿ ಲಾಂತ್ಯಾರು ಪ್ರತಿಕ್ರಿಯೆ

Suddi Udaya

ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯಗ್ರಾಹಕರ ಸೇವೆಗಾಗಿ ವೇಣೂರಿನಲ್ಲಿ 21 ನೇ ನೂತನ ಶಾಖೆಯ ಉದ್ಘಾಟನೆ

Suddi Udaya

ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ:ಆಯೋಧ್ಯೆ ಶ್ರೀರಾಮ ಮಂದಿರ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Suddi Udaya

ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿಗೆ ದಾಖಲೆಯ ಫಲಿತಾಂಶ ಅತ್ಯಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟ್‌ ಗೆ ಅವಕಾಶ ಕಲ್ಪಿಸಿದ ಎಕ್ಸೆಲ್‌ ಕಾಲೇಜು ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್‌ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್‌

Suddi Udaya

ಕಳಿಯ ಗ್ರಾ.ಪಂ. ಗ್ರಾಮ ಸಭೆ : ಲೋಕೋಪಯೋಗಿ ಇಲಾಖೆಯವರು ಬರುವ ತನಕ ನಿಲ್ಲುತೇವೆ: ಕೇಶವ ಪೂಜಾರಿ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ.59 ಲಕ್ಷ ಲಾಭ, ಶೇ.15 ಡಿವಿಡೆಂಟ್ ಘೋಷಣೆ

Suddi Udaya
error: Content is protected !!