July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್‌ಗೆ “ಶಿಕ್ಷಣ ಸೇವಾರತ್ನ “ಪ್ರಶಸ್ತಿ

ಬೆಳ್ತಂಗಡಿ: ಶೈಕ್ಷಣಿಕ ಮತ್ತು ವೈಜ್ಞಾನಿಕ ಕ್ಷೇತ್ರದಲ್ಲಿ ನೀಡಿರುವ ಗಣನೀಯ ಸೇವೆಗಾಗಿ ಕನ್ನಡ ಫಿಲಂ ಚೇಂಬರ್ ನೀಡುವ ೨೦೨೫ನೇ ಸಾಲಿನ “ಶಿಕ್ಷಣ ಸೇವಾರತ್ನ” ಪ್ರಶಸ್ತಿಯನ್ನು ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್ ರವರು ಬೆಂಗಳೂರಿನಲ್ಲಿ ಸ್ವೀಕರಿಸಿದರು.


ಕಲಾ ವಾಣಿಜ್ಯ ವಿಜ್ಞಾನ ಹಾಗೂ ತಾಂತ್ರಿಕ ಶಿಕ್ಷಣ ಪಡೆದಿರುವ ಬಹುಮುಖ ಪ್ರತಿಭೆಯಾಗಿರುವ ಇವರು ಶೈಕ್ಷಣಿಕ, ವೈಜ್ಞಾನಿಕ ಮತ್ತು ತಾಂತ್ರಿಕ ವಿಷಯಗಳಲ್ಲಿ ಗುರುತಿಸಿಕೊಂಡಿರುವ ಇವರು 26 ವರ್ಷಗಳ ಸುದೀರ್ಘ ಅವಧಿಯಲ್ಲಿ ಸರಿಸುಮಾರು ೧೬೦೦ಕ್ಕೂ ಹೆಚ್ಚು ಜಿಲ್ಲಾ, ರಾಜ್ಯ, ರಾಷ್ಟçಮಟ್ಟದ ವೈಜ್ಞಾನಿಕ ಮಾದರಿಗಳಿಗೆ ಮಾರ್ಗದರ್ಶನ ನೀಡಿದ್ದರು.

ಕಲಾ, ವಾಣಿಜ್ಯ, ವಿಜ್ಞಾನ, ಶಿಕ್ಷಣದಲ್ಲಿ ಪದವಿ, ವಿವಿಧ ಭಾಷಾ ವಿಷಯಗಳಲ್ಲಿ, ಕಲಾ, ವಾಣಿಜ್ಯ ವಿವಿಧ ವಿಷಯಗಳನ್ನು ಮತ್ತು “ತುಳು ಭಾಷೆಯಲ್ಲಿ” ಮಂಗಳೂರು ವಿ.ವಿ.ಯಿಂದ ಸ್ನಾತಕೋತ್ತರ ಪದವಿಯನ್ನು ಒಳಗೊಂಡು ೯ಕ್ಕೂ ಹೆಚ್ಚು ಪದವಿಗಳನ್ನು ಪಡೆದಿರುತ್ತಾರೆ. ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಡಿ.೨೪ ರಂದು ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ಸಾಹಿತಿಗಳ, ಚಲನಚಿತ್ರಕಲಾವಿದರ ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದರು. ಇವರು ಮೂಲತಃ ಮಂಜೇಶ್ವರದವರಾಗಿದ್ದು, ಬೆಳ್ತಂಗಡಿ ಲಾಯಿಲದ ನಿವಾಸಿಯಾಗಿದ್ದಾರೆ.

Related posts

ವೇಣೂರು ಗೋಳಿದಡ್ಕ ನಿವಾಸಿ ಮಂಜಪ್ಪ ದೇವಾಡಿಗ ನಿಧನ

Suddi Udaya

ಪರಾಮರ್ಶೆ ಸಮಿತಿಯ ಮುಖ್ಯಸ್ಥ ಮಾಜಿ ರಾಜ್ಯಸಭಾ ಸದಸ್ಯರಾದ ಬಿ ಇಬ್ರಾಹಿಂರಿಗೆ ಅಗೌರವ: ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ನಗರ ಮತ್ತು ಗ್ರಾಮೀಣ ಘಟಕದ ಖಂಡನೆ : ಆರೋಪಿತರ ವಿರುದ್ಧ ಪಕ್ಷ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ

Suddi Udaya

ಬಿಜೆಪಿ ಧರ್ಮಸ್ಥಳದ ಶಕ್ತಿಕೇಂದ್ರದ ಪ್ರಮುಖ್ ಹರ್ಷಿತ್ ಜೈನ್ ಹಾಗೂ ವಿಕ್ರಮ್ ಆಯ್ಕೆ

Suddi Udaya

ನೆರಿಯ: ಸಂಜೀವ ಗೌಡ ನಿಧನ

Suddi Udaya

ಕೊಲ್ಲಿ ದೇವಸ್ಥಾನದಲ್ಲಿ ರಕ್ತೇಶ್ವರಿ ದೈವದ ಕಟ್ಟೆಯ ಶಿಲಾನ್ಯಾಸ: ಕೊಲ್ಲಿ ದುರ್ಗಾಪರಮೇಶ್ವರಿಯ ಸೊಬಗಿಗೆ ಪಶ್ಚಿಮ ಘಟ್ಟವೇ ಪ್ರಭಾವಳಿ:ಸಂಪತ್ ಬಿ. ಸುವರ್ಣ

Suddi Udaya

ಮಚ್ಚಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!