September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್‌ಗೆ “ಶಿಕ್ಷಣ ಸೇವಾರತ್ನ “ಪ್ರಶಸ್ತಿ

ಬೆಳ್ತಂಗಡಿ: ಶೈಕ್ಷಣಿಕ ಮತ್ತು ವೈಜ್ಞಾನಿಕ ಕ್ಷೇತ್ರದಲ್ಲಿ ನೀಡಿರುವ ಗಣನೀಯ ಸೇವೆಗಾಗಿ ಕನ್ನಡ ಫಿಲಂ ಚೇಂಬರ್ ನೀಡುವ ೨೦೨೫ನೇ ಸಾಲಿನ “ಶಿಕ್ಷಣ ಸೇವಾರತ್ನ” ಪ್ರಶಸ್ತಿಯನ್ನು ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್ ರವರು ಬೆಂಗಳೂರಿನಲ್ಲಿ ಸ್ವೀಕರಿಸಿದರು.


ಕಲಾ ವಾಣಿಜ್ಯ ವಿಜ್ಞಾನ ಹಾಗೂ ತಾಂತ್ರಿಕ ಶಿಕ್ಷಣ ಪಡೆದಿರುವ ಬಹುಮುಖ ಪ್ರತಿಭೆಯಾಗಿರುವ ಇವರು ಶೈಕ್ಷಣಿಕ, ವೈಜ್ಞಾನಿಕ ಮತ್ತು ತಾಂತ್ರಿಕ ವಿಷಯಗಳಲ್ಲಿ ಗುರುತಿಸಿಕೊಂಡಿರುವ ಇವರು 26 ವರ್ಷಗಳ ಸುದೀರ್ಘ ಅವಧಿಯಲ್ಲಿ ಸರಿಸುಮಾರು ೧೬೦೦ಕ್ಕೂ ಹೆಚ್ಚು ಜಿಲ್ಲಾ, ರಾಜ್ಯ, ರಾಷ್ಟçಮಟ್ಟದ ವೈಜ್ಞಾನಿಕ ಮಾದರಿಗಳಿಗೆ ಮಾರ್ಗದರ್ಶನ ನೀಡಿದ್ದರು.

ಕಲಾ, ವಾಣಿಜ್ಯ, ವಿಜ್ಞಾನ, ಶಿಕ್ಷಣದಲ್ಲಿ ಪದವಿ, ವಿವಿಧ ಭಾಷಾ ವಿಷಯಗಳಲ್ಲಿ, ಕಲಾ, ವಾಣಿಜ್ಯ ವಿವಿಧ ವಿಷಯಗಳನ್ನು ಮತ್ತು “ತುಳು ಭಾಷೆಯಲ್ಲಿ” ಮಂಗಳೂರು ವಿ.ವಿ.ಯಿಂದ ಸ್ನಾತಕೋತ್ತರ ಪದವಿಯನ್ನು ಒಳಗೊಂಡು ೯ಕ್ಕೂ ಹೆಚ್ಚು ಪದವಿಗಳನ್ನು ಪಡೆದಿರುತ್ತಾರೆ. ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಡಿ.೨೪ ರಂದು ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ಸಾಹಿತಿಗಳ, ಚಲನಚಿತ್ರಕಲಾವಿದರ ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದರು. ಇವರು ಮೂಲತಃ ಮಂಜೇಶ್ವರದವರಾಗಿದ್ದು, ಬೆಳ್ತಂಗಡಿ ಲಾಯಿಲದ ನಿವಾಸಿಯಾಗಿದ್ದಾರೆ.

Related posts

ಉಜಿರೆ: ಕಾಮಧೇನು ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ 

Suddi Udaya

ಭರತನಾಟ್ಯದಲ್ಲಿ ಅಂಡಿಂಜೆಯ ಸಾನ್ವಿ ಸಾಲಿಯಾನ್‌ಗೆ ಡಿಸ್ಟಿಂಕ್ಷನ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಪಾಡಿಯ ಶಾಲೆಯ ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ಸಮಾರೋಪ ಕಾರ್ಯಕ್ರಮ

Suddi Udaya

ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪಬ್ಲೀಕ್ ಪರೀಕ್ಷೆ ಯಶಸ್ವಿ ಆರಂಭ: ಪರೀಕ್ಷೆ ಬರೆಯುತ್ತಿದ್ದಾರೆ 70 ಪ್ರೌಢಗಳ 4215 ವಿದ್ಯಾರ್ಥಿಗಳು

Suddi Udaya

ಅಜ್ಞಾತ ಸಂತ ಹರ್ಡೇಕರ್ ಮಂಜಪ್ಪ ಪುಸ್ತಕ ಬಿಡುಗಡೆ

Suddi Udaya
error: Content is protected !!