26.7 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತತಾಲೂಕು ಸುದ್ದಿವರದಿ

ಕೊಯ್ಯೂರು: ಬೈಕ್ ಮುಖಾಮುಖಿ ಡಿಕ್ಕಿ: ಶಾಲಾ ಶಿಕ್ಷಕನಿಗೆ ಗಂಭೀರ ಗಾಯ

ಬೆಳ್ತಂಗಡಿ: ಕೊಯ್ಯೂರು ಸರಕಾರಿ ಪ್ರೌಢ ಶಾಲಾ ಸಮೀಪ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಶಿಕ್ಷಕನಿಗೆ ಗಂಭೀರ ಗಾಯಗೊಂಡ ಘಟನೆ ಡಿ.24ರಂದು ಸಂಜೆ ನಡೆದಿರುತ್ತದೆ.

ಕೊಯ್ಯೂರು ಗ್ರಾಮದ ಆದೂರು ಪೆರಾಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರಮೇಶ್ ಅವರು ಶಾಲೆ ಬಿಟ್ಟು ಮನೆಗೆ ತೆರಳುವ ಸಮಯದಲ್ಲಿ ಸರಕಾರಿ ಫ್ರೌಡ ಶಾಲಾ ಸಮೀಪ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದಿರುವ ಸ್ಥಳೀಯ ಯುವಕ ಸಂದೀಪ್ ಹಿಂದಿನಿಂದ ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಶಿಕ್ಷಕ ರಮೇಶ್ ಅವರು ರಸ್ತೆಗೆ ಎಸೆಯಲ್ಪಟ್ಟು ಬಲಗೈಯ ಭುಜಕ್ಕೆ ಗಂಭೀರ ಗಾಯಹೊಂದಿರುತ್ತದೆ. ತಕ್ಷಣ ಸ್ಥಳೀಯರು ಬೆಳ್ತಂಗಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಬೆಳ್ತಂಗಡಿ ಪೋಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರನ್ನು ಗೌರವಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಕುರಿತು ಐಇಸಿ ಚಟುವಟಿಕೆ

Suddi Udaya

ಬಳಂಜ ಬಿಜೆಪಿ ಬೂತ್ ಸಮಿತಿ‌ ಅಧ್ಯಕ್ಷರಾಗಿ ಗಣೇಶ್ ದೇವಾಡಿಗ, ಕಾರ್ಯದರ್ಶಿಯಾಗಿ ಪ್ರಕಾಶ್ ಪೂಜಾರಿ

Suddi Udaya

ಓಡಿಲ್ನಾಳ ಸ.ಉ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಅಪಾಯಕಾರಿಯಾಗಿ ವೀಲಿಂಗ್ ಮಾಡುತ್ತಿದ್ದವನ ಹೆಡೆಮುರಿ ಕಟ್ಟಿದ ಬೆಳ್ತಂಗಡಿ ಸಂಚಾರಿ ಪೊಲೀಸರು

Suddi Udaya

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲು: ಬೆಳ್ತಂಗಡಿಯ ಮೂವರು ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿಯಿಂದ ಕಾರಣ ಕೇಳಿ ನೋಟೀಸ್

Suddi Udaya
error: Content is protected !!