24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ ‘ಬಿ.ಸಿ. ಮಾದರಿಯ ಶ್ರೇಷ್ಠ ಎಂ.ಎಸ್.ಎಂ.ಇ. ಪೋಷಕ ಸಂಸ್ಥೆ’ ಪ್ರಶಸ್ತಿ

ಬೆಳ್ತಂಗಡಿ: ಭಾರತೀಯ ರಿಸರ್ವ್ ಬ್ಯಾಂಕ್‌ನ ನಿಯಮದಂತೆ ‘ಬ್ಯಾಂಕ್‌ಗಳ ವ್ಯವಹಾರ ಪ್ರತಿನಿಧಿ’ ಆಗಿ ಸೇವೆಗೈಯುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ದೇಶದ ಬ್ಯಾಂಕಿಂಗ್ ಸೇವಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ‘ಭಾರತೀಯ ಅತೀ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಂಘಟನೆ ಕೊಡಮಾಡುವ ಅತ್ಯುನ್ನತ ಪ್ರಶಸ್ತಿಯಾದ ‘ಬಿ.ಸಿ. ಮಾದರಿಯ ಶ್ರೇಷ್ಠ ಎಂ.ಎಸ್.ಎಂ.ಇ. ಪೋಷಕ ಸಂಸ್ಥೆ–2025 ಪ್ರಶಸ್ತಿ’ ಲಭಿಸಿದೆ.

ದೇಶದಲ್ಲಿ ಬಿ.ಸಿ.ಯಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ಪೈಕಿ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಮಾತ್ರ ಈ ಪ್ರಶಸ್ತಿಗೆ ಭಾಜನವಾಗಿದೆ.
ಇತ್ತೀಚೆಗೆ ನವದೆಹಲಿಯಲ್ಲಿ ಕೇಂದ್ರ ಸರಕಾರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಪಿಯೂಷ್ ಗೋಯಲ್‌ರವರು ಪ್ರಶಸ್ತಿ ಪ್ರಧಾನ ಮಾಡಿದರು. ಈ ಸಂದರ್ಭದಲ್ಲಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಪ್ರಾರಂಭಿಸಿದ ಈ ಬಿ.ಸಿ. ಕಾರ್ಯಚಟುವಟಿಕೆ ಕೊಡುಗೆಗಳನ್ನು ಮಾನ್ಯ ಸಚಿವರು ಶ್ಲಾಘಿಸಿದರು. ಗ್ರಾಮಾಭಿವೃದ್ಧಿ ಯೋಜನೆಯ ಟ್ರಸ್ಟಿಗಳಾದ ಡಿ. ಸುರೇಂದ್ರ ಕುಮಾರ್‌ರವರು ಪ್ರಶಸ್ತಿಯನ್ನು ಸ್ವೀಕರಿಸಿದರು. ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಅನಿಲ್ ಕುಮಾರ್ ಎಸ್.ಎಸ್., ಯೋಜನೆಯ ಮುಖ್ಯ ಹಣಕಾಸು ಅಧಿಕಾರಿಗಳಾದ ಶಾಂತರಾಮ್ ಆರ್. ಪೈಯವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ‘ಟೆಕ್ ಯುವ – 25’

Suddi Udaya

ಅಸೌಖ್ಯದಿಂದ ಕೊಕ್ರಾಡಿ ಯುವಕ ಸಾವು

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್‌ ಅಕೌಂಟಿಂಗ್‌ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಚಾಲನೆ

Suddi Udaya

ಮರೋಡಿ:ಶ್ರೀ ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಕ್ರೀಡಾಂಗಣ ಉದ್ಘಾಟನೆ

Suddi Udaya

ಬೀಜಾಡಿಯ ಯೋಧ ಅನೂಪ್ ಪೂಜಾರಿಯವರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya
error: Content is protected !!