September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪ್ರೊ.ಎಸ್ ಪ್ರಭಾಕರ್ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಸಂತಾಪ

ಧರ್ಮಸ್ಥಳದ ವತಿಯಿಂದ ನಾವು ಹೊಸ ಸಂಸ್ಥೆಗಳನ್ನು ಪ್ರಾರಂಭಿಸುವಾಗ, ಇತರ ಸಂಸ್ಥೆಗಳ ಆಡಳಿತವನ್ನು ವಹಿಸಿಕೊಳ್ಳುವಾಗ, ಶಿಕ್ಷಣತಜ್ಞರೂ, ಆಡಳಿತ ಪರಿಣತರೂ ಆದ ಪ್ರೊ. ಎಸ್. ಪ್ರಭಾಕರ್ ಅವರೊಂದಿಗೆ ಸಮಾಲೋಚನೆ ನಡೆಸಿ ಕಾರ್ಯಪ್ರವೃತ್ತರಾಗುತ್ತಿದ್ದೆವು.

ಧಾರವಾಡದ ಜನತಾ ಶಿಕ್ಷಣ ಸಮಿತಿಯ ಆಡಳಿತ ವಹಿಸಿಕೊಳ್ಳುವಾಗ, ಉಡುಪಿ ಆಯುರ್ವೇದ ಕಾಲೇಜಿನ ಆಡಳಿತ ವಹಿಸುವಾಗ, ಮಂಗಳೂರಿನಲ್ಲಿ ಕಾನೂನು ಕಾಲೇಜು ಪ್ರಾರಂಭ, ಮೈಸೂರಿನಲ್ಲಿ ಎಸ್.ಡಿ.ಎಂ. ಐ.ಎಂ.ಡಿ. ಪ್ರಾರಂಭಿಸುವಾಗ, ರುಡ್‌ಸೆಟ್ ಸಂಸ್ಥೆಗಳ ಪ್ರಾರಂಭ, ಎಂ.ಎಂ.ಕೆ. ಮಹಿಳಾ ಕಾಲೇಜು ಆಡಳಿತ ವಹಿಸುವಾಗ ಪ್ರೊ. ಪ್ರಭಾಕರ್‌ರೊಂದಿಗೆ ಸಮಾಲೋಚನೆ ನಡೆಸಿರುವುದಲ್ಲದೆ, ಅನೇಕ ಬಾರಿ ನಾವು ಜೊತೆಯಾಗಿ ಧಾರವಾಡ, ಮೈಸೂರು, ಉಡುಪಿಗೆ ಹೋಗಿ ಪರಿಶೀಲನೆ ನಡೆಸಿ, ವಿಚಾರ, ವಿಮರ್ಶೆ ಮಾಡಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಿದ್ದೆವು.

ನಮ್ಮ ಸಂಸ್ಥೆಗಳಿಗೆ ಅರ್ಹ ಪ್ರಾಂಶುಪಾಲರು, ನಿರ್ದೇಶಕರುಗಳು, ಉಪನ್ಯಾಸಕರುಗಳ ಆಯ್ಕೆ ಮತ್ತು ನೇಮಕಾತಿಯಲ್ಲಿಯೂ ಪ್ರೊ. ಎಸ್. ಪ್ರಭಾಕರ್ ಸಹಕಾರ ನೀಡಿರುತ್ತಾರೆ.
ಧರ್ಮಸ್ಥಳಕ್ಕೆ ಪ್ರಧಾನಿ ಇಂದಿರಾಗಾಂಧಿ, ರಾಷ್ಟ್ರಪತಿ ವಿ.ವಿ. ಗಿರಿ ಮೊದಲಾದ ಗಣ್ಯವ್ಯಕ್ತಿಗಳ ಭೇಟಿ ಸಂದರ್ಭದಲ್ಲಿ ಕಾರ್ಯಕ್ರಮ ಸಂಯೋಜನೆಯಲ್ಲಿ, ಲಕ್ಷದೀಪೋತ್ಸವ ಸಂದರ್ಭ ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನಗಳಿಗೆ ಉದ್ಘಾಟಕರು, ಅಧ್ಯಕ್ಷರು ಹಾಗೂ ಸಾಹಿತಿಗಳು ಮತ್ತು ಕಲಾವಿದರನ್ನು ಆಹ್ವಾನಿಸುವಲ್ಲಿಯೂ ಅವರು ವಿಶೇಷ ಪಾತ್ರವಹಿಸಿದ್ದಾರೆ.

ಶಿಸ್ತುಬದ್ಧವಾಗಿ ಎಲ್ಲಾ ಕಾರ್ಯಕ್ರಮಗಳ ಸಂಘಟನೆಯಲ್ಲಿ ಅವರು ಸಹಕರಿಸುತ್ತಿದ್ದರು. ಅವರ ನಿಧನ ನಮ್ಮ ಸಂಸ್ಥೆಗಳಿಗೆ ತುಂಬಲಾರದ ನಷ್ಟವೇ ಸರಿ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಎಂದು ಡಿ. ವೀರೇಂದ್ರ ಹೆಗ್ಗಡೆಯವರು ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.

Related posts

ಅಳದಂಗಡಿ: ಕೊಡಂಗೆ ದೈಲಬೈಲುವಿನಲ್ಲಿ ತೋಡು ಮಾಯ, ಕೃತಕ ನೆರೆ, ಕೃಷಿ ಹಾನಿ: ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಮತ್ತು ಗಣಿತ ಲೋಕದ ಪ್ರದರ್ಶನ

Suddi Udaya

ಎಸ್‌.ಡಿ‌.ಎಂ. ನ್ಯಾಚುರೋಪಥಿ ಮತ್ತು ಯೋಗ ಸೈನ್ಸ್‌ ಕಾಲೇಜಿನಲ್ಲಿ ವಿಶ್ವ ಏಡ್ಸ್‌ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಹಲವಾರು ಜನೋಪಯೋಗಿ ಕಾರ್ಯಕ್ರಮ

Suddi Udaya

ಧರ್ಮಸಂರಕ್ಷಣ ಯಾತ್ರೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಪ್ಲಾನ್” : : ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಈ ಸುದ್ದಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಬ್ಲಾಕ್ ಕಾಂಗ್ರೆಸ್ ಉಭಯ ಸಮಿತಿ ಅಧ್ಯಕ್ಷರುಗಳ ಸ್ಪಷ್ಟನೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದ ವತಿಯಿಂದ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!