25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರೋತ್ಸವದ ವೈಭವಪೂರ್ಣ ಹಸಿರುವಾಣಿ ಸಮರ್ಪಣೆ ಹಾಗೂ ನೂತನ ಅಕ್ಷೋಭ್ಯ ಅನ್ನಛತ್ರ ಉದ್ಘಾಟನೆ

ಬೆಳಾಲು: ಬೆಳಾಲು ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಇಲ್ಲಿ ವಾರ್ಷಿಕ ಜಾತ್ರಾಮಹೋತ್ಸವ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆಯು ನಡೆಯಲಿದ್ದು ಊರ ಭಕ್ತಾಭಿಮಾನಿಗಳಿಂದ ಶ್ರೀಕ್ಷೇತ್ರಕ್ಕೆ ಬೆಳಾಲು ಪೇಟೆಯಿಂದ ಭವ್ಯಮೆರವಣಿಗೆಯೊಂದಿಗೆ ಸಾಗಿ ಹಸಿರುವಾಣಿ ಸಮರ್ಪಣೆ ಮಾಡಲಾಯಿತು.

ಶ್ರೀ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿದ ಅಕ್ಷೋಭ್ಯ ಅನ್ನಛತ್ರವನ್ನು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿ ಇದರ ಧರ್ಮದರ್ಶಿಗಳಾದ ಹರೀಶ್ ಗೌಡ ಆರಿಕೋಡಿ ಉದ್ಘಾಟಿಸಿದರು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಗೌಡ ಶ್ರೀಸೌಧ ಬೆಳಾಲು, ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾದ ಲಿಂಗಪ್ಪ ಪೂಜಾರಿ ಬನಂದೂರು, ಅಸ್ರಣ್ಣರಾದ ಗಿರೀಶ್ ಬಾರಿತ್ತಾಯ ಪಾರಳ, ವ್ಯವಸ್ಥಾಪನಾ ಸಮಿತಿಯ ಉಪಾಧ್ಯಕ್ಷೆ ಶ್ರೀಮತಿ ಮಮತಾ ದಿನೇಶ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ದುರ್ಗಾಪ್ರಸಾದ್ ಕೇರ್ಮುಣ್ಣಾಯ, ಕಾರ್ಯದರ್ಶಿ ಸತೀಶ್ ಗೌಡ ಎಳ್ಳುಗದ್ದೆ, ಮಹಿಳಾ ಸಮಿತಿಯ ಗೌರವಾಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್, ಮಹಿಳಾ ಸಮಿತಿ ಅಧ್ಯಕ್ಷೆ ಶ್ರೀಮತಿ ಹೇಮಲತಾ ಶ್ರೀನಿವಾಸ್ ಗೌಡ, ಮಾಜಿ ಮಂಡಲ ಪಂಚಾಯತ್ ಅಧ್ಯಕ್ಷರಾದ ಜತ್ತನ್ನ ಗೌಡ, ಮಾಜಿ ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕರು, ವ್ಯವಸ್ಥಾಪನ ಸಮಿತಿಯ ಸದಸ್ಯರು, ಬೈಲುವಾರು ಸಮಿತಿಯ ಸದಸ್ಯರು, ಮಹಿಳಾ ಸಮಿತಿಯ ಸದಸ್ಯರು, ಭಜನಾ ಮಂಡಳಿಯ ಸದಸ್ಯರು ಮತ್ತು ಭಗವಧ್ಭಕ್ತರು ಉಪಸ್ಥಿತರಿದ್ದರು.

Related posts

ಬಿಜೆಪಿ ಧರ್ಮಸ್ಥಳದ ಶಕ್ತಿಕೇಂದ್ರದ ಪ್ರಮುಖ್ ಹರ್ಷಿತ್ ಜೈನ್ ಹಾಗೂ ವಿಕ್ರಮ್ ಆಯ್ಕೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪೆರಾಡಿ ಸಿಎ ಬ್ಯಾಂಕಿಗೆ ಸತತ 14 ವರ್ಷಗಳಿಂದ ಸಾಧನಾ ಪ್ರಶಸ್ತಿ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ: ಕೊಯ್ಯೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಕಕ್ಕಿಂಜೆಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya

ನಾಳ ಸ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್‌ ಮೇಳ

Suddi Udaya

ಅರಸಿನಮಕ್ಕಿ: ಕಿಶೋರ್ ಪಲಸ್ತಡ್ಕಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!