ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರೋತ್ಸವದ ವೈಭವಪೂರ್ಣ ಹಸಿರುವಾಣಿ ಸಮರ್ಪಣೆ ಹಾಗೂ ನೂತನ ಅಕ್ಷೋಭ್ಯ ಅನ್ನಛತ್ರ ಉದ್ಘಾಟನೆ

ಬೆಳಾಲು: ಬೆಳಾಲು ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಇಲ್ಲಿ ವಾರ್ಷಿಕ ಜಾತ್ರಾಮಹೋತ್ಸವ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆಯು ನಡೆಯಲಿದ್ದು ಊರ ಭಕ್ತಾಭಿಮಾನಿಗಳಿಂದ ಶ್ರೀಕ್ಷೇತ್ರಕ್ಕೆ ಬೆಳಾಲು ಪೇಟೆಯಿಂದ ಭವ್ಯಮೆರವಣಿಗೆಯೊಂದಿಗೆ ಸಾಗಿ ಹಸಿರುವಾಣಿ ಸಮರ್ಪಣೆ ಮಾಡಲಾಯಿತು.

ಶ್ರೀ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿದ ಅಕ್ಷೋಭ್ಯ ಅನ್ನಛತ್ರವನ್ನು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿ ಇದರ ಧರ್ಮದರ್ಶಿಗಳಾದ ಹರೀಶ್ ಗೌಡ ಆರಿಕೋಡಿ ಉದ್ಘಾಟಿಸಿದರು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಗೌಡ ಶ್ರೀಸೌಧ ಬೆಳಾಲು, ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾದ ಲಿಂಗಪ್ಪ ಪೂಜಾರಿ ಬನಂದೂರು, ಅಸ್ರಣ್ಣರಾದ ಗಿರೀಶ್ ಬಾರಿತ್ತಾಯ ಪಾರಳ, ವ್ಯವಸ್ಥಾಪನಾ ಸಮಿತಿಯ ಉಪಾಧ್ಯಕ್ಷೆ ಶ್ರೀಮತಿ ಮಮತಾ ದಿನೇಶ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ದುರ್ಗಾಪ್ರಸಾದ್ ಕೇರ್ಮುಣ್ಣಾಯ, ಕಾರ್ಯದರ್ಶಿ ಸತೀಶ್ ಗೌಡ ಎಳ್ಳುಗದ್ದೆ, ಮಹಿಳಾ ಸಮಿತಿಯ ಗೌರವಾಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್, ಮಹಿಳಾ ಸಮಿತಿ ಅಧ್ಯಕ್ಷೆ ಶ್ರೀಮತಿ ಹೇಮಲತಾ ಶ್ರೀನಿವಾಸ್ ಗೌಡ, ಮಾಜಿ ಮಂಡಲ ಪಂಚಾಯತ್ ಅಧ್ಯಕ್ಷರಾದ ಜತ್ತನ್ನ ಗೌಡ, ಮಾಜಿ ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕರು, ವ್ಯವಸ್ಥಾಪನ ಸಮಿತಿಯ ಸದಸ್ಯರು, ಬೈಲುವಾರು ಸಮಿತಿಯ ಸದಸ್ಯರು, ಮಹಿಳಾ ಸಮಿತಿಯ ಸದಸ್ಯರು, ಭಜನಾ ಮಂಡಳಿಯ ಸದಸ್ಯರು ಮತ್ತು ಭಗವಧ್ಭಕ್ತರು ಉಪಸ್ಥಿತರಿದ್ದರು.

Related posts

ಕಲ್ಮಂಜ: ಶ್ರೀಲಕ್ಷ್ಮಿ ರಾಮಚಂದ್ರ ಹೆಗಡೆ ನಿಧನ

Suddi Udaya

ಕಳೆoಜ: ನಾಟಿ ವೈದ್ಯೆ ಕಮಲ ನಿಧನ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಆತ್ಯಾಕರ್ಷವಾಗಿ ಗಮನ ಸೆಳೆದ ಗೋದಲಿ

Suddi Udaya

ಗ್ರಾಮೀಣ ಪ್ರತಿಭೆ ಉತ್ತಮ‌ ಸಾಧನೆ, ಅಂಡಿಂಜೆಯ ದ್ವಿಶಾನ್ ಜೈನ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಕುವೆಟ್ಟು: ಶ್ರೀ ರಾಮನವಮಿ ಉತ್ಸವ-ಧಾರ್ಮಿಕ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಷ್ಟ್ರೀಯ ಸಂಖ್ಯಾಶಾಸ್ತ್ರ ದಿನ ಆಚರಣೆ

Suddi Udaya
error: Content is protected !!