September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿರಾಜಕೀಯವರದಿ

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

ಬೆಳ್ತಂಗಡಿ: ಗ್ರಾಮ ಮಟ್ಟಕ್ಕೆ ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಜನಸ್ಪಂದನ ಸಭೆ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಸಂಪೂರ್ಣಗೊಳ್ಳುವ ಹೊಸ್ತಿಲಿನಲ್ಲಿದೆ. ಕಳೆದ ಡಿಸೆಂಬರ್‌ನಲ್ಲಿ ಆರಂಭಗೊಂಡ ಸಭೆ ದಿವಸಕ್ಕೆ ನಾಲ್ಕರಂತೆ ಈಗಾಗಲೇ ೩೬ ಗ್ರಾಮ ಪಂಚಾಯತ್‌ಗಳಲ್ಲಿ ನಡೆದಿದೆ. ಶಾಸಕರೊಂದಿಗೆ, ೨೦ಕ್ಕೂ ಮಿಕ್ಕಿ ಇಲಾಖೆಯ ವಾಹನಗಳಲ್ಲಿ ಅಧಿಕಾರಿಗಳು ಮುಂದಿನ ಮೂರು ದಿನ ನಿರಂತರ ಮ್ಯಾರಥನ್ ನಡೆಸಲಿದ್ದಾರೆ.

ಜನರೆಡೆಗೆ ತಾಲೂಕು ಆಡಳಿತ ಎಂಬ ಕಲ್ಪನೆಯೊಂದಿಗೆ ಗ್ರಾಮ ಮಟ್ಟಕ್ಕೆ ತಾಲೂಕು ಮಟ್ಟದ ಅಧಿಕಾರಿಗಳು ಜೊತೆ ಆಗಮಿಸಿ ಜನಸಾಮಾನ್ಯರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಪರಿಹಾರ ಒದಗಿಸುವ ಪ್ರಯತ್ನ ಜಸಸ್ಪಂದನ ಮೂಲಕ ನಡೆಸಲಾಗುವುದು. ಈ ಸಭೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಬೆಳ್ತಂಗಡಿ ವಿಧಾನಾ ಸಭಾ ಕ್ಷೇತ್ರದಲ್ಲಿ ನಡೆಯುತ್ತಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಅವರು ಕುಕ್ಕೇಡಿ, ಆರಂಬೋಡಿ, ಹೊಸಂಗಡಿ ಹಾಗೂ ಮರೋಡಿಯಲ್ಲಿ ಡಿ.೨೪ರಂದು ನಡೆದ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆಯಲ್ಲಿ ಸಭೆ ಉದ್ಘಾಟಿಸಿ ಮಾತನಾಡಿದರು. ೯/೧೧ ಸಮಸ್ಯೆ ಸರಳೀಕರಣ, ಅಕ್ರಮ-ಸಕ್ರಮ ಕಡತ ವಿಲೇ ಪ್ಲಾಟಿಂಗ್, ಅಪಾಯಕಾರಿ ಮರ ತೆರವು, ರಸ್ತೆ ದುರಸ್ತಿ, ನ್ಯಾಯಬೆಲೆ ಅಂಗಡಿ, ಕಾಡು ಪ್ರಾಣಿ ಉಪಟಳ, ಹಳೆಯ ವಿದ್ಯುತ್ ತಂತಿ ಬದಲಾವಣೆ, ಸಾರಿಗೆ ಬಸ್ ಸೌಲಭ್ಯ, ಸಾಂಪ್ರಾದಾಯಿಕ ಕೋಳಿ ಅಂಕಕ್ಕೆ ಅನುಮತಿ ಸಹಿತ ವಿವಿಧ ಸಮಸ್ಯೆಗಳ ಕುರಿತು ಗ್ರಾಮಸ್ಥರ ಗಮನಕ್ಕೆ ತಂದರು. ವಿವಿಧ ಬೇಡಿಕೆಗಳ ಅಹವಾಲುನ್ನು ಶಾಸಕರು ನಾಗರೀಕರಿಂದ ಪಡೆದುಕೊಂಡರು.

ತಹಶೀಲ್ದಾರ್ ಪ್ರಥ್ವಿ ಸಾನಿಕಂ, ತಾಲೂಕು ಪಂಚಾಯತ್ ಇಓ ಭವಾನಿಶಂಕರ್ ಎನ್, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಇಲಾಖಾಧಿಕಾರಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ಮ್ಯಾರಥನ್ ಜನಸ್ಪಂದನ ಸಭೆ:ಡಿ.೨೬ ರಂದು ಲಾಯಿಲ, ನಾವೂರು, ಮಲವಂತಿಗೆ ಹಾಗೂ ಕಡಿರುದ್ಯಾವರ, ಡಿ.೩೦ ರಂದು ನಿಡ್ಲೆ, ಅರಸಿನಮಕ್ಕಿ, ಶಿಶಿಲ ಹಾಗೂ ಶಿಬಾಜೆ, ಡಿ.೩೧ ರಂದು ತೆಕ್ಕಾರು, ತಣ್ಣೀರುಪಂತ, ಕಣಿಯೂರು ಹಾಗೂ ಕೊಯ್ಯುರು ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆರ ನಡೆಯಲಿದೆ.

Related posts

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು: ಸಾಧಕರೊಂದಿಗೆ ಸಂವಾದ ಮತ್ತು ಸನ್ಮಾನ ಸಮಾರಂಭ

Suddi Udaya

ಧರ್ಮಸ್ಥಳ ಭಗವಾನ್ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ

Suddi Udaya

ಸೇವಾಭಾರತಿಯ 3 ಯೋಜನೆಗಳಿಗೆ ಸಂಚಾಲಕರ ನೇಮಕ

Suddi Udaya

ಇಂದಬೆಟ್ಟು: ಕೃಷಿ ಮತ್ತು ಕುಡಿಯುವ ನೀರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವ ಬಗ್ಗೆ ಮೆಸ್ಕಾಂ ಅಧಿಕಾರಿಗೆ ಗ್ರಾಮಸ್ಥರಿಂದ ಮನವಿ

Suddi Udaya

ಹದಗೆಟ್ಟ ರಸ್ತೆ: ಸಮಾಜಸೇವಕ ಕಲಾಯಿ ಗಣೇಶ್ ಗೌಡ ಹಾಗೂ ಊರವರ ಸಹಕಾರದೊಂದಿಗೆ ರಸ್ತೆ ದುರಸ್ತಿ

Suddi Udaya

ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತ: ನ್ಯಾಯತರ್ಪು ಕೊಡಿಯಡ್ಕ ತಿಮ್ಮಪ್ಪ ಗೌಡ ನಿಧನ

Suddi Udaya
error: Content is protected !!