September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್‌ಗೆ “ಶಿಕ್ಷಣ ಸೇವಾರತ್ನ “ಪ್ರಶಸ್ತಿ

ಬೆಳ್ತಂಗಡಿ: ಶೈಕ್ಷಣಿಕ ಮತ್ತು ವೈಜ್ಞಾನಿಕ ಕ್ಷೇತ್ರದಲ್ಲಿ ನೀಡಿರುವ ಗಣನೀಯ ಸೇವೆಗಾಗಿ ಕನ್ನಡ ಫಿಲಂ ಚೇಂಬರ್ ನೀಡುವ ೨೦೨೫ನೇ ಸಾಲಿನ “ಶಿಕ್ಷಣ ಸೇವಾರತ್ನ” ಪ್ರಶಸ್ತಿಯನ್ನು ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್ ರವರು ಬೆಂಗಳೂರಿನಲ್ಲಿ ಸ್ವೀಕರಿಸಿದರು.


ಕಲಾ ವಾಣಿಜ್ಯ ವಿಜ್ಞಾನ ಹಾಗೂ ತಾಂತ್ರಿಕ ಶಿಕ್ಷಣ ಪಡೆದಿರುವ ಬಹುಮುಖ ಪ್ರತಿಭೆಯಾಗಿರುವ ಇವರು ಶೈಕ್ಷಣಿಕ, ವೈಜ್ಞಾನಿಕ ಮತ್ತು ತಾಂತ್ರಿಕ ವಿಷಯಗಳಲ್ಲಿ ಗುರುತಿಸಿಕೊಂಡಿರುವ ಇವರು 26 ವರ್ಷಗಳ ಸುದೀರ್ಘ ಅವಧಿಯಲ್ಲಿ ಸರಿಸುಮಾರು ೧೬೦೦ಕ್ಕೂ ಹೆಚ್ಚು ಜಿಲ್ಲಾ, ರಾಜ್ಯ, ರಾಷ್ಟçಮಟ್ಟದ ವೈಜ್ಞಾನಿಕ ಮಾದರಿಗಳಿಗೆ ಮಾರ್ಗದರ್ಶನ ನೀಡಿದ್ದರು.

ಕಲಾ, ವಾಣಿಜ್ಯ, ವಿಜ್ಞಾನ, ಶಿಕ್ಷಣದಲ್ಲಿ ಪದವಿ, ವಿವಿಧ ಭಾಷಾ ವಿಷಯಗಳಲ್ಲಿ, ಕಲಾ, ವಾಣಿಜ್ಯ ವಿವಿಧ ವಿಷಯಗಳನ್ನು ಮತ್ತು “ತುಳು ಭಾಷೆಯಲ್ಲಿ” ಮಂಗಳೂರು ವಿ.ವಿ.ಯಿಂದ ಸ್ನಾತಕೋತ್ತರ ಪದವಿಯನ್ನು ಒಳಗೊಂಡು ೯ಕ್ಕೂ ಹೆಚ್ಚು ಪದವಿಗಳನ್ನು ಪಡೆದಿರುತ್ತಾರೆ. ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಡಿ.೨೪ ರಂದು ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ಸಾಹಿತಿಗಳ, ಚಲನಚಿತ್ರಕಲಾವಿದರ ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದರು. ಇವರು ಮೂಲತಃ ಮಂಜೇಶ್ವರದವರಾಗಿದ್ದು, ಬೆಳ್ತಂಗಡಿ ಲಾಯಿಲದ ನಿವಾಸಿಯಾಗಿದ್ದಾರೆ.

Related posts

ಕಸ್ತೂರಿ ರಂಗನ್ ಸೂಕ್ಷ್ಮ ವಲಯ ಪ್ರದೇಶ ಜಾರಿ ವಿರೋಧಿಸಿ ಭಾರತೀಯ ಕಿಸಾನ್ ಸಂಘದಿಂದ ಪ್ರತಿಭಟನೆ ; ತಹಶೀಲ್ದಾರರಿಗೆ ಮನವಿ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿಯ ಹಿರಿಯ ಉದ್ಯಮಿ,ಕಲಾಪ್ರೇಮಿ, ಕೊಡುಗೈ ದಾನಿಗುರುವಾಯನಕೆರೆ ಹಂಸ ರೈಸ್ ಮಿಲ್ ಮಾಲಕ ಬಾಲಕೃಷ್ಣ ನಾಯಕ್ ವಿಧಿವಶ

Suddi Udaya

ಕಸ ಎಸೆದವರಿಗೆ ದಂಡ ಹಾಕಿದ ಮಡಂತ್ಯಾರು ಗ್ರಾ.ಪಂ.

Suddi Udaya

ಬೆಳ್ತಂಗಡಿ ಪ್ರಥಮ‌‌ ದರ್ಜೆ ಕಾಲೇಜಿನಲ್ಲಿ “ವಿಶ್ವ ತಂಬಾಕು ವಿರೋಧಿ ದಿನಾಚರಣೆ”- “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ

Suddi Udaya

ವೇಣೂರು: ಅಕ್ರಮವಾಗಿ ಸಾಗಿಸುತ್ತಿದ್ದ 125 ಕೆ‌ಜಿ ರಕ್ತ ಚಂದನ: ವಾಹನ ಸಮೇತ ರಕ್ತ ಚಂದನ ವಶಕ್ಕೆ ಪಡೆದ ವೇಣೂರು ಅರಣ್ಯಧಿಕಾರಿಗಳು

Suddi Udaya
error: Content is protected !!