23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್‌ಗೆ “ಶಿಕ್ಷಣ ಸೇವಾರತ್ನ “ಪ್ರಶಸ್ತಿ

ಬೆಳ್ತಂಗಡಿ: ಶೈಕ್ಷಣಿಕ ಮತ್ತು ವೈಜ್ಞಾನಿಕ ಕ್ಷೇತ್ರದಲ್ಲಿ ನೀಡಿರುವ ಗಣನೀಯ ಸೇವೆಗಾಗಿ ಕನ್ನಡ ಫಿಲಂ ಚೇಂಬರ್ ನೀಡುವ ೨೦೨೫ನೇ ಸಾಲಿನ “ಶಿಕ್ಷಣ ಸೇವಾರತ್ನ” ಪ್ರಶಸ್ತಿಯನ್ನು ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್ ರವರು ಬೆಂಗಳೂರಿನಲ್ಲಿ ಸ್ವೀಕರಿಸಿದರು.


ಕಲಾ ವಾಣಿಜ್ಯ ವಿಜ್ಞಾನ ಹಾಗೂ ತಾಂತ್ರಿಕ ಶಿಕ್ಷಣ ಪಡೆದಿರುವ ಬಹುಮುಖ ಪ್ರತಿಭೆಯಾಗಿರುವ ಇವರು ಶೈಕ್ಷಣಿಕ, ವೈಜ್ಞಾನಿಕ ಮತ್ತು ತಾಂತ್ರಿಕ ವಿಷಯಗಳಲ್ಲಿ ಗುರುತಿಸಿಕೊಂಡಿರುವ ಇವರು 26 ವರ್ಷಗಳ ಸುದೀರ್ಘ ಅವಧಿಯಲ್ಲಿ ಸರಿಸುಮಾರು ೧೬೦೦ಕ್ಕೂ ಹೆಚ್ಚು ಜಿಲ್ಲಾ, ರಾಜ್ಯ, ರಾಷ್ಟçಮಟ್ಟದ ವೈಜ್ಞಾನಿಕ ಮಾದರಿಗಳಿಗೆ ಮಾರ್ಗದರ್ಶನ ನೀಡಿದ್ದರು.

ಕಲಾ, ವಾಣಿಜ್ಯ, ವಿಜ್ಞಾನ, ಶಿಕ್ಷಣದಲ್ಲಿ ಪದವಿ, ವಿವಿಧ ಭಾಷಾ ವಿಷಯಗಳಲ್ಲಿ, ಕಲಾ, ವಾಣಿಜ್ಯ ವಿವಿಧ ವಿಷಯಗಳನ್ನು ಮತ್ತು “ತುಳು ಭಾಷೆಯಲ್ಲಿ” ಮಂಗಳೂರು ವಿ.ವಿ.ಯಿಂದ ಸ್ನಾತಕೋತ್ತರ ಪದವಿಯನ್ನು ಒಳಗೊಂಡು ೯ಕ್ಕೂ ಹೆಚ್ಚು ಪದವಿಗಳನ್ನು ಪಡೆದಿರುತ್ತಾರೆ. ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಡಿ.೨೪ ರಂದು ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ಸಾಹಿತಿಗಳ, ಚಲನಚಿತ್ರಕಲಾವಿದರ ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದರು. ಇವರು ಮೂಲತಃ ಮಂಜೇಶ್ವರದವರಾಗಿದ್ದು, ಬೆಳ್ತಂಗಡಿ ಲಾಯಿಲದ ನಿವಾಸಿಯಾಗಿದ್ದಾರೆ.

Related posts

ಭಜನಾ ಕಮ್ಮಟ; ಭಜನೆಗಳು ಜೀವನ ಶಿಕ್ಷಣ ಕಲಿಸುತ್ತವೆ: ಬಿ.ಕೆ. ಧನಂಜಯ ರಾವ್

Suddi Udaya

ರಾಷ್ಟ್ರೀಯ ಹೆದ್ದಾರಿ ಅರಳಿ ಪ್ರದೇಶಕ್ಕೆ ಅನುಕೂಲವಾಗುವಂತೆ ರಸ್ತೆ ನಿರ್ಮಿಸಲು ಆಗ್ರಹ

Suddi Udaya

ಕೊಕ್ಕಡ ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಪಂಜಿಕಲ್ಲು ಸರ್ಕಾರಿ ಪ್ರೌಢಶಾಲೆಯ ಹರ್ಷಿತ್ ಪೂಜಾರಿಗೆ 619 ಅಂಕ

Suddi Udaya

ರಿಕ್ಷಾ ಸ್ಕೂಟಿಗೆ ಡಿಕ್ಕಿ: ಸ್ಕೂಟಿ ಸವಾರ ಗಂಭೀರ ಗಾಯ

Suddi Udaya

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ 78ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya
error: Content is protected !!