July 23, 2026
ತಾಲೂಕು ಸುದ್ದಿವರದಿ

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆ ಪ್ರತಿಭಾ ಪುರಸ್ಕಾರ 2025

ಕುವೆಟ್ಟು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ದ.ಕ.ಜಿ.ಪಂ.ಉ.ಹಿ.ಪ್ರಾ.ಶಾಲೆ ಕುವೆಟ್ಟು, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಪ್ರತಿಭಾ ಪುರಸ್ಕಾರ-2025 ಕಾರ್ಯಕ್ರಮ ಡಿ 20 ರoದು ಜರುಗಿತು.

ನಿವೃತ್ತ ಬ್ಯಾಂಕ್ ಮ್ಯಾನೇಜರ್ ಗೋವಿಂದ ಭಟ್ ನೇರಳಕಟ್ಟೆ ಧ್ವಜಾರೋಹಣ ನೆರವೇರಿಸಿದರು.
ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಭಾರತಿ ಎಸ್ ಶೆಟ್ಟಿ ಇವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಸಿಲ್ವೆಸ್ಟರ್ ಮೋನಿಸ್. ರಿಯಾಝ್, ಶ್ರೀಮತಿ ಸುಮಂಗಳ ಪ್ರಭು, ಶ್ರೀಮತಿ ಅಮೀನಾ, ಶ್ರೀಮತಿ ಶಾಲಿನಿ, ಬೆಳ್ತಂಗಡಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ರಾಜೇಂದ್ರ ಕೃಷ್ಣ, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷರಾದ ರಕ್ಷಿತ್ ಶಿವರಾಂ, ಬೆಳ್ತಂಗಡಿ ಬಂಗೇರ ಬ್ರಿಗೇಡ್ ಅಧ್ಯಕ್ಷರಾದ ಶ್ರೀಮತಿ ಬಿನುತಾ ಬಂಗೇರ, ಮಡಂತ್ಯಾರು ಚರ್ಚ್ ನ ಧರ್ಮಗುರುಗಳಾದ ರೆ|ಫಾದರ್ ಸ್ಟ್ಯಾನಿ ಗೋವಿಯಸ್. ಮದ್ದಡ್ಕ ಮಸೀದಿಯ ಧರ್ಮಗುರುಗಳಾದ ಹಾಫಿಳ್ ಮುಹಿನುದ್ದೀನ್ ರಝ್ವಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಓಡೀಲು ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ದಿನೇಶ್ ಮೂಲ್ಯ ಕೊಂಡೆಮಾರು, ಉದ್ಯಮಿಗಳಾದ ಜಯರಾಮ ಶೆಟ್ಟಿ, ಮುಂಡಾಡಿ ಗುತ್ತು, ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಯೋಜನಾಧಿಕಾರಿ ಶ್ರೀಮತಿ ಯಶೋಧ, ವಾಣಿಜ್ಯ ಲೆಕ್ಕಪತ್ರ ಹಾಗೂ ತೆರಿಗೆ ಸಲಹೆಗಾರರಾದ ಸಂತೋಷ್ ಕೆ ಮಂಗಳೂರು, ಹ್ಯಾವೆಲ್ಸ್ ಇಂಡಿಯಾ ಲಿಮಿಟೆಡ್ ನ ರಾಜ್ಯ ತರಬೇತುದಾರರಾದ ಧನಂಜಯ ಕೆ ಆಲಂದಿಲ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ, ಉಪಾಧ್ಯಕ್ಷರಾದ ಶ್ರೀಮತಿ ಲಾವಣ್ಯ ಶೆಟ್ಟಿ ಅರ್ಕಜೆ, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್, ಶಾಲಾ ನಾಯಕಿ ಕುಮಾರಿ ರಾಯಿಶ, ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.

ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಸ್ವಾಗತಿಸಿ, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್ ವರದಿ ವಾಚಿಸಿ, ಕಿರಣ್ ಎಸ್ ಪಿ ವಂದಿಸಿ, ಶಾಲಾ ಅಧ್ಯಾಪಕ ವೃಂದದವರು ಕಾರ್ಯಕ್ರಮ ನಿರೂಪಿಸಿದರು. ಅoಗನವಾಡಿ ಪುಟಾಣಿಗಳಿoದ ಹಾಗೂ ಶಾಲಾ ವಿದ್ಯಾರ್ಥಿಗಳ ಶಾಲಾ ಹಿರಿಯ ವಿದ್ಯಾರ್ಥಿಗಳ ನ್ರತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು

Related posts

ಚಿಬಿದ್ರೆ: ಪೆರಿಯಡ್ಕ ಮಾಲ್ನ ನಿವಾಸಿ ಬಾಲಣ್ಣ ಗೌಡ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ಮಾಚಾರಿನಲ್ಲಿ ಎಸ್‌ವೈಎಸ್ 30 ನೇ ವಾರ್ಷಿಕ ಪ್ರಚಾರಾರ್ಥ ಕಾರ್ಯಕ್ರಮ

Suddi Udaya

31 ವರ್ಷಗಳ ಯಶಸ್ವಿ ಪಯಣ: ಗ್ರಾಹಕರ ವಿಶ್ವಾಸದ ಪ್ರತೀಕವಾಗಿ ಬೆಳೆದ ಸೋಜಾ ಎಲೆಕ್ಟ್ರಾನಿಕ್ಸ್: ಇಂದಿನಿಂದ ಮಾನ್ಸೂನ್ ಆಫರ್ ಪ್ರಾರಂಭ; ಶೇ.10-50ರವರೆಗೆ ವಿಶೇಷ ರಿಯಾಯಿತಿ

Suddi Udaya

ಬೆಂಗಳೂರಿನ ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂಪನಿಯಿಂದ ಸೇವಾಭಾರತಿ ಸಂಸ್ಥೆಗೆ ಉಪಕರಣಗಳ ಹಸ್ತಾಂತರ

Suddi Udaya

ಕಾಪಿನಬಾಗಿಲು: ಆರು ವರ್ಷಗಳಿಂದ ವಾಸವಾಗಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2026-2027ನೇ ಸಾಲಿನ ಪ್ರಥಮ ವರ್ಷದ ಪ್ರವೇಶಾತಿ ಆರಂಭ

Suddi Udaya
error: Content is protected !!