July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್‌ಗೆ “ಶಿಕ್ಷಣ ಸೇವಾರತ್ನ “ಪ್ರಶಸ್ತಿ

ಬೆಳ್ತಂಗಡಿ: ಶೈಕ್ಷಣಿಕ ಮತ್ತು ವೈಜ್ಞಾನಿಕ ಕ್ಷೇತ್ರದಲ್ಲಿ ನೀಡಿರುವ ಗಣನೀಯ ಸೇವೆಗಾಗಿ ಕನ್ನಡ ಫಿಲಂ ಚೇಂಬರ್ ನೀಡುವ ೨೦೨೫ನೇ ಸಾಲಿನ “ಶಿಕ್ಷಣ ಸೇವಾರತ್ನ” ಪ್ರಶಸ್ತಿಯನ್ನು ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್ ರವರು ಬೆಂಗಳೂರಿನಲ್ಲಿ ಸ್ವೀಕರಿಸಿದರು.


ಕಲಾ ವಾಣಿಜ್ಯ ವಿಜ್ಞಾನ ಹಾಗೂ ತಾಂತ್ರಿಕ ಶಿಕ್ಷಣ ಪಡೆದಿರುವ ಬಹುಮುಖ ಪ್ರತಿಭೆಯಾಗಿರುವ ಇವರು ಶೈಕ್ಷಣಿಕ, ವೈಜ್ಞಾನಿಕ ಮತ್ತು ತಾಂತ್ರಿಕ ವಿಷಯಗಳಲ್ಲಿ ಗುರುತಿಸಿಕೊಂಡಿರುವ ಇವರು 26 ವರ್ಷಗಳ ಸುದೀರ್ಘ ಅವಧಿಯಲ್ಲಿ ಸರಿಸುಮಾರು ೧೬೦೦ಕ್ಕೂ ಹೆಚ್ಚು ಜಿಲ್ಲಾ, ರಾಜ್ಯ, ರಾಷ್ಟçಮಟ್ಟದ ವೈಜ್ಞಾನಿಕ ಮಾದರಿಗಳಿಗೆ ಮಾರ್ಗದರ್ಶನ ನೀಡಿದ್ದರು.

ಕಲಾ, ವಾಣಿಜ್ಯ, ವಿಜ್ಞಾನ, ಶಿಕ್ಷಣದಲ್ಲಿ ಪದವಿ, ವಿವಿಧ ಭಾಷಾ ವಿಷಯಗಳಲ್ಲಿ, ಕಲಾ, ವಾಣಿಜ್ಯ ವಿವಿಧ ವಿಷಯಗಳನ್ನು ಮತ್ತು “ತುಳು ಭಾಷೆಯಲ್ಲಿ” ಮಂಗಳೂರು ವಿ.ವಿ.ಯಿಂದ ಸ್ನಾತಕೋತ್ತರ ಪದವಿಯನ್ನು ಒಳಗೊಂಡು ೯ಕ್ಕೂ ಹೆಚ್ಚು ಪದವಿಗಳನ್ನು ಪಡೆದಿರುತ್ತಾರೆ. ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಡಿ.೨೪ ರಂದು ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ಸಾಹಿತಿಗಳ, ಚಲನಚಿತ್ರಕಲಾವಿದರ ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದರು. ಇವರು ಮೂಲತಃ ಮಂಜೇಶ್ವರದವರಾಗಿದ್ದು, ಬೆಳ್ತಂಗಡಿ ಲಾಯಿಲದ ನಿವಾಸಿಯಾಗಿದ್ದಾರೆ.

Related posts

ಪಣಕಜೆ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ

Suddi Udaya

ಮೇಲಂತಬೆಟ್ಟು: ದರ್ಶನ್ ಯು ಸಾಲ್ಯಾನ್ ಅಸೌಖ್ಯದಿಂದ ನಿಧನ

Suddi Udaya

ಮರೋಡಿ : ಕಳ್ಳಭಟ್ಟಿ ಶೆಡ್‌ಗೆ ಪೊಲೀಸ್ ದಾಳಿ: ಕಳ್ಳಭಟ್ಟಿ ಸಾರಾಯಿ ‘ ಹಾಗೂ ಇತರ ಸೊತ್ತುಗಳು ವಶ

Suddi Udaya

ಶುಭವಿವಾಹ ಪ್ರತಿಭಾ-ಸುಕೇಶ್

Suddi Udaya

ಜ.12: ಬಳಂಜ ಬದಿನಡೆಯಲ್ಲಿ ಅಯ್ಯಪ್ಪ ಪೂಜೆ, ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಕ್ರೀಡಾಕೂಟ : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!