25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಸರಕಾರಿ ಪ್ರೌಢ ಶಾಲೆಯ ಗಣಿತ ಶಿಕ್ಷಕಿ ಪುಷ್ಪರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

ನಾವೂರು ಸರಕಾರಿ ಪ್ರೌಢಶಾಲೆ ಯಲ್ಲಿ 14 ವರ್ಷ 5 ತಿಂಗಳುಗಳ ಕಾಲ ಸೇವೆ ಸಲ್ಲಿಸಿ ಪ್ರಸಕ್ತ ಸಾಲಿನಲ್ಲಿ ಮಂಗಳೂರಿಗೆ ವರ್ಗಾವಣೆಗೊಂಡಿರುವ ಗಣಿತ ಶಿಕ್ಷಕಿ ಶ್ರೀಮತಿ ಪುಷ್ಪ ಇವರ ಬೀಳ್ಕೊಡುಗೆ ಕಾರ್ಯಕ್ರಮ ಡಿ.20 ರಂದು ನೆರವೇರಿತು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುನಂದ, ಸದಸ್ಯರಾದ ಗಣೇಶ ಗೌಡ, ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಮಮತಾ ಪ್ರಿಯಾ ಉಪಸ್ಥಿತರಿದ್ದರು. ಅಲ್ಲದೆ ಎಸ್ ಡಿ ಯಂ ಸಿ ಉಪಾಧ್ಯಕ್ಷ ಉಮೇಶ್ ಪ್ರಭು ಹಡೀಲ್ ,ಮುಖ್ಯ ಶಿಕ್ಷಕರು ರಾಜೇಂದ್ರ ಭಟ್ ಹಾಗೂ ಶಿಕ್ಷಕ ವೃಂದ, ಪೋಷಕರು, ವಿದ್ಯಾರ್ಥಿಗಳು ಹಾಗೂ ಬಿಸಿ ಊಟ ಸಿಬ್ಬಂದಿ ಉಪಸ್ಥಿತರಿದ್ದರು.

ಮಕ್ಕಳು, ಶಿಕ್ಷಕರು ಅವರ ಬಗ್ಗೆ ಅನಿಸಿಕೆ ವ್ಯಕ್ತ ಪಡಿಸಿದರು. ವೈದ್ಯರು ಪ್ರದೀಪ್ ನಾವೂರು ಇವರ ಉಪಸ್ಥಿತಿಯಲ್ಲಿ ಪುಷ್ಪ ಅವರನ್ನು ಅಭಿನಂದಿಸಲಾಯಿತು. ಪುಷ್ಪ ರವರ ವತಿಯಿಂದ ರೂ,. 20,000 ಮೊತ್ತವನ್ನು ಎಸ್ ಎಸ್ ಎಲ್ ಸಿ ಯಲ್ಲಿ 500 ಅಂಕ ಕ್ಕಿಂತ ಹೆಚ್ಚು ಅಂಕ ಬಂದ ವಿದ್ಯಾರ್ಥಿಗಳಿಗೆ ಅದರ ಬಡ್ಡಿ ಹಣ ನೀಡಿ ಗೌರವಿಸುವ ಸಲುವಾಗಿ ಶಾಲೆಗೆ ಹಸ್ತಾಂತರ ಮಾಡಿದರು.

ಮೀನಾ ಕಾರ್ಯಕ್ರಮ ನಿರೂಪಿಸಿ, ವಿನೋದ ಸ್ವಾಗತಿಸಿ, . ಭವ್ಯ ಧನ್ಯವಾದವಿತ್ತರು.

Related posts

ಮರೋಡಿ ಪಲಾರಗೋಳಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ನೇಮೋತ್ಸವ: ಸಾರ್ವಜನಿಕ ಶ್ರೀ ಶನಿಪೂಜೆ

Suddi Udaya

ಜ.25: ಉಜಿರೆ ವಿಜಯನಗರ ಅಜಿತ್‌ನಗರ (ಕಲ್ಲೆ) ದಲ್ಲಿ ಶ್ರೀ ವನದುರ್ಗಾ, ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವಾರ್ಷಿಕ ಆರಾಧನೆ

Suddi Udaya

ಉಜಿರೆ: ಎಸ್‌ಡಿಪಿಐ ಕಕ್ಕೇಜಾಲ್ ಬ್ರಾಂಚ್ ವತಿಯಿಂದ ರಕ್ತದಾನ ಶಿಬಿರ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬಂದಾರು ಚಂದ್ರಹಾಸ ಕುಂಬಾರರವರಿಗೆ ಸಾಹಿತ್ಯ ಸಾಮ್ರಾಟ್ ಪ್ರಶಸ್ತಿ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಚರ್ಚೆ ಹಾಗೂ ವಿಶೇಷ ಮಾಹಿತಿ ಶಿಬಿರ

Suddi Udaya
error: Content is protected !!