July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಸರಕಾರಿ ಪ್ರೌಢ ಶಾಲೆಯ ಗಣಿತ ಶಿಕ್ಷಕಿ ಪುಷ್ಪರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

ನಾವೂರು ಸರಕಾರಿ ಪ್ರೌಢಶಾಲೆ ಯಲ್ಲಿ 14 ವರ್ಷ 5 ತಿಂಗಳುಗಳ ಕಾಲ ಸೇವೆ ಸಲ್ಲಿಸಿ ಪ್ರಸಕ್ತ ಸಾಲಿನಲ್ಲಿ ಮಂಗಳೂರಿಗೆ ವರ್ಗಾವಣೆಗೊಂಡಿರುವ ಗಣಿತ ಶಿಕ್ಷಕಿ ಶ್ರೀಮತಿ ಪುಷ್ಪ ಇವರ ಬೀಳ್ಕೊಡುಗೆ ಕಾರ್ಯಕ್ರಮ ಡಿ.20 ರಂದು ನೆರವೇರಿತು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುನಂದ, ಸದಸ್ಯರಾದ ಗಣೇಶ ಗೌಡ, ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಮಮತಾ ಪ್ರಿಯಾ ಉಪಸ್ಥಿತರಿದ್ದರು. ಅಲ್ಲದೆ ಎಸ್ ಡಿ ಯಂ ಸಿ ಉಪಾಧ್ಯಕ್ಷ ಉಮೇಶ್ ಪ್ರಭು ಹಡೀಲ್ ,ಮುಖ್ಯ ಶಿಕ್ಷಕರು ರಾಜೇಂದ್ರ ಭಟ್ ಹಾಗೂ ಶಿಕ್ಷಕ ವೃಂದ, ಪೋಷಕರು, ವಿದ್ಯಾರ್ಥಿಗಳು ಹಾಗೂ ಬಿಸಿ ಊಟ ಸಿಬ್ಬಂದಿ ಉಪಸ್ಥಿತರಿದ್ದರು.

ಮಕ್ಕಳು, ಶಿಕ್ಷಕರು ಅವರ ಬಗ್ಗೆ ಅನಿಸಿಕೆ ವ್ಯಕ್ತ ಪಡಿಸಿದರು. ವೈದ್ಯರು ಪ್ರದೀಪ್ ನಾವೂರು ಇವರ ಉಪಸ್ಥಿತಿಯಲ್ಲಿ ಪುಷ್ಪ ಅವರನ್ನು ಅಭಿನಂದಿಸಲಾಯಿತು. ಪುಷ್ಪ ರವರ ವತಿಯಿಂದ ರೂ,. 20,000 ಮೊತ್ತವನ್ನು ಎಸ್ ಎಸ್ ಎಲ್ ಸಿ ಯಲ್ಲಿ 500 ಅಂಕ ಕ್ಕಿಂತ ಹೆಚ್ಚು ಅಂಕ ಬಂದ ವಿದ್ಯಾರ್ಥಿಗಳಿಗೆ ಅದರ ಬಡ್ಡಿ ಹಣ ನೀಡಿ ಗೌರವಿಸುವ ಸಲುವಾಗಿ ಶಾಲೆಗೆ ಹಸ್ತಾಂತರ ಮಾಡಿದರು.

ಮೀನಾ ಕಾರ್ಯಕ್ರಮ ನಿರೂಪಿಸಿ, ವಿನೋದ ಸ್ವಾಗತಿಸಿ, . ಭವ್ಯ ಧನ್ಯವಾದವಿತ್ತರು.

Related posts

ಮಡಂತ್ಯಾರು ಗ್ರಾಮ ಪಂಚಾಯತ್ ಆಕರ್ಷಣೀಯ ಸಖೀ ಮತಗಟ್ಟೆ

Suddi Udaya

ಅಳದಂಗಡಿ ಅರಮನೆಗೆ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಭೇಟಿ

Suddi Udaya

ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya

ಉಜಿರೆ ಮಹಿಳಾ ವಿವಿದ್ದೋದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಶಶಿಕಲಾ ಡಿ ಗೌಡ , ಉಪಾಧ್ಯಕ್ಷರಾಗಿ ಪ್ರಮೀಳಾ

Suddi Udaya

ಮಹಾಕುಂಭ ಮೇಳದಲ್ಲಿ ಗರ್ಡಾಡಿ, ನಿಟ್ಟಡೆ ಪಡಂಗಡಿ ಶಕ್ತಿ ಕೇಂದ್ರದ ಪ್ರಮುಖ್ ರಿಂದ ಪುಣ್ಯಸ್ನಾನ

Suddi Udaya
error: Content is protected !!