July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.28-ಜ.2: ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವ

ಓಡಿಲ್ನಾಳ: ಶ್ರೀರಾಮ ನಗರ ಮೈರಲ್ಕೆ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ನೀಲೇಶ್ವರ ಶ್ರೀ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಡಿ.28ರಿಂದ ಜ.1ರವರೆಗೆ ಜರುಗಲಿರುವುದು.


ಡಿ.28 ರಂದು ಪೂರ್ವಾಹ್ನ ಹೊರೆಕಾಣಿಕೆ, ತಂತ್ರಿಗಳ ಆಗಮನ, ಮಧ್ಯಾಹ್ನ ತೋರಣ ಮುಹೂರ್ತ, ಧ್ವಜಾರೋಹಣ, ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ಪೂಜೆ ಉತ್ಸವ ಜರುಗಲಿದೆ. ಡಿ.೨೯ರಂದು ಗಣಹೋಮ, ಮೃತ್ಯುಂಜಯ ಹೋಮ, ಕಲಶಪೂಜೆ, ಕಲಶಾಭಿಷೇಕ, ಮಧ್ಯಾಹ್ನ ಮಹಾ ಪೂಜೆ ಪ್ರಸಾದ ವಿತರಣೆ (ಅನ್ನಸಂತರ್ಪಣೆ), ಸಂಜೆ ಪೂಜೆ, ಉತ್ಸವ ಕಟ್ಟೆಪೂಜೆ ಪ್ರಸಾದ ವಿತರಣೆ, ರಾತ್ರಿ ಸ್ಥಳೀಯ ಶಾಲಾ ಮಕ್ಕಳಿಂದ ಹಾಗೂ ಊರವರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ.


ಮೈರಲಿಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಗೋಪಾಲ ಶೆಟ್ಟಿ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಬರೋಡ ಉದ್ಯಮಿ ಶಶಿಧರ ಶೆಟ್ಟಿ ಬಿ., ಸುಜಿತಾ ವಿ. ಬಂಗೇರ ಬೆಳ್ತಂಗಡಿ, ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಭಾರತಿ ಎಸ್. ಶೆಟ್ಟಿ, ಮುಂಬೈ ತುಂಗಾ ಆಸ್ಪತ್ರೆಯ ವಸಂತಿ ಬಿ. ಶೆಟ್ಟಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು ಸುಜಯ, ಮನೋಜ್ ಕುಮಾರ್ ನೆಕ್ಕಿಲೊಟ್ಟು, ದುಗ್ಗಪ್ಪ ಪೊಕ್ಕಿ ಭಾಗವಹಿಸಲಿರುವರು.

ಡಿ.30ರಂದು ಬೆಳಿಗ್ಗೆ ಗಣಹೋಮ, ನವಗ್ರಹ ಹೋಮ, ಶೋಡರ ಬಳಿ ಉತ್ಸವ, ಕಲಶ ಪೂಜೆ, ಕಲಶಾಭಿಷೇಕ ಉಪದೇವರಿಗೆ ಕಲಶಾಭಿಷೇಕ, ಮಧ್ಯಾಹ್ನ ಮಹಾ ಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ಪೂಜೆ, ಶ್ರೀ ಭೂತ ಬಲಿ ಉತ್ಸವ, ವಸಂತ ಕಟ್ಟೆ ಪೂಜೆ, ಪ್ರಸಾದ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಜೈ ಭಜರಂದ ಬಲಿ ನಾಟಕ ಪ್ರದರ್ಶನ ಜರುಗಲಿದೆ.
ಡಿ.31 ರಂದು ಬೆಳಿಗ್ಗೆ ಗಣಹೋಮ, ದರ್ಶನ ಬಳಿ ಉತ್ಸವ, ಬಟ್ಟಲು ಕಾಣಿಕೆ ರಾಜಾಂಗಣ ಪ್ರಸಾದ ಕಲಶ ಪೂಜೆ ಕಲಶಾಭಿಷೇಕ, ಮಹಾ ಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ಪೂಜೆ ಉತ್ಸವ ಕಟ್ಟೆಪೂಜೆ ಶಯನ, ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪುಣ್ಣಮೆದ ನಾಗೆ ಯಕ್ಷಗಾನ ಪ್ರದರ್ಶನ ಜರುಗಲಿದೆ. ಜ.1 ರಂದು ಬೆಳಿಗ್ಗೆ ಗಣಹೋಮ, ಯಾತ್ರಾಹೋಮ ಕವಾಟ ಉದ್ಘಾಟನೆ, ಸಂಜೆ ಮಹಾ ರಂಗಪೂಜೆ ಆರಾಟ ಬಳಿ, ಆರಾಟ ಉತ್ಸವ ಧ್ವಜಾಅವರೋಹಣ, ಮಂಗಳ ಮಂತ್ರಾಕ್ಷತೆ ಜರುಗುವುದು. ಜ.2 ರಂದು ಬೆಳಿಗ್ಗೆ ಸಂಪ್ರೋಕ್ಷಣೆ ಜರುಗಲಿರುವುದು.

Related posts

ವಾಣಿ ಶಿಕ್ಷಣ ಸಂಸ್ಥೆಗಳ ಬಸ್ ಚಾಲಕ ಶಶಿಧರ ಗೌಡ ಪಣಿಕ್ಕಲ್ ಹೃದಯಾಘಾತದಿಂದ ನಿಧನ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಕೊಯ್ಯೂರಿನಲ್ಲಿ ಸಿಡಿಲು ಬಡಿದು ದನ ಸಾವು

Suddi Udaya

 ಮಿತ್ತಬಾಗಿಲು ಗ್ರಾ.ಪಂ. ನಿಂದ ಸ್ವಚ್ಚತಾ ಅಭಿಯಾನ 

Suddi Udaya

ಬೆಳ್ತಂಗಡಿ : ಹೋಲಿ ರಿಡೀಮರ್ ಆಂ.ಮಾ. ಶಾಲಾ ವಾರ್ಷಿಕೋತ್ಸವ

Suddi Udaya

ಅಳದಂಗಡಿಯಲ್ಲಿ ಭಕ್ತಿ ಭಾವದಿಂದ ಮೊಳಗಿದ ಹನುಮೋತ್ಸವ, ಸಾವಿರಾರು ಭಕ್ತರು ಭಾಗಿ ಕುಣಿತ ಭಜನೆ, ಹನುಮ ಯಾಗ, ಹನುಮಾನ್ ಚಾಲಿಸ ಪಠಣ, ಹನುಮ ಶ್ರೀರಕ್ಷೆ ವಿತರಣೆ, ಲಂಕಾದಹನ, ಶಿವಾಜಿ‌ ನಾಟಕ

Suddi Udaya
error: Content is protected !!