37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿ. 30: ಬಳಂಜ ಬೊಂಟ್ರೋಟ್ಟು ಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ವಾರ್ಷಿಕ ಪ್ರತಿಷ್ಠಾ ವರ್ಧಂತಿ

ಬಳಂಜ: ಬೊಂಟ್ರೋಟ್ಟು ಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ನಿಂದ ಡಿ. 30 ರಂದು ಬೊಂಟ್ರೋಟ್ಟು ಗುತ್ತು ಗ್ರಾಮ ದೈವಗಳ ಭಂಡಾರ ಚಾವಡಿಯಲ್ಲಿ ಮದ್ದಡ್ಕ ಶ್ರೀನಿವಾಸ ಅಮ್ಮಣ್ಣಾಯ ಅಸ್ರಣ್ಣರ ನೇತೃತ್ವದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ದಿನ ನಾಗದೇವರಿಗೆ ಸನ್ನಿಧಿಯಲ್ಲಿ ತನು ತಂಬಿಲ ಸೇವೆ ಮತ್ತು ಧರ್ಮರಸು ದೈವ – ಕೊಡಮಣಿತ್ತಾಯ, ಮೈಸಂದಾಯ ಕೇತುಲ್ಲಾಯ ಅಂಗಣ ಪಂಜುರ್ಲಿ, ಕಲ್ಲುರ್ಟಿ, ಕಲ್ಕುಡ, ಕ್ಷೇತ್ರ ಗುಳಿಗ ದೈವಗಳಿಗೆ ಪ್ರಧಾನ ಕಲಶಾಭಿಷೇಕ ಮತ್ತು ಪಂಚಪರ್ವ ನಡೆಯಲಿದೆ.

ಡಿ. 30 ರಂದು ಬೆಳಿಗ್ಗೆ ಗಂಟೆ 9.00ಕ್ಕೆ ಗಣಹೋಮ, ಬೆಳಿಗ್ಗೆ ಗಂಟೆ 10.00ಕ್ಕೆ ನಾಗಸನ್ನಿಧಿಯಲ್ಲಿ ತನು ತಂಬಿಲ ಸೇವೆ, ಬೆಳಿಗ್ಗೆ ಗಂಟೆ 11.30ಕ್ಕೆ ಚಾವಡಿಯಲ್ಲಿ ಪ್ರಧಾನ ಹೋಮ, ಮಧ್ಯಾಹ್ನ ಗಂಟೆ 12.15ಕ್ಕೆ ದೈವಗಳಿಗೆ, ಕಲಶಾಭಿಷೇಕ, ಪರ್ವ, ಮಧ್ಯಾಹ್ನ ಗಂಟೆ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ಮಧ್ಯಾಹ್ನ ಗಂಟೆ 1.00ಕ್ಕೆ ಅನ್ನಸಂತರ್ಪಣೆ ನಡೆಯಲಿದೆ.

Related posts

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತೆರಡನೆ ವರ್ಧಂತ್ಯುತ್ಸವ

Suddi Udaya

ನಿಡ್ಲೆ ಹಾಗೂ ಪಟ್ರಮೆಯಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅರಸಿನಮಕ್ಕಿ ಬಂಟರ ಸಂಘದ ಕಛೇರಿ ಆವರಣದ ಗೇಟ್ ಉದ್ಘಾಟನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮದ್ದಡ್ಕ : ತಾಯಿ ರಕ್ತೇಶ್ವರಿ ಹಾಗೂ ಶ್ರೀ ಪಿಲಿಚಾಮುಂಡಿ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!