26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಸರಕಾರಿ ಪ್ರೌಢ ಶಾಲೆಯ ಗಣಿತ ಶಿಕ್ಷಕಿ ಪುಷ್ಪರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

ನಾವೂರು ಸರಕಾರಿ ಪ್ರೌಢಶಾಲೆ ಯಲ್ಲಿ 14 ವರ್ಷ 5 ತಿಂಗಳುಗಳ ಕಾಲ ಸೇವೆ ಸಲ್ಲಿಸಿ ಪ್ರಸಕ್ತ ಸಾಲಿನಲ್ಲಿ ಮಂಗಳೂರಿಗೆ ವರ್ಗಾವಣೆಗೊಂಡಿರುವ ಗಣಿತ ಶಿಕ್ಷಕಿ ಶ್ರೀಮತಿ ಪುಷ್ಪ ಇವರ ಬೀಳ್ಕೊಡುಗೆ ಕಾರ್ಯಕ್ರಮ ಡಿ.20 ರಂದು ನೆರವೇರಿತು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುನಂದ, ಸದಸ್ಯರಾದ ಗಣೇಶ ಗೌಡ, ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಮಮತಾ ಪ್ರಿಯಾ ಉಪಸ್ಥಿತರಿದ್ದರು. ಅಲ್ಲದೆ ಎಸ್ ಡಿ ಯಂ ಸಿ ಉಪಾಧ್ಯಕ್ಷ ಉಮೇಶ್ ಪ್ರಭು ಹಡೀಲ್ ,ಮುಖ್ಯ ಶಿಕ್ಷಕರು ರಾಜೇಂದ್ರ ಭಟ್ ಹಾಗೂ ಶಿಕ್ಷಕ ವೃಂದ, ಪೋಷಕರು, ವಿದ್ಯಾರ್ಥಿಗಳು ಹಾಗೂ ಬಿಸಿ ಊಟ ಸಿಬ್ಬಂದಿ ಉಪಸ್ಥಿತರಿದ್ದರು.

ಮಕ್ಕಳು, ಶಿಕ್ಷಕರು ಅವರ ಬಗ್ಗೆ ಅನಿಸಿಕೆ ವ್ಯಕ್ತ ಪಡಿಸಿದರು. ವೈದ್ಯರು ಪ್ರದೀಪ್ ನಾವೂರು ಇವರ ಉಪಸ್ಥಿತಿಯಲ್ಲಿ ಪುಷ್ಪ ಅವರನ್ನು ಅಭಿನಂದಿಸಲಾಯಿತು. ಪುಷ್ಪ ರವರ ವತಿಯಿಂದ ರೂ,. 20,000 ಮೊತ್ತವನ್ನು ಎಸ್ ಎಸ್ ಎಲ್ ಸಿ ಯಲ್ಲಿ 500 ಅಂಕ ಕ್ಕಿಂತ ಹೆಚ್ಚು ಅಂಕ ಬಂದ ವಿದ್ಯಾರ್ಥಿಗಳಿಗೆ ಅದರ ಬಡ್ಡಿ ಹಣ ನೀಡಿ ಗೌರವಿಸುವ ಸಲುವಾಗಿ ಶಾಲೆಗೆ ಹಸ್ತಾಂತರ ಮಾಡಿದರು.

ಮೀನಾ ಕಾರ್ಯಕ್ರಮ ನಿರೂಪಿಸಿ, ವಿನೋದ ಸ್ವಾಗತಿಸಿ, . ಭವ್ಯ ಧನ್ಯವಾದವಿತ್ತರು.

Related posts

ಕಲ್ಮಂಜ: ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ

Suddi Udaya

ನೆರಿಯ ಆಲಂಗಾಯಿಗೆ ರೂ.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಾಲ್ಮೀಕಿ ಆಶ್ರಮ ಶಾಲೆಗೆ ಶಿಲಾನ್ಯಾಸ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಉಜಿರೆ, ಬೆಳಾಲು, ಮಾಯಾ, ಕೊಲ್ಪಾಡಿ ಗ್ರಾಮದ ಭಕ್ತಾಧಿಗಳಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಉಜಿರೆ : ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ: ಸ್ಕೂಟರ್ ನಲ್ಲಿದ್ದ ಮಹಿಳೆಗೆ ಗಂಭೀರ ಗಾಯ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ವಿಜೃಂಭಣೆಯ ಸ್ವಾತ್ರಂತ್ರ್ಯೋತ್ಸವ ಆಚರಣೆ

Suddi Udaya

ಕಡಬದ ನವ ಜೀವನ ಸದಸ್ಯರಿಂದ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
error: Content is protected !!