September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಗ್ವಾಡಿ ಬಸದಿ ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ಮಹಾರಥೋತ್ಸವ: ಧ್ವಜಾರೋಹಣ

ಮಿತ್ತಬಾಗಿಲು: ಬಂಗ್ವಾಡಿ ಬಸದಿ ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ಮಹಾರಥೋತ್ಸವವು ಡಿ.25ರಿಂದ ಡಿ. 31ರವರೆಗೆ ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರು, ದಾನಶಾಲಾ ಮಠ, ಕಾರ್ಕಳ ಇವರ ಪಾವನ ಸಾನ್ನಿಧ್ಯ ಮತ್ತು ಮಾರ್ಗದರ್ಶನದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ನೆರವೇರಲಿರುವುದು.

ಡಿ.25 ತೋರಣ ಮುಹೂರ್ತ, ವಿಮಾನ ಶುದ್ಧಿ, ಯಕ್ಷಾರಾಧನೆ, ಧ್ವಜಾರೋಹಣ, ನಿತ್ಯವಿಧಿ ಸಹಿತ ಕ್ಷೀರಾಭಿಷೇಕ ನಡೆಯಿತು.

ಸಂಜೆ 6.೦೦ರಿಂದ ಶ್ರೀ ಕ್ಷೇತ್ರಪಾಲ ದೇವರಿಗೆ ಆರಾಧನಾ ಪೂರ್ವಕ ಕಲಾರೋಪಣೆ, ಡಿ.26 ನಾಂದಿಮಂಗಲ, ಮೃತ್ತಿಕಾ ಸಂಗ್ರಹಣ, ಅಂಕುರಾರ್ಪಣೆ, ಭೇರಿತಾಡನ, ನಿತ್ಯವಿಧಿ ಸಹಿತ ಕ್ಷೀರಾಭಿಷೇಕ. ಸಂಜೆ 5.30ಕ್ಕೆ ಉಪಾಹಾರದ ವ್ಯವಸ್ಥೆ, ಡಿ.27 ವಾಸ್ತು ಶಾಂತಿ, ನಿತ್ಯವಿಧಿ ಸಹಿತ ಕ್ಷೀರಾಭಿಷೇಕ ಡಿ.28 ಶ್ರೀ ಪೀಠಯಂತ್ರಾರಾಧನೆ, ನಿತ್ಯವಿಧಿಸಹಿತ ಕ್ಷೀರಾಭಿಷೇಕ, ಡಿ.29 ನಿತ್ಯವಿಧಿ ಸಹಿತ ಬೃಹಚ್ಫಾಂತಿ ಯಂತ್ರಾರಾಧನೆ, ಪಾಲಕಿ ಉತ್ಸವ, ಕ್ಷೀರಾಭಿಷೇಕ, ಡಿ.೩೦ (ಮಧ್ಯಾಹ್ನ) ದರ್ಶನಬಲಿ, ರಥಾರೋಹಣ, ಮಹಾನೈವೇದ್ಯ ಪೂಜೆ ಸಂಘ ಸಂತರ್ಪಣೆ, ರಾತ್ರಿ ಗಂಟೆ 9.00 ರಿಂದ ಮಹಾರಥೋತ್ಸವ, ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯಲ್ಲಿ 108 ಕಲಶ ಮಹಾಭಿಷೇಕ ರಾತ್ರಿ ಗಂಟೆ 7.00ಕ್ಕೆ ಬೆಂಗಳೂರು ದೂರದರ್ಶನದ ಬಿ. ಗ್ರೇಡ್ ಕಲಾವಿದೆ ಕು| ಅನನ್ಯ ರಂಜಿನಿ, ಮೂಡಬಿದಿರೆ. ಇವರಿಂದ ಭರತನಾಟ್ಯ ನಡೆಯಲಿದೆ.

ಜ. 10 ರಂದು ಅತಿಶಯ ಕ್ಷೇತ್ರ ಶ್ರವಣಗುಂಡ ಶ್ರೀ ಬ್ರಹ್ಮಯಕ್ಷ ದೇವರ ಸನ್ನಿಧಿಯಲ್ಲಿ ಮುಡಿ ಅಕ್ಕಿ ಪೂಜೆ (ಗುಂಡುದರ್ಶನ ದಿನ), ಕುಂಕುಮೋತ್ಸವ, ಧ್ವಜಾವರೋಹಣ ನಡೆಯಲಿದೆ ಎಂದು ಸಮಿತಿಯವರು ತಿಳಿಸಿದ್ದಾರೆ.

Related posts

ಬರೆಂಗಾಯ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ಮೊಸರು ಕುಡಿಕೆ ಉತ್ಸವ; ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಾರ್ಮಾಡಿ: ತ್ರಿವರ್ಣ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟ ಮತ್ತು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಮಹಿಳಾ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya

ವಿಧಾನ ಪರಿಷತ್ ಕಲಾಪ; ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ, ಫಾರ್ಮ್-3 ನೀಡಲು ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಪುಂಜಾಲಕಟ್ಟೆ ಯುವಕ ಸೈನೇಡ್ ಸೇವಿಸಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿ ತಾಲೂಕು ಬೀಡಿ ಗುತ್ತಿಗೆ ಸಂಘದ ನೂತನ ಅಧ್ಯಕ್ಷರಾಗಿ ಸಿ. ಮಹಮ್ಮದ್ ಕಕ್ಕಿಂಜೆ, ಕಾರ್ಯದರ್ಶಿಯಾಗಿ ರಫಾಯಲ್ ವೇಗಸ್ ಆಯ್ಕೆ

Suddi Udaya
error: Content is protected !!